ಬಿಹಾರದಿಂದ ಬಂದ ಐವರಿಗೆ ಕ್ವಾರಂಟೈನ್
Team Udayavani, Jun 10, 2020, 1:19 PM IST
ಸಾಂದರ್ಭಿಕ ಚಿತ್ರ
ಭೀಮಸಮುದ್ರ: ಬಿಹಾರದಿಂದ ಗ್ರಾಮಕ್ಕೆ ಆಗಮಿಸಿದ ಕುಟುಂಬದವರನ್ನು ಹೋಂ ಕ್ವಾರಂಟೈನ್ನಲ್ಲಿ ಇಡಲಾಗಿದೆ. ಇದಕ್ಕೆ ಅಕ್ಕಪಕ್ಕದ ಮನೆಯವರು ವಿರೋಧ ವ್ಯಕ್ತಪಡಿಸಿದಾಗ ಆರೋಗ್ಯ ಇಲಾಖೆ ಅಧಿಕಾರಿಗಳು ಅವರಿಗೆ ಆರೋಗ್ಯ ಶಿಕ್ಷಣ ನೀಡಿ ಜಾಗೃತಿ ಮೂಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್. ಮಂಜುನಾಥ, ಜನರು ಭಯದಿಂದ ಹೊರಬರಬೇಕು. ಸಾಂಕ್ರಾಮಿಕ ರೋಗಗಳ ನಿಯಂತ್ರಣದಲ್ಲಿ ಸಮುದಾಯದ ಸಹಕಾರ ಅತ್ಯಗತ್ಯ. ಹೊರ ರಾಜ್ಯ ಮತ್ತು ಜಿಲ್ಲೆಗಳಿಂದ ಬರುವ ಕುಟುಂಬಗಳಿಗೆ ಜೀವಿಸುವ ಮತ್ತು ವಾಸಿಸುವ ಹಕ್ಕು ಇರುತ್ತದೆ. ನಾವೂ ಬದುಕಿ ಬೇರೆಯ ವರಿಗೂ ಬದುಕಲು ಬಿಡೋಣ ಎಂದರು.
ಕೋವಿಡ್ ನಿಯಂತ್ರಣಕ್ಕೆ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ಗ್ಲೌಸ್, ಮಾಸ್ಕ್ ಧರಿಸಿ ಕೈಗಳ ಸ್ವಚ್ಛತೆ ಬಗ್ಗೆ ಗಮನ ಹರಿಸಿ. ಬೇರೆಯವರನ್ನು ಹೋಂ ಕ್ವಾರಂಟೈನ್ ಮಾಡುವಾಗ ಪ್ರತಿರೋಧ, ಅಡ್ಡಿಪಡಿಸುವುದನ್ನು ಮಾಡಬೇಡಿ. ನಾನು ಕೋವಿಡ್ನಿಂದ ಸುರಕ್ಷಿತವಾಗಿರಬೇಕು, ನನ್ನಿಂದ ಸಮುದಾಯದಲ್ಲಿ ಕೋವಿಡ್ ಹರಡಬಾರದು. ನಿಯಂತ್ರಣ ಹೋರಾಟದಲ್ಲಿ ಆರೋಗ್ಯ ಇಲಾಖೆಗೆ ಸಮುದಾಯಕ್ಕೆ ಯಾವ ರೀತಿಯ ಸಹಕಾರ ನೀಡಬಹುದು ಎಂಬ ಬಗ್ಗೆ ಯೋಚಿಸಿ ಎಂದು ಮನವಿ ಮಾಡಿದರು.
ಬಿಹಾರದಿಂದ ಆಗಮಿಸಿದ ಐದು ಜನರ ಆರೋಗ್ಯ ತಪಾಸಣೆ ನಡೆಸಿ ಗಂಟಲು ದ್ರವವನ್ನು ಸಂಗ್ರಹಿಸಲಾಯಿತು. ಡಾ| ಸಾದಿಕ್ವುಲ್ಲಾ, ಪಿಡಿಒ ಬಸಣ್ಣ, ಗ್ರಾಮಲೆಕ್ಕಾಧಿಕಾರಿ ಬಸವರಾಜ್, ಜಿಲ್ಲಾ ಆರೋಗ್ಯ ಮೇಲ್ವಿಚಾರಕ ಖಾಸಿಂ ಸಾಬ್, ಆರೋಗ್ಯ ಸಹಾಯಕರಾದ ಮಾರುತಿ, ಪ್ರಸಾದ್, ಗೀತಾ, ಪ್ರಯೋಗಶಾಲಾ ತಂತ್ರಜ್ಞರಾದ ಮೀನಾಕ್ಷಿ, ಮಂಜುಳಾ, ಆಶಾ ಕಾರ್ಯಕರ್ತೆ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು
Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ
Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ
Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ
Road mishap: ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ; ಓರ್ವ ಸಾವು
MUST WATCH
ಹೊಸ ಸೇರ್ಪಡೆ
Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ
Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ
IPL; ಪಂಜಾಬ್ ಕಿಂಗ್ಸ್-ಮುಂಬೈ ಇಂಡಿಯನ್ಸ್ : ಒಂದೇ ದೋಣಿಯ ಪಯಣಿಗರು
Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ
ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು