Congress ನಾಯಕರ ಜೈಲಿಗೆ ಕಳುಹಿಸಲು ಬಿಜೆಪಿ-ಜೆಡಿಎಸ್ ಮೈತ್ರಿ: ಕೃಷ್ಣ ಬೈರೇಗೌಡ
Team Udayavani, Oct 10, 2023, 9:03 PM IST
ಚಿತ್ರದುರ್ಗ: ಜೆಡಿಎಸ್-ಬಿಜೆಪಿ ಮೈತ್ರಿ ಮಾಡಿಕೊಂಡಿರುವುದೇ ನಮ್ಮ ನಾಯಕರನ್ನು ಜೈಲಿಗೆ ಕಳಿಸುವುದಕ್ಕಾಗಿ ಎನ್ನುವುದು ಅವರ ಮಾತುಗಳಲ್ಲೇ ಗೊತ್ತಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯದ ಜನತೆ ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವದಿಸಿದ್ದಾರೆ. ಪ್ರಪಂಚದ ಯಾವುದೇ ಸರ್ಕಾರ ಮಾಡದ ಕ್ರಾಂತಿಕಾರಕ ಕೆಲಸವನ್ನು ನಮ್ಮ ಸರ್ಕಾರ ಮಾಡುತ್ತಿರುವುದನ್ನು ನೋಡಿ ಬಿಜೆಪಿ, ಜೆಡಿಎಸ್ನವರಿಗೆ ಸಹಿಸಿಕೊಳ್ಳಲಾಗದೆ ತೊಂದರೆ ಕೊಡುತ್ತಿದ್ದಾರೆ. ಇದಕ್ಕೆ ಜನರು ಮುಂದಿನ ದಿನಗಳಲ್ಲಿ ಪಾಠ ಕಲಿಸಲಿದ್ದಾರೆ.
ಮುಖ್ಯಮಂತ್ರಿಗಳು ಕಂದಾಯ ಇಲಾಖೆಯ ಕೆಲಸಗಳು ವೇಗವಾಗಿ ಆಗಬೇಕು ಎಂದು ಸಲಹೆ ನೀಡಿದ್ದಾರೆ. ಇದೇ ಆಶಯದೊಂದಿಗೆ ನಾನು ಕೂಡ ಎಲ್ಲ ಕಡೆ ಪ್ರವಾಸ ಮಾಡಿ ವರ್ಷಗಳಿಂದ ಬಾಕಿ ಉಳಿದಿರುವ ಕಡತಗಳನ್ನು ತ್ವರಿತವಾಗಿ ವಿಲೇವಾರಿ ಮಾಡುವ ಕೆಲಸ ಮಾಡಿಸುತ್ತಿದ್ದೇನೆ. ಹೊಸದುರ್ಗ ತಾಲೂಕು ಕಚೇರಿಯ ರೆಕಾರ್ಡ್ ರೂಂಗೆ ಭೇಟಿ ನೀಡಿದ್ದೆ. 50, 100 ವರ್ಷಗಳ ದಾಖಲೆಗಳು ಪುಡಿ ಪುಡಿಯಾಗುವ ಸ್ಥಿತಿಯಲ್ಲಿವೆ. ದಾಖಲೆಗಳ ಸ್ಥಿತಿ ಶೋಚನೀಯವಾಗಿದೆ.
ಎಲ್ಲವನ್ನೂ ಸ್ಕ್ಯಾನ್ ಮಾಡಿಸಿ ಉಳಿಸುವ ಪ್ರಯತ್ನ ಮಾಡುತ್ತೇನೆ. ಈ ವರ್ಷ ಒಂದೂವರೆ ಸಾವಿರ ಗ್ರಾಮ ಲೆಕ್ಕಿಗರು, ಒಂದು ಸಾವಿರ ಭೂ ಮಾಪಕರನ್ನು ನೇಮಕ ಮಾಡಿಕೊಂಡು ಬಾಕಿ ಇರುವ ಕೆಲಸಗಳನ್ನು ಪೂರ್ಣಗೊಳಿಸಲಿದ್ದೇವೆ. 357 ಸರ್ಕಾರಿ ಭೂಮಾಪಕರನ್ನು ನೇಮಕ ಮಾಡಲಿದ್ದೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ