ಶ್ರೀರಾಮುಲು-ರೆಡ್ಡಿಯಿಂದ ಬಿಜೆಪಿ ಹಾಳು


Team Udayavani, Feb 25, 2019, 7:40 AM IST

cta-3.jpg

ಮೊಳಕಾಲ್ಮೂರು: ಕಾಂಗ್ರೆಸ್‌, ಬಿಜೆಪಿ ಮತ್ತು ಜೆಡಿಎಸ್‌ ಪಕ್ಷಗಳಿಂದ ಆಹ್ವಾನವಿದ್ದು, ಕ್ಷೇತ್ರದ ಜನರ ಅಭಿಪ್ರಾಯ ಸಂಗ್ರಹಿಸಿ ಯಾವ ಪಕ್ಷ ಸೇರಬೇಕೆಂಬ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳುವುದಾಗಿ ಮಾಜಿ ಶಾಸಕ ಎಸ್‌. ತಿಪ್ಪೇಸ್ವಾಮಿ ಹೇಳಿದರು.

ತಾಲೂಕಿನ ಹಾನಗಲ್‌ ಪ್ರವಾಸಿಮಂದಿರದ ಆವರಣದಲ್ಲಿ ಎಸ್‌. ತಿಪ್ಪೇಸ್ವಾಮಿ ಅಭಿಮಾನಿಗಳ ಬಳಗದ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು .

ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಬಿಜೆಪಿ ಟಿಕೆಟ್‌ ನೀಡುವುದಾಗಿ ಭರವಸೆ ನೀಡಿ ಕೈಕೊಟ್ಟರು. ನಾನು ನಂಬಿಕೆ ಇಟ್ಟುಕೊಂಡಿದ್ದ ಶಾಸಕ ಬಿ. ಶ್ರೀರಾಮುಲು ನಿಮಗೆ ಬಿಜೆಪಿ ಟಿಕೆಟ್‌ ನೀಡುವುದು ಖಚಿತ. ರಕ್ತದಲ್ಲಿ ಬೇಕಾದರೂ ಬರೆದುಕೊಡುತ್ತೇನೆಂದು ತಿಳಿಸಿ ವಂಚಿಸಿದ್ದಾರೆ. ಶಾಸಕ ಬಿ. ಶ್ರೀರಾಮುಲು ಮತ್ತು ಮಾಜಿ ಸಚಿವ ಜನಾರ್ದನ ರೆಡ್ಡಿ ಅವರಿಂದ ಬಿಜೆಪಿ ಹಾಳಾಗುತ್ತಿದೆ ಎಂದು ವಾಗ್ಧಾಳಿ ನಡೆಸಿದರು.

ನನ್ನ ಬೆಂಬಲಕ್ಕೆ ನಿಂತ ಎಸ್‌ಸಿ-ಎಸ್‌ಟಿ ಹಾಗೂ ಹಿಂದುಳಿದ ಅಲ್ಪಸಂಖ್ಯಾತರು ಸೇರಿದಂತೆ ಇನ್ನಿತರ ಅಮಾಯಕರ ಮೇಲೆ ಲಾಠಿ ಪ್ರಹಾರ ಮಾಡಿಸಿ ಅವರನ್ನು ಜೈಲಿಗಟ್ಟಿದರು. ಇಂತಹ ವಂಚಕರ ಸಹವಾಸದಿಂದ ದೂರ ಉಳಿದು ಕಾರ್ಯಕರ್ತರ ತೀರ್ಮಾನದಂತೆ ಮುಂದುವರೆಯುತ್ತೇನೆ ಎಂದರು.

ಕ್ಷೇತ್ರದಲ್ಲಿ ಭೀಕರ ಬರ ಆವರಿಸಿ ಮೇವು, ನೀರಿನ ಕೊರತೆ ಎದುರಾಗಿದ್ದರೂ ಗೋಶಾಲೆ ಪ್ರಾರಂಭಿಸಿ ಜನರ ಸಮಸ್ಯೆ ನಿವಾರಣೆ ಮಾಡಿಲ್ಲ. ಜನರ ಕೈಗೆ ಸಿಗದೆ ಸಮಸ್ಯೆಗಳಿಗೆ ಸ್ಪಂದಿಸದ ಶಾಸಕರ ಬಗ್ಗೆ ಜನರು ಜಾಗರೂಕರಾಗಿರಬೇಕು. ಮುಂದಿನ ದಿನಗಳಲ್ಲಿ ಕ್ಷೇತ್ರದ ಸರ್ವ ಸಮುದಾಯಗಳ ಅಭಿವೃದ್ಧಿಗೆ ಶ್ರಮಿಸುವುದಾಗಿ ತಿಳಿಸಿದರು. 

ಜಿಪಂ ಮಾಜಿ ಸದಸ್ಯ ಕೆ. ಜಗಲೂರಯ್ಯ ಮಾತನಾಡಿ, ಚುನಾವಣೆಯಲ್ಲಿ ಸೋಲು-ಗೆಲುವು ಅನಿವಾರ್ಯ. ಕ್ಷೇತ್ರದಲ್ಲಿ ಸಾಕಷ್ಟು ಸಮಸ್ಯೆಗಳಿದ್ದರೂ ಜನಸಾಮಾನ್ಯರು ಯಾರನ್ನೂ ಕೇಳದಂತಾಗಿದೆ. ಕ್ಷೇತ್ರದಲ್ಲಿ ಕಾಂಗ್ರೆಸ್‌ ಬಗ್ಗೆ ಒಲವಿದ್ದು, ತಿಪ್ಪೇಸ್ವಾಮಿಯವರು ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಗೊಂಡು ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಮನವಿ ಮಾಡಿದರು.

ಮುಖಂಡ ವೆಂಕಟೇಶ್‌ ಹಾಗೂ ಚಲನಚಿತ್ರ ನಿರ್ದೇಶಕ ಜಿ. ಶ್ರೀನಿವಾಸಮೂರ್ತಿ ಮಾತನಾಡಿದರು. ಸಭೆಗೆ ಆಗಮಿಸಿದ್ದ ಬಹುತೇಕ ಜನರು, ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಗೊಳ್ಳುವುದು ಸೂಕ್ತ ಎಂದು ಸಲಹೆ ನೀಡಿದರು.

ಮುಖಂಡರಾದ ರಾಜಶೇಖರ ಗಾಯಕವಾಡ್‌, ಎಸ್‌.ಟಿ. ಚಂದ್ರಣ್ಣ, ಗುರುರಾಜ್‌, ನಿಂಗಣ್ಣ, ಕಲ್ಲೇಶ್‌, ವೈ.ಡಿ. ಬಸವರಾಜ್‌, ಡಿ.ಒ. ಮುರಾರ್ಜಿ, ಜಿ.ಪಿ. ಸುರೇಶ್‌, ಕೌಸರ್‌ ಬೇಗ್‌, ಡಿ.ಸಿ.ನಾಗರಾಜ್‌, ಡಿ. ಬಸವರಾಜ್‌, ಜಿ. ಮಂಜುನಾಥ, ಕರಿಬಸಪ್ಪ, ಆರ್‌. ಮಲ್ಲಿಕಾರ್ಜುನ, ಕೆ.ಜಿ.ನಾಗರಾಜ್‌ ಮತ್ತಿತರರು ಇದ್ದರು.

ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷದ ಸರ್ಕಾರ ಇದ್ದಾಗ ಶಾಸಕನಾಗಿ ಕ್ಷೇತ್ರದ ಅಭಿವೃದ್ಧಿಗೆ ಶಕ್ತಿ ಮೀರಿ ಶ್ರಮಿಸಿದ್ದೇನೆ. ಆದರೆ ರಾಜಕೀಯದ ಗಂಧ ಗಾಳಿ ಗೊತ್ತಿಲ್ಲದವರು, ನಾಚಿಕೆ ಮಾನ ಮರ್ಯಾದೆ ಇಲ್ಲದವರು ನಾನು ಕೈಗೊಂಡ ಅಭಿವೃದ್ಧಿ ಕಾರ್ಯಗಳನ್ನು ತಾವು ಮಾಡಿದ್ದಾಗಿ ಸುಳ್ಳು ಹೇಳುತ್ತಿರುವುದು ನಾಚಿಕೆಗೇಡು. 
 ಎಸ್‌. ತಿಪ್ಪೇಸ್ವಾಮಿ, ಮಾಜಿ ಶಾಸಕ. 

ಟಾಪ್ ನ್ಯೂಸ್

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.