ದೀಪಾವಳಿ ಬಳಿಕ ಸಂಪುಟ ವಿಸ್ತರಣೆ: ಜಿ.ಪರಮೇಶ್ವರ್
Team Udayavani, Nov 5, 2018, 6:00 AM IST
ಚಿತ್ರದುರ್ಗ: ದೀಪಾವಳಿ ಹಬ್ಬದ ನಂತರ ಖಾಲಿ ಇರುವ ಸಚಿವ ಸ್ಥಾನ ಹಾಗೂ ನಿಗಮ, ಮಂಡಳಿಗಳಿಗೆ ನೇಮಕ ಮಾಡಲಾಗುವುದು ಎಂದು ಗೃಹ ಸಚಿವ ಹಾಗೂ ಉಪಮುಖ್ಯಮಂತ್ರಿ ಡಾ| ಜಿ.ಪರಮೇಶ್ವರ್ ತಿಳಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಸಚಿವ ಸ್ಥಾನದ ಆಕಾಂಕ್ಷಿಗಳ ಕೋರಿಕೆ ಜೊತೆಗೆ ಯಾವ ಜಿಲ್ಲೆ ಮತ್ತು ಸಮುದಾಯಗಳಿಗೆ ಸಚಿವ ಸ್ಥಾನ ಕೈತಪ್ಪಿದೆ ಎಂಬುದನ್ನು ಗಮನದಲ್ಲಿಟ್ಟುಕೊಂಡು ಸಂಪುಟ ವಿಸ್ತರಣೆ ಮಾಡಲಾಗುತ್ತದೆ ಎಂದರು.
ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಐದು ವರ್ಷ ಪೂರ್ಣಗೊಳಿಸಲಿದೆ. ಜಗದೀಶ್ ಶೆಟ್ಟರ್, ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಗಳಾಗಬೇಕೆಂಬ ಆಸೆಯಿಂದ ನವೆಂಬರ್ 6ಕ್ಕೆ ಸರ್ಕಾರ ಪತನವಾಗುತ್ತದೆ ಎನ್ನುತ್ತಿದ್ದಾರೆ. ಐದು ವರ್ಷಗಳ ಕಾಲ ಸಮ್ಮಿಶ್ರ ಸರ್ಕಾರ ಉತ್ತಮ ಆಡಳಿತ ನೀಡಲಿದ್ದು, ಶೆಟ್ಟರ್ ಮತ್ತು ಯಡಿಯೂರಪ್ಪ ಆಸೆ ಈಡೇರುವುದಿಲ್ಲ ಎಂದು ಕುಟುಕಿದರು.
ರಾಷ್ಟ್ರೀಕೃತ ಬ್ಯಾಂಕ್ಗಳು ಚಿತ್ರದುರ್ಗ, ಸವದತ್ತಿ ಮತ್ತಿತರ ಕಡೆ ರೈತರಿಗೆ ನೋಟಿಸ್ ನೀಡುತ್ತಿರುವುದು ಹಾಗೂ ರೈತರ ಮೇಲೆ ಪ್ರಕರಣ ದಾಖಲು ಮಾಡಲಾಗುತ್ತಿರುವುದರಿಂದ ರಾಜ್ಯದ ರೈತರು ಆತಂಕ ಪಡಬೇಕಾಗಿಲ್ಲ. ಹೊರ ರಾಜ್ಯಗಳಲ್ಲಿ ಬ್ಯಾಂಕ್ಗಳು ರೈತರ ಮೇಲೆ ಪ್ರಕರಣ ದಾಖಲು ಮಾಡುತ್ತಿರುವ ವಿಚಾರ ನನ್ನ ಗಮನಕ್ಕೆ ಬಂದಿಲ್ಲ. ಈ ಬಗ್ಗೆ ಪರಿಶೀಲನೆ ನಡೆಸುತ್ತೇನೆ.
– ಡಾ| ಜಿ.ಪರಮೇಶ್ವರ್, ಉಪಮುಖ್ಯಮಂತ್ರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ