ಕಟ್ಟಡ ಕಾರ್ಮಿಕರ ವಿವಿಧ ಬೇಡಿಕೆ ಈಡೇರಿಕೆಗೆ ಮನವಿ
Team Udayavani, Jun 12, 2021, 12:41 PM IST
ಚಿತ್ರದುರ್ಗ: ಕೋವಿಡ್ ಎರಡನೇ ಹಂತದ ಅಲೆ ಲಾಕ್ಡೌನ್ನಿಂದಾಗಿ ಕೆಲಸವಿಲ್ಲದೆ ಸಂಕಷ್ಟಕ್ಕೆ ಸಿಲುಕಿರುವ ಕಟ್ಟಡ ಕಾರ್ಮಿಕರಿಗೆ ತಿಂಗಳಿಗೆ ಹತ್ತು ಸಾವಿರ ರೂ. ಪರಿಹಾರ ಘೋಷಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಪರ ಜಿಲ್ಲಾಧಿಕಾರಿ ಮೂಲಕ ಕಾರ್ಮಿಕ ಸಚಿವಶಿ ವರಾಂ ಹೆಬ್ಟಾರ್ ಅವರಿಗೆ ಮನವಿ ಸಲ್ಲಿಸಲಾಯಿತು.
ಕಟ್ಟಡ ಕಾರ್ಮಿಕರಿಗೆ ರಾಜ್ಯ ಸರ್ಕಾರದಿಂದ ಮೂರು ಸಾವಿರ ರೂ. ಪರಿಹಾರ ಘೋಷಿಸಿರುವುದು ಯಾವುದಕ್ಕೂ ಸಾಲುವುದಿಲ್ಲ. ಅದಕ್ಕಾಗಿ ಹತ್ತು ಸಾವಿರ ರೂ. ಪರಿಹಾರ ಘೋಷಿಸಿ ಕೂಡಲೆ ಕಟ್ಟಡ ಕಾರ್ಮಿಕರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಬೇಕು. ಮೂರು ತಿಂಗಳಿಗಾಗುವಷ್ಟು ಹದಿನಾಲ್ಕು ಅಗತ್ಯ ವಸ್ತುಗಳುಳ್ಳ ಗುಣಮಟ್ಟದ ರೇಷನ್ ಕಿಟ್ ಗಳನ್ನು ಕಾರ್ಮಿಕರ ಕುಟುಂಬಗಳಿಗೆ ನೀಡಬೇಕು. ಮೇ 15 ರಿಂದ ತೀವ್ರತರನಾದ ಹೋರಾಟ ನಡೆಸುತ್ತಿದ್ದರೂ ಸರ್ಕಾರ ಕೇವಲ ಮೂರು ಸಾವಿರ ರೂ. ಪರಿಹಾರ ಘೋಷಿಸಿ ಕಟ್ಟಡ ಕಾರ್ಮಿಕರ ಕಣ್ಣೊರೆಸುವ ತಂತ್ರ ಅನುಸರಿಸುತ್ತಿದೆ. ಕಟ್ಟಡ ಕಾರ್ಮಿಕರಿಗೆ ಹಾಗೂ ಅವರ ಕುಟುಂಬದವರಿಗೆ ಉಚಿತ ಲಸಿಕೆ ನೀಡಬೇಕು. ಈಗ ಘೋಷಿಸಿರುವ ಮೂರು ಸಾವಿರ ರೂ.ಗಳ ಪರಿಹಾರದ ಜತೆಗೆ ಇನ್ನು ಏಳು ಸಾವಿರ ರೂ.ಗಳನ್ನುಘೋಷಿಸಿ ಮೂರು ತಿಂಗಳ ಕಾಲ ನೀಡಬೇಕೆಂದು ಸಿಐಟಿಯು ಜಿಲ್ಲಾ ಸಹ ಸಂಚಾಲಕ ಸಿ.ಕೆ.ಗೌಸ್ಪೀರ್ ಸರ್ಕಾರವನ್ನು ಒತ್ತಾಯಿಸಿದರು.
ಕಟ್ಟಡ ಕಾರ್ಮಿಕರ ಸಮಿತಿ ಜಿಲ್ಲಾಧ್ಯಕ್ಷ ಬಿ.ಸಿ.ನಾಗರಾಜಚಾರಿ, ಸಂಘಟನಾ ಕಾರ್ಯದರ್ಶಿ ಜೆ.ಹನುಮಂತ,ಸಹ ಕಾರ್ಯದರ್ಶಿ ಭಾಸ್ಕರಚಾರಿ,ಕುಮಾರ್, ಟಿ.ರಾಘವೇಂದ್ರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು
Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ