ಆರೋಗ್ಯಕರ ಸಮಾಜ ನಿರ್ಮಿಸಿ
Team Udayavani, Mar 3, 2019, 10:11 AM IST
ದೇವದುರ್ಗ: ಸರ್ಕಾರದ ಆರೋಗ್ಯ ಯೋಜನೆಗಳ ಪ್ರಯೋಜನ ಪಡೆದು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಕಂಕಣಬದ್ಧರಾಗಬೇಕು ಎಂದು ಸಂಸದ ಬಿ.ವಿ. ನಾಯಕ ಹೇಳಿದರು.
ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೊಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಯಚೂರು ವಿಜ್ಞಾನ ಸಂಸ್ಥೆ, ನವೋದಯ ವೈದ್ಯಕೀಯ ಮಹಾ ವಿದ್ಯಾಲಯ, ಭಾರತೀಯ ವೈದ್ಯಕೀಯ ಸಂಸ್ಥೆ ಸಹಯೋಗದಲ್ಲಿ ಶನಿವಾರ ಸಮೀಪದ ಅರಕೇರಾ ಗ್ರಾಮದ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಬೃಹತ್ ಆರೋಗ್ಯ ಮೇಳ ಉದ್ಘಾಟಿಸಿ ಅವರು ಮಾತನಾಡಿದರು.
ಗ್ರಾಮೀಣ ಪ್ರದೇಶ ಜನರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸುವ ಉದ್ದೇಶದಿಂದ ಆರೋಗ್ಯ ಮೇಳ ಆಯೋಜಿಸಲಾಗಿದೆ. ಆರೋಗ್ಯ ಮತ್ತು ಶಿಕ್ಷಣ
ಕ್ಷೇತ್ರಗಳಲ್ಲಿ ಇನ್ನೂ ಕ್ರಾಂತಿಯಾಗಬೇಕಿದೆ. ರಾಯಚೂರು ಜಿಲ್ಲೆಯಲ್ಲಿ ಮಹಿಳೆಯರು, ಮಕ್ಕಳಲ್ಲಿ ಅಪೌಷ್ಟಿಕತೆ ಸಮಸ್ಯೆ ಗಂಭೀರವಾಗಿದೆ. ಈ ನಿಟ್ಟಿನಲ್ಲಿ ರಾಜ್ಯ ಸರಕಾರ ರಾಯಚೂರು ಜಿಲ್ಲೆಯಲ್ಲಿ ಪೌಷ್ಟಿಕತೆ ಹೆಚ್ಚಿಸಲು ಅನೇಕ ಕಾರ್ಯಕ್ರಮ ಜಾರಿಗೊಳಿಸಿದೆ. ಇತ್ತೀಚೆಗೆ ಗರ್ಭಿಣಿಯರಿಗೆ, ಬಾಣಂತಿಯರಿಗೆ ಮಾತೃಪೂರ್ಣ ಯೋಜನೆ ಪರಿಣಾಮಕಾರಿಯಾಗಿ ಜಾರಿಗೊಂಡಿದ್ದು, ಉತ್ತಮ ಸ್ಪಂದನೆ ದೊರಕಿದೆ ಎಂದರು.
ಜಿಲ್ಲೆಯಲ್ಲಿ ಅತೀ ಹೆಚ್ಚು ದೊಡ್ಡಿ, ತಾಂಡಾಗಳಲ್ಲಿ ಜನ ತಮ್ಮ ಜಮೀನುಗಳಲ್ಲಿಯೇ ಮನೆ ನಿರ್ಮಿಸಿಕೊಂಡು ವಾಸಿಸುವುದು ಸಾಮಾನ್ಯ.ಇಂಥ ಪ್ರದೇಶದ ಜನತೆಗೆ ಉತ್ತಮ ಆರೋಗ್ಯ ಮತ್ತು ಶಿಕ್ಷಣ ಸೇವೆ ಒದಗಿಸುವುದು ಅತ್ಯಗತ್ಯ ಎಂದರು. ರಾಯಚೂರು ಲೋಕಸಭಾ ಕ್ಷೇತ್ರ ಕೇಂದ್ರ ಸರಕಾರದಿಂದ ಅತಿ ಹಿಂದುಳಿದ ಪ್ರದೇಶ ಎಂದು ಗುರುತಿಸಿ, ನೀತಿ ಅಯೋಗದ ಸರ್ವೆ ಆಧರಿಸಿ ವರದಿ ನೀಡಿದೆ. ಇನ್ನೂ ವಿಶೇಷ ಸೌಲಭ್ಯಗಳು ದೊರಕಲಿವೆ. ಕಲಂ371 ತಿದ್ದುಪಡಿ ಸೌಲಭ್ಯದ ಪ್ರಕಾರ ಈ ಪ್ರದೇಶಕ್ಕೆ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳಿಗೆ ಹೆಚ್ಚು ಅನುದಾನ ಲಭ್ಯವಾಗಲಿದೆ. ಸಾರ್ವಜನಿಕರು ಸರಕಾರದ ಸೌಲಭ್ಯಗಳನ್ನು ಪಡೆದುಕೊಂಡು ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದರು.
ಜಿಪಂ ಸದಸ್ಯೆ ಜಯಶ್ರೀ ಶರಣಗೌಡ ಮಾಲಿಪಾಟೀಲ, ತಾಪಂ ಸದಸ್ಯ ಗೋವಿಂದರಾಜ್ ಚಿಕ್ಕಗುಡ್ಡ, ಅಮರೇಗೌಡ ಹಂಚಿನಾಳ, ಗಂಗಪ್ಪಯ್ಯ ಪೂಜಾರಿ, ಆದನಗೌಡ ಪಾಟೀಲ ಬುಂಕಲದೊಡ್ಡಿ, ತಿಮ್ಮಪ್ಪ ನಾಯಕ, ಅಬ್ದುಲ್ ಅಜೀಜ್, ಮೋನಪ್ಪ ನಾಯಕ ಕ್ಯಾದಿಗೇರಾ, ಭೂತಪ್ಪ ಹೇರುಂಡಿ,
ಮಹಾದೇವ ಪಾಟೀಲ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಎಂ.ಕೆ.ನಾಸೀರ್, ತಾಲೂಕು ಆರೋಗ್ಯ ಅಧಿಕಾರಿ ಡಾ| ಬನದೇಶ ಇದ್ದರು. ಡಾ| ಸುರೇಂದ್ರಬಾಬು, ಡಾ| ಲಕ್ಷ್ಮೀಬಾಯಿ, ಡಾ| ಗಣೇಶ, ಎಂ.ಡಿ. ಶಾಕೀರ್, ಡಾ| ಶೋಭಾ ಸಿದ್ದೇಶ, ಡಾ| ಶ್ರೀನಿವಾಸರಾವ್ ಕುಲಕರ್ಣಿ, ಡಾ| ಹುಲಿಮನಿ, ಡಾ| ವಿಶ್ವನಾಥ ಬಣಗಾರ, ಡಾ| ಭಾರತಿ ಇತರರು ರೋಗಿಗಳ ತಪಾಸಣೆ ನಡೆಸಿದರು. 650 ರೋಗಿಗಳನ್ನು ತಪಾಸಣೆ ಮಾಡಿ, 3 ರೋಗಿಗಳನ್ನು ಕಿದ್ವಾಯಿ ಆಸ್ಪತ್ರೆಗೆ, 20 ಜನರನ್ನು ನೇತ್ರ ಶಸ್ತ್ರ ಚಿಕಿತ್ಸೆಗೆ ಕಳುಹಿಸಲಾಯಿತು. ಬಸವರಾಜ ಬ್ಯಾಗವಾಟ, ಸುಗೂರೇಶ್ವರ ಗುಡಿ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ
Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು
ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!