ಅಂತರ್ಜಲ ವೃದ್ಧಿಗೆ ಚೆಕ್‌ಡ್ಯಾಂ ನಿರ್ಮಿಸಿ: ಕೃಷ್ಣಭೈರೇಗೌಡ


Team Udayavani, Nov 24, 2018, 4:22 PM IST

cta-2.jpg

ಮೊಳಕಾಲ್ಮೂರು: ತಾಲೂಕಿನಲ್ಲಿ ಹೆಚ್ಚಿನ ಹಳ್ಳಗಳು ಹರಿಯುತ್ತಿರುವುದರಿಂದ ಅಂತರ್ಜಲ ವೃದ್ಧಿಸಿ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲು ಹೆಚ್ಚಿನ ಪ್ರಮಾಣದಲ್ಲಿ ಚೆಕ್‌ ಡ್ಯಾಂ ನಿರ್ಮಾಣಕ್ಕೆ ಆದ್ಯತೆ ನೀಡಬೇಕು ಎಂದು ಪಂಚಾಯತ್‌ ರಾಜ್‌ ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಕೃಷ್ಣಭೈರೇಗೌಡ ಅಧಿಕಾರಿಗಳಿಗೆ ಸೂಚಿಸಿದರು.

ತಾಲೂಕಿನ ರಾಂಪುರ ಗ್ರಾಪಂ ವ್ಯಾಪ್ತಿಯಲ್ಲಿ ನಿರ್ಮಾಣಗೊಂಡ ಮಲ್ಟಿ ಆರ್‌ ಚೆಕ್‌ ಡ್ಯಾಂಗೆ ಭೇಟಿ ನೀಡಿ ಪೂರ್ಣಗೊಂಡ ಕಾಮಗಾರಿ ವೀಕ್ಷಿಸಿ ಅವರು ಮಾತನಾಡಿದರು.

ತಾಲೂಕಿನಲ್ಲಿ ಸತತವಾಗಿ ಮಳೆಯ ಕೊರತೆಯಿದ್ದರೂ ಅಲ್ಪ ಮಳೆಗೆ ಕೆಲವೆಡೆ ನಿರ್ಮಾಣಗೊಂಡ ಮಲ್ಟಿ ಆರ್‌ ಚೆಕ್‌ ಡ್ಯಾಂನಲ್ಲಿ ಹೆಚ್ಚಿನ ಪ್ರಮಾಣ ನೀರು ಸಂಗ್ರಹವಾಗಿದೆ. ಹೆಚ್ಚಿನ ಹಳ್ಳಗಳು ಹರಿಯುತ್ತಿರುವ ಪರಿಣಾಮ ಮಳೆಯ ನೀರನ್ನು ಹರಿಬಿಡದಂತೆ ಸಂಗ್ರಹಿಸಿ ಅಂತರ್ಜಲ ಹೆಚ್ಚಿಸಲು ಹೆಚ್ಚಿನ ಪ್ರಮಾಣದಲ್ಲಿ ಮಲ್ಟಿ ಆರ್‌ ಚೆಕ್‌ ಡ್ಯಾಂ ನಿರ್ಮಾಣಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದಲ್ಲಿ ಜನಜಾನುವಾರುಗಳಿಗೆ ಕುಡಿಯುವ ನೀರಿನ ಕೊರತೆ ನಿವಾರಿಸಬಹುದಾಗಿದೆ ಎಂದರು.

ಸಹಾಯಕ ಕಾರ್ಯಪಾಲಕ ಅಭಿಯಂತರ ಬಾಲಕೃಷ್ಣ ಮಾತನಾಡಿ, ನಿಯಮಾನುಸಾರ ಹೆಚ್ಚಿನ ಮಲ್ಟಿ ಆರ್ ಚೆಕ್‌ ಡ್ಯಾಂಗಳನ್ನು ನಿರ್ಮಾಣ ಮಾಡಲು ಮೇಲಧಿಕಾರಿಗಳ ಅನುಮೋದನೆ ಪಡೆದು ಈ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ನಂತರ ತಾಲೂಕಿನ ತಮ್ಮೇನಹಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಚೆಕ್‌ ಡ್ಯಾಂ ಹೂಳೆತ್ತುವ ಕಾಮಗಾರಿ ವೀಕ್ಷಿಸಿದರು. ಅಲ್ಲಿಂದ ಹಾನಗಲ್‌ ಗ್ರಾಪಂ ವ್ಯಾಪ್ತಿಯ ಪೂಜಾರಹಟ್ಟಿ ಗ್ರಾಮದಲ್ಲಿ ನರೇಗಾ ಯೋಜನೆಯಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ಎಸ್‌. ತಿಪ್ಪಣ್ಣ ನ ತೋಟದಲ್ಲಿ ಬೆಳೆದ ನುಗ್ಗೇಕಾಯಿ ಬೆಳೆಯ ಬಗ್ಗೆ ಪರಿಶೀಲಿಸಿದರು. ನಿಗಗೊಂಡಿದ್ದ ಹಾನಗಲ್‌ ಪ್ರವಾಸಿ ಮಂದಿರ , ತಾಲೂಕಿನ ಸಿದ್ದಯ್ಯನಕೋಟೆ , ಮುತ್ತಿಗಾರ ಹಳ್ಳಿ ಗಳಿಗೆ ಭೇಟಿ ನೀಡದೆ ತೆರಳಿದರು.

ಸಂಸದ ಬಿ.ಎನ್‌. ಚಂದ್ರಪ್ಪ, ಜಿಪಂ ಅಧ್ಯಕ್ಷೆ ಸೌಭಾಗ್ಯಮ್ಮ ಬಸವರಾಜನ್‌, ಉಪಾಧ್ಯಕ್ಷೆ ಎನ್‌. ವೈ. ಸುಶೀಲಮ್ಮ, ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷ ಮುಂಡ್ರಿಗಿ ನಾಗರಾಜ್‌, ಸದಸ್ಯರಾದ ಡಾ| ಬಿ. ಯೋಗೇಶ್‌ ಬಾಬು, ಓಬಳೇಶ್‌, ಸಿಇಒ ರವೀಂದ್ರ, ತೋಟಗಾರಿಕೆ ಉಪ ನಿರ್ದೇಶಕಿ ಸವಿತಾ, ಜಿಪಂ ಉಪ ಕಾರ್ಯದರ್ಶಿ ಬಸವರಾಜ್‌, ಜಿಪಂ ಯೋಜನಾಧಿಕಾರಿ ಓಂಕಾರಪ್ಪ, ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ವೀರೇಶ್‌, ಸದಸ್ಯ ಎ.ಕೆ. ಮಂಜುನಾಥ, ತಾಪಂ ಇಒ ಡಾ| ಶ್ರೀಧರ್‌ ಐ ಬಾರಕೇರ್‌ ಇತರರು ಇದ್ದರು. 

ಟಾಪ್ ನ್ಯೂಸ್

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

BY Raghavendra ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸ್‌ ದಾಖಲು

BY Raghavendra ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸ್‌ ದಾಖಲು

Gas ಸಿಲಿಂಡರ್ ಸ್ಫೋಟ: ಮನೆ ಸಂಪೂರ್ಣ ಭಸ್ಮ

Gas ಸಿಲಿಂಡರ್ ಸ್ಫೋಟ: ಮನೆ ಸಂಪೂರ್ಣ ಭಸ್ಮ

ಬೈಕ್ ಗೆ ಡಿಕ್ಕಿ ಹೊಡೆದ ಟಾಟಾ ಏಸ್… ಓರ್ವ ಸ್ಥಳದಲ್ಲೇ ಮೃತ್ಯು, ಇನ್ನೋರ್ವ ಗಂಭೀರ

ಬೈಕ್ ಗೆ ಡಿಕ್ಕಿ ಹೊಡೆದ ಟಾಟಾ ಏಸ್… ಓರ್ವ ಸ್ಥಳದಲ್ಲೇ ಮೃತ್ಯು, ಇನ್ನೋರ್ವ ಗಂಭೀರ

ISRO Success: ಅಂತರಿಕ್ಷ ನೌಕೆ ‘ಪುಷ್ಪಕ್‌’ ಲ್ಯಾಂಡಿಂಗ್ ಪರೀಕ್ಷೆ ಯಶಸ್ವಿ…

ISRO ಸಾಧನೆ: ಅಂತರಿಕ್ಷ ನೌಕೆ ‘ಪುಷ್ಪಕ್‌’ ಲ್ಯಾಂಡಿಂಗ್ ಪರೀಕ್ಷೆ ಯಶಸ್ವಿ…

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.