Cauvery issue ರಾಜಕಾರಣ ಬೇಡ: ಸಚಿವ ಮಧು ಬಂಗಾರಪ್ಪ
ಬಿಎಸ್ವೈ ಬಿಜೆಪಿ ಸಂಸದರನ್ನು ಪ್ರಧಾನಿ ಬಳಿ ಕರೆದೊಯ್ಯಲಿ
Team Udayavani, Sep 27, 2023, 7:48 PM IST
ಚಳ್ಳಕೆರೆ:ಕಾವೇರಿ ನೀರಿನ ಸಮಸ್ಯೆ ಬಗ್ಗೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ರಾಜಕೀಯ ಮಾಡುವುದನ್ನು ಬಿಟ್ಟು ಬಿಜೆಪಿ ಸಂಸದರನ್ನು ಪ್ರಧಾನಿ ನರೇಂದ್ರ ಮೋದಿ ಬಳಿ ಕರೆದುಕೊಂಡು ಹೋಗಿ ಮಧ್ಯಸ್ಥಿಕೆ ವಹಿಸಲು ಮನವಿ ಮಾಡಲಿ. ತಮ್ಮ ರಾಜಕೀಯ ಸ್ವಪ್ರತಿಷ್ಠೆಗಾಗಿ ಕಾಂಗ್ರೆಸ್ ಸರ್ಕಾರವನ್ನು ದೂರುವುದು ಸರಿಯಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧುಬಂಗಾರಪ್ಪ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ ಹಿರಿಯ ಮುತ್ಸದ್ಧಿ ಬಿ.ಎಸ್.ಯಡಿಯೂರಪ್ಪ ಅವರಿಗೆ ನ್ಯಾಯಾಲಯದ ಆದೇಶದ ಬಗ್ಗೆ ಅರಿವಿದೆ. ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಆದೇಶ ಪಾಲಿಸಬೇಕಿದೆ. ಜತೆಗೆ ರಾಜ್ಯದ ಜನರ ಹಿತರಕ್ಷಣೆಯನ್ನೂ ಮಾಡಬೇಕಿದೆ.
ನ್ಯಾಯಾಲಯದಲ್ಲಿ ನಮ್ಮ ವಕೀಲರು ಸಮರ್ಥ ವಾದ ವಾದ ಮಂಡಿಸಿದರೂ 2018ರ ತೀರ್ಪಿನಂತೆ ನಡೆದುಕೊಳ್ಳಬೇಕು ಎಂದು ನ್ಯಾಯಾಲಯ ಸೂಚಿಸಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಕಾನೂನು ತಜ್ಞರೊಂದಿಗೆ ಚರ್ಚೆ ನಡೆಸಿದ್ದಾರೆ ಎಂದರು.
ಅಸ್ತಿತ್ವ ಉಳಿಸಿಕೊಳ್ಳಲು ಮೈತ್ರಿ ನಾಟಕ:
ಬಿಜೆಪಿ-ಜೆಡಿಎಸ್ ಪಕ್ಷಗಳಿಗೆ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಜನತೆ ಸೋಲಿನ ರುಚಿ ತೋರಿಸಿದ್ದಾರೆ. 69 ಸ್ಥಾನ ಪಡೆದ ಬಿಜೆಪಿ, 19 ಸ್ಥಾನ ಪಡೆದ ಜೆಡಿಎಸ್ನಿಂದ ಏನು ಮಾಡಲೂ ಸಾಧ್ಯವಿಲ್ಲ. ಲೋಕಸಭಾ ಚುನಾವಣೆ ವೇಳೆ ಎರಡೂ ಪಕ್ಷಗಳು ಅಸ್ತಿತ್ವದಲ್ಲಿ ಇರುವುದಿಲ್ಲವೆಂಬ ಭಯ ಆ ಪಕ್ಷಗಳ ನಾಯಕರನ್ನು ಕಾಡುತ್ತಿದೆ. ಹಾಗಾಗಿ ಅಸ್ತಿತ್ವ ಉಳಿಸಿಕೊಳ್ಳಲು ಮೈತ್ರಿ ನಾಟಕ ಮಾಡುತ್ತಿದ್ದಾರೆ. ಶಿಕ್ಷಣ ಇಲಾಖೆಯ ನಿಯಮಗಳಲ್ಲಿ ಮಾರ್ಪಾಡು ಮಾಡುವಂತೆ ಒತ್ತಡ ಹೆಚ್ಚಾಗುತ್ತಿದೆ. ಪಠ್ಯ ಬದಲಾವಣೆ ಮಾಡಬೇಕೆಂಬ ಒತ್ತಾಯವೂ ಇದೆ. ಸರ್ಕಾರ ಶಿಕ್ಷಣ ತಜ್ಞರೊಂದಿಗೆ ಚರ್ಚಿಸಿ ಬದಲಾವಣೆಯ ಅಗತ್ಯ ಇದ್ದಲ್ಲಿ ಮಾಡಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ
Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ