ಕೋವಿಡ್ ನಿಂದ ಗುಣಮುಖನಾದ ವ್ಯಕ್ತಿಯ ಚರ್ಮದಲ್ಲಿ ಬ್ಲಾಕ್ ಫಂಗಸ್ ಪತ್ತೆ


Team Udayavani, Jun 1, 2021, 2:17 PM IST

ಕೋವಿಡ್ ನಿಂದ ಗುಣಮುಖನಾದ ವ್ಯಕ್ತಿಯ ಚರ್ಮದಲ್ಲಿ ಬ್ಲಾಕ್ ಫಂಗಸ್ ಪತ್ತೆ

ಚಿತ್ರದುರ್ಗ: ಕೋವಿಡ್ ಸೋಂಕಿನಿಂದ ಗುಣಮುಖರಾಗಿದ್ದ ಚಿತ್ರದುರ್ಗದ 50 ವರ್ಷದ ವ್ಯಕ್ತಿಯೊಬ್ಬರ ಕಿವಿ ಭಾಗದ ಚರ್ಮದ ಬಳಿ ಬ್ಲಾಕ್ ಫಂಗಸ್ (ಕಪ್ಪು ಶಿಲೀಂಧ್ರ) ಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ.

ಚಿತ್ರದುರ್ಗದಲ್ಲಿ ಪತ್ತೆಯಾಗಿರುವ ಈ ಚರ್ಮದ ಫಂಗಸ್ ಪ್ರಕರಣ ದೇಶದಲ್ಲೇ ಮೊದಲ ಪ್ರಕರಣ ಎಂದು ವೈದ್ಯರು ಹೇಳಿದ್ದಾರೆ.

ಚಿತ್ರದುರ್ಗದ ಕಿವಿ, ಮೂಗು ಹಾಗೂ ಗಂಟಲು ತಜ್ಞರಾದ ಡಾ|ಎನ್.ಬಿ. ಪ್ರಹ್ಲಾದ್ ಅವರ ಕರ್ನಾಟಕ ಕಿವಿ, ಮೂಗು ಹಾಗೂ ಗಂಟಲು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ಈ ಪ್ರಕರಣ ಪತ್ತೆಯಾಗಿದೆ.

54 ವರ್ಷದ ರೋಗಿಯು ಒಂದು ತಿಂಗಳ ಹಿಂದೆ ತೀವ್ರವಾದ ಕೋವಿಡ್-19 ರೋಗದಿಂದ ಬಳಲಿದ್ದು , ಈಗ ತಾನೇ ಚೇತರಿಸಿಕೊಂಡಿದ್ದರು. ಅನಿಯಂತ್ರಿತ ಮಧುಮೇಹ ರೋಗದಿಂದ ಕೂಡ ಬಳಲುತ್ತಿದ್ದರು. ಇದೇ ಸಂದಂರ್ಭದಲ್ಲಿ ಬಲ ಭಾಗದ ಕಿವಿಯ ಮೇಲ್ಬಾಗ ಹಾಗೂ ಕಿವಿಯ ಪಕ್ಕದ ಚರ್ಮವು ಕಪ್ಪಾಗಿ ನಶಿಸಿಹೋಗಿತ್ತು. ಇದರಿಂದ ವಿಪರೀತ ನೋವು ಬಾಧಿಸುತ್ತಿತ್ತು.

ಇದನ್ನೂ ಓದಿ:ಸುಧಾಕರಣ್ಣಾ.. ನೀನು ಮೊದಲು ಔಷಧಿ ಕೊಡಿಸುವ ಕೆಲಸ ಮಾಡು: ಡಿ ಕೆ ಶಿವಕುಮಾರ್

ಡಾ| ಪ್ರಹ್ಲಾದ್ ಬಳಿ ತಪಾಸಣೆಗೆಂದು ಬಂದಾಗ ಇದನ್ನು ಕೂಲಂಕುಷವಾಗಿ ಪರೀಕ್ಷಿಸಿ ನಂತರ ಕಿರು ಶಸ್ತ್ರಕ್ರಿಯೆಯ ಮೂಲಕ ಕಪ್ಪಾಗಿ ನಶಿಸಿಹೋದ ಕಿವಿಯ ಮೇಲ್ಬಾಗ ಹಾಗೂ ಕಿವಿಯ ಪಕ್ಕದ ಚರ್ಮದ ಭಾಗಗಳನ್ನು ತೆಗೆದು ಹೆಚ್ಚಿನ ಪರೀಕ್ಷೆಗೆ ಕಳುಹಿಸಿದ್ದರು. ಈ ಸಮಯದಲ್ಲಿ ರೋಗಿಯಲ್ಲಿನ ಕಪ್ಪು ಫಂಗಸ್ ಸೋಂಕು ಕಿವಿಯ ಸುತ್ತಲಿನ ಮತ್ತು ತಲೆಯ ಮೇಲ್ಬಾಗದ ಚರ್ಮಕ್ಕೆ ಇನ್ನೂ ಹೆಚ್ಚಾಗಿ ಹರಡಿರುವುದನ್ನು, ತಜ್ಞ ಡಾ|| ಪ್ರಹ್ಲಾದ್ ಗುರುತಿಸಿದ್ದಾರೆ.

ಚಿತ್ರದುರ್ಗದ ವಾಸವಿ ಲ್ಯಾಬರೇಟರಿಯ ಡಾ|. ನಾರಾಯಣ ಮೂರ್ತಿ, ಬಸವೇಶ್ವರ ವೈದ್ಯಕೀಯ ಮಹಾವಿದ್ಯಾಲಯದ, ಮೈಕ್ರೋಬಯಾಲಜಿ ವಿಭಾಗದ ಪ್ರಾಧ್ಯಾಪಕ ಡಾ. ಸುಧೀಂದ್ರರವರು ಸಹ ಚರ್ಮದ ಕಪ್ಪು ಫಂಗಸ್ ಸೋಂಕನ್ನು ದೃಢಪಡಿಸಿದ್ದಾರೆ.

ಪ್ರಸ್ತುತ ರೋಗಿಗೆ ಕಪ್ಪು ಫಂಗಸ್ ಸೋಂಕಿನಿಂದ ಹಾನಿಗೊಂಡಿರುವ ಚರ್ಮವನ್ನು ಸಂಪೂರ್ಣವಾಗಿ ತೆಗೆದುಹಾಕಿ ಆಂಪೋಟೆರಿಸಿನ್-ಬಿ ಚುಚ್ಚುಮದ್ದನ್ನು ನೀಡಿ ಮೊದಲ ಹಂತದ ಚಿಕಿತ್ಸೆಯನ್ನು ಮಾಡಬೇಕಾಗಿದೆ. ಎರಡನೇಯ ಹಂತದಲ್ಲಿ ಕಪ್ಪು ಫಂಗಸ್ ಸೋಂಕಿನಿಂದ ಸಂಪೂರ್ಣವಾಗಿ ರೋಗಿಯು ಗುಣಮುಕ್ತರಾಗಿದ್ದಾರೆ ಎಂಬುದನ್ನು ಖಾತ್ರಿಪಡಿಸಿಕೊಂಡು ಚರ್ಮದ ಕಸಿಯನ್ನು ಮಾಡಬೇಕಾಗಿರುತ್ತದೆ. ಇಲ್ಲಿಯವರೆಗೆ ಚಿತ್ರದುರ್ಗ ಜಿಲ್ಲೆಯಲ್ಲಿ 18 ಕಪ್ಪು ಫಂಗಸ್ ಸೋಂಕಿನಿಂದ ಬಳಲುತ್ತಿರುವ ರೋಗಿಗಳಿಗೆ, ಕರ್ನಾಟಕ ಕಿವಿ, ಮೂಗು ಹಾಗೂ ಗಂಟಲು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ, ಚಿತ್ರದುರ್ಗದಲ್ಲಿ ಶಸ್ತ್ರಕ್ರಿಯೆಯನ್ನು ನಡೆಸಲಾಗಿರುತ್ತದೆ. ಸಂಪೂರ್ಣ ಚಿಕಿತ್ಸೆಗೆ ಇವರೆಲ್ಲರಿಗೂ ಆಂಪೋಟೆರಿಸಿನ್-ಬಿ ಚುಚ್ಚುಮದ್ದು ಅತ್ಯಗತ್ಯವಿದೆ.

ಚಿತ್ರದುರ್ಗ ಜಿಲ್ಲೆಯಲ್ಲಿ ಇದುವರೆವಿಗೆ 48 ಕಪ್ಪು ಫಂಗಸ್ ಕೇಸುಗಳು ವರದಿಯಾಗಿದ್ದು ಜಿಲ್ಲಾಧಿಕಾರಿಗಳು, ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಮತ್ತು ಜಿಲ್ಲಾ ಶಸ್ತ್ರಚಿತ್ಸಕರ ನೇತೃತ್ವದಲ್ಲಿ ಜಿಲ್ಲಾಸ್ಪತ್ರೆ ಸೇರಿದಂತೆ ವಿವಿಧ ಆಸ್ಪತ್ರೆಗಳಲ್ಲಿ ಈ ರೋಗಿಗಳ ಚಿಕಿತ್ಸೆ ನೀಡಲಾಗುತ್ತಿದೆ

ಟಾಪ್ ನ್ಯೂಸ್

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

20

Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.