ಕಟ್ಟಡ ಕಾರ್ಮಿಕರಿಗೆ ಸರ್ಕಾರಿ ಸೌಲಭ್ಯ ದೊರೆಯಲಿ
Team Udayavani, Nov 11, 2020, 9:26 PM IST
ಚಿತ್ರದುರ್ಗ: ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ನಿಜವಾದ ಕಾರ್ಮಿಕರಿಗೆ ಸೌಲಭ್ಯಗಳನ್ನು ತಲುಪಿಸಬೇಕು. ಸರ್ಕಾರದ ಸೌಲಭ್ಯಕ್ಕಾಗಿ ನೋಂದಾಯಿಸಿಕೊಂಡಿರುವ ವಂಚಕರನ್ನು ದೂರವಿಡಬೇಕು ಎಂದು ಕರ್ನಾಟಕ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘದಿಂದ ನಗರದಲ್ಲಿ ಪ್ರತಿಭಟನೆ ನಡೆಸಿ ಒತ್ತಾಯಿಸಲಾಯಿತು.
ಮಂಡಳಿ ರಚನೆಯಾದ ಉದ್ದೇಶ ಈಡೇರಿಲ್ಲ. ನಿಜವಾದ ಕಾರ್ಮಿಕರು ಮಂಡಳಿಯಲ್ಲಿ ನೋಂದಾಯಿಸಲು ಹೋದರೆ ಒಂದು ದಿನದ ಕೂಲಿ ನಷ್ಟವಾಗುತ್ತದೆ ಎಂದು ಕೆಲಸ ಮಾಡುತ್ತಿದ್ದಾರೆ. ಇದರ ಲಾಭವನ್ನು ಬೇರೆಯವರು ತೆಗೆದುಕೊಳ್ಳುತ್ತಿದ್ದಾರೆ. ಇದನ್ನು ತಪ್ಪಿಸಿ ನಿಜವಾದ ಕಾರ್ಮಿಕರನ್ನು ಗುರುತಿಸಬೇಕುಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಮಂಡಳಿಯಿಂದ ನೀಡುವ ಮದುವೆ ಸಹಾಯಧನವನ್ನು 2 ಲಕ್ಷ ರೂ.ಗೆ ಹೆಚ್ಚಿಸಿ ಠೇವಣಿ ಇಡದಂತೆ ಮೊದಲಿನಂತೆ ಮುಂದುವರೆಸಬೇಕು. ಹೆರಿಗೆ ಸಹಾಯಧನವನ್ನು 50 ಸಾವಿರ ರೂ. ಗೆ ಹೆಚ್ಚಿಸುವುದು, ಕಟ್ಟಡ ಕಾರ್ಮಿಕರು ಕೆಲಸಕ್ಕೆ ಹೋಗುವ ಮತ್ತು ಬರುವ ಸಮಯದಲ್ಲಿ ಅಪಘಾತವಾದರೆ 8 ಲಕ್ಷ ರೂ. ಪರಿಹಾರ ನೀಡುವುದು, ಮನೆ ನಿರ್ಮಿಸಿಕೊಳ್ಳಲು 5 ಲಕ್ಷ ರೂ. ಸಹಾಯಧನ ನೀಡಬೇಕು. ಕಟ್ಟಡ ಕಟ್ಟುವ ಹಾಗೂ ಇತರ ನಿರ್ಮಾಣ ಕಾರ್ಮಿಕರಿಗೆಕೋವಿಡ್ ಸಂದರ್ಭದಲ್ಲಿ ಘೋಷಣೆ ಮಾಡಿದ ಪರಿಹಾರ ಹಣ ಕೆಲವು ಕಾರ್ಮಿಕರಿಗೆ ತಲುಪಿಲ್ಲ. ಕೂಡಲೇ ಅವರ ಖಾತೆಗೂ ಹಣ ಜಮಾ ಮಾಡಬೇಕು ಎಂದು ಒತ್ತಾಯಿಸಿದರು.
ಎಐಟಿಯುಸಿ ಗೌರವಾಧ್ಯಕ್ಷ ಸಿ.ವೈ. ಶಿವರುದ್ರಪ್ಪ, ಪ್ರಧಾನ ಕಾರ್ಯದರ್ಶಿ ಜಿ.ಸಿ. ಸುರೇಶ್ಬಾಬು, ರಾಜ್ಯ ಮಂಡಳಿ ಸದಸ್ಯ ಟಿ.ಆರ್. ಉಮಾಪತಿ, ದೊಡ್ಡಉಳ್ಳಾರ್ತಿ ಕರಿಯಣ್ಣ, ಜಾಫರ್ ಶರೀಫ್, ಕೆ.ಎನ್. ರಮೇಶ್, ಕುಮಾರ್, ಕೌಸರ್, ಬಿ.ರಾಜಪ್ಪ, ಸೋಮಶೇಖರ್ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು
Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ
MUST WATCH
ಹೊಸ ಸೇರ್ಪಡೆ
Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ