ಚಳ್ಳಕೆರೆ ಬಿಇಒ ಕಚೇರಿಗೆ ಚಿತ್ರಕಲೆ ಚಿತ್ತಾರ


Team Udayavani, Jun 11, 2018, 3:49 PM IST

chitradurga1.jpg

ನಾಯಕನಹಟ್ಟಿ: ಶತಮಾನ ಕಂಡ ಚಳ್ಳಕೆರೆ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಗೆ ಚಳ್ಳಕೆರೆ ತಾಲೂಕಿನ ಕಲಾ ಶಿಕ್ಷಕರು ಚಿತ್ರಕಲೆಯ ಸ್ಪರ್ಶ ನೀಡಿದ್ದಾರೆ. ಬಿಇಒ ಕಚೇರಿ, ದ್ವಾರದಲ್ಲಿಯೇ ಸುಂದರ ಚಿತ್ರಗಳಿಂದ ಗಮನ ಸೆಳೆಯುತ್ತದೆ.
ಸಾಂಪ್ರದಾಯಿಕ ಶೈಲಿಯಾದ “ವರ್ಲಿ’ ವಿಧಾನ ಇಲ್ಲಿ ಬಳಕೆಯಾಗಿದೆ.  ನಾನಾ ರೀತಿಯ ರೇಖೆಗಳು, ಒಂದೇ ರೀತಿಯ ಬಣ್ಣ ಬಳಸಿಕೊಂಡು ಚಿತ್ರಗಳನ್ನು ರಚಿಸಿರುವುದು ವಿಶೇಷ. ಈ ಎಲ್ಲ ಕಲಾ ಚಿತ್ರಗಳನ್ನು ತಾಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರೇ ಚಿತ್ರಿಸಿರುವುದು ವಿಶೇಷ. “ವರ್ಲಿ’ ಕಲೆ ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚಾಗಿ ಕಂಡು ಬರುತ್ತದೆ.

ಆಡಳಿತ ಹಾಗೂ ಕಾರ್ಯನಿರ್ವಹಣೆ ಮಾದರಿ ತಮ್ಮ ಕಚೇರಿಯಿಂದಲೇ ಆರಂಭವಾಗಬೇಕು ಎನ್ನುವ ದೃಷ್ಟಿಯಿಂದ ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎಸ್‌. ವೆಂಕಟೇಶಪ್ಪ ತಮ್ಮ ಕಚೇರಿಯನ್ನು ಕಲೆಯಿಂದ ಸಿಂಗರಿಸಿದ್ದಾರೆ. 

1908ರಲ್ಲಿ ನಿರ್ಮಾಣಗೊಂಡ ಸರಕಾರಿ ಶಾಲೆ ಕಳೆದ 20 ವರ್ಷಗಳಿಂದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಾಗಿ ಪರಿವರ್ತನೆಯಾಗಿದೆ. ಇದಕ್ಕೆ ಹೊಂದಿಕೊಂಡಂತೆ ಹಿಂಭಾಗದಲ್ಲಿ ಶತಮಾನದ ಸರಕಾರಿ ಶಾಲೆ ಕಾರ್ಯನಿರ್ವಹಿಸುತ್ತಿದೆ. 110 ವರ್ಷಗಳ ಇತಿಹಾಸ ಹೊಂದಿರುವ ಪುರಾತನ ಕಟ್ಟಡ ಇದೀಗ ಅತ್ಯಾಧುನಿಕ ಕಲೆಯಿಂದ ಗಮನ ಸೆಳೆಯುತ್ತಿದೆ.

ಸಂಪೂರ್ಣವಾಗಿ ಕಲ್ಲಿನಿಂದ ನಿರ್ಮಾಣಗೊಂಡ ಕಟ್ಟಡಕ್ಕೆ ಚಿತ್ರಗಳ ಚಿತ್ತಾರ ಮೆರುಗು ನೀಡಿದೆ.  ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಗೆ ತಾಲೂಕಿನ ಎಲ್ಲ ಶಿಕ್ಷಕರು ಭೇಟಿ ನೀಡುತ್ತಿರುತ್ತಾರೆ. ಹಾಗಾಗಿ ಶಿಕ್ಷಕರಿಗೂ ಈ ಕಚೇರಿ ಮಾದರಿಯಾಗಿರಬೇಕು. ಆದ್ದರಿಂದ ಕಲಾ ಶಿಕ್ಷಕರು ಕಚೇರಿ ವಿಶಿಷ್ಟವಾಗಿ ಕಾಣುವಂತೆ ಮಾಡಬೇಕು, ಇದಕ್ಕೆ ಅಗತ್ಯವಿರುವ ಬಣ್ಣ ಮತ್ತಿತರ ವಸ್ತುಗಳನ್ನು ನೀಡುವುದಾಗಿ ಬಿಇಒ, ಕಲಾ ಶಿಕ್ಷಕರ ಮುಂದೆ ಪ್ರಸ್ತಾಪ ಇಟ್ಟರು. ಈ ಪ್ರಸ್ತಾಪಕ್ಕೆ ಸ್ಪಂದಿಸಿದ 12 ಕಲಾ ಶಿಕ್ಷಕರು ಬಿಇಒ ಕಚೇರಿಯನ್ನು ಚಿತ್ರಗಳಿಂದ ಸಿಂಗರಿಸಿದ್ದಾರೆ. ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೆ ತಮ್ಮ ಕೌಶಲ್ಯವನ್ನು ಚಿತ್ರಗಳ ಮೂಲಕ ಅಭಿವ್ಯಕ್ತಗೊಳಿಸಿದ್ದಾರೆ.

ವಿವಿಧ ಪ್ರೌಢಶಾಲೆಗಳ ಕಲಾ ಶಿಕ್ಷಕರಾದ ಎಚ್‌. ರವಿಕುಮಾರ್‌, ಅಶೋಕ್‌ಕುಮಾರ್‌, ಡಿ.ಎಸ್‌. ಬಸವರಾಜ್‌, ಟಿ. ಮುಕ್ಕಣ್ಣ, ಉದಯ್‌ಕುಮಾರ್‌, ಗೋಪಿ ನಾಯ್ಕ, ಎಂ.ಕೆ. ರೂಪಾ, ಕೆ.ಟಿ. ಕರಿಗೌಡ, ಯೋಗೀಶ್‌, ಮಲ್ಲನಗೌಡರ್‌, ಹಾಲೇಶ್‌, ಆರ್‌. ರಂಗಪ್ಪ ಚಿತ್ರ ರಚನೆ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. 

ಶಾಲೆಗೆ ಮಾತ್ರ ಸೀಮಿತವಾಗಿದ್ದ ಕಲಾ ಶಿಕ್ಷಕರು ಉತ್ಸಾಹದಿಂದ ತಮ್ಮ ಇಲಾಖೆಯ ಕಚೇರಿಯನ್ನು ಚಿತ್ರಗಳಿಂದ ಸಿಂಗರಿಸಿದ್ದಾರೆ. ಬಿಇಒ ಕಚೇರಿ ನವವಧುವಿನಂತೆ ಕಂಗೊಳಿಸುತ್ತಿದ್ದು, ಬಿಇಒ ಹಾಗೂ ಕಲಾ ಶಿಕ್ಷಕರ ಪ್ರಯತ್ನಕ್ಕೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ವರ್ಲಿ ಕಲಾ ವಿಧಾನವನ್ನು ಇಲ್ಲಿ ಪರಿಚಯಿಸುವುದು ಹಾಗೂ ಶತಮಾನದ ಕಟ್ಟಡಕ್ಕೆ ಹೊಸ ರೂಪ ನೀಡುವ ಉದ್ದೇಶ
ಹೊಂದಿದ್ದೇವೆ. ತಾಲೂಕಿನ 12 ಕಲಾ ಶಿಕ್ಷಕರು ಉತ್ತಮವಾಗಿ ಸ್ಪಂದಿಸಿದ್ದಾರೆ. ಇವರ ಕಲೆ ಹಾಗೂ ಸೃಜನಶೀಲತೆಯನ್ನು ಬಳಸಿಕೊಂಡು ಕಚೇರಿ ಹಾಗೂ ಸರಕಾರಿ ಶಾಲೆಗಳನ್ನು ಅಂದಗೊಳಿಸುವ ಉದ್ದೇಶವಿದೆ.
 ಸಿ.ಎಸ್‌. ವೆಂಕಟೇಶ್‌, ಚಳ್ಳಕೆರೆ ಕ್ಷೇತ್ರ ಶಿಕ್ಷಣಾಧಿಕಾರಿ.

ಸಾಂಪ್ರದಾಯಿಕ ಕಲೆಯನ್ನು ಇಲ್ಲಿ ಪರಿಚಯಿಸಲಾಗಿದೆ. ಕಟ್ಟಡವನ್ನು ಸಂಪೂರ್ಣವಾಗಿ ಕಲ್ಲಿನಿಂದ ಕಟ್ಟಿದ್ದು, ಹೊರಮೈ ನುಣುಪಾಗಿಲ್ಲ. ಹೀಗಿದ್ದರೂ ಕಲಾಕೃತಿಗಳು ಉತ್ತಮವಾಗಿ ಮೂಡಿ ಬಂದಿವೆ. ಶಾಲೆಗೆ ಸೀಮಿತವಾಗಿದ್ದ ನಮಗೆ ಹೊಸ ಅನುಭವ ಉಂಟಾಗಿದೆ. ಬಿಇಒ ಮಾರ್ಗದರ್ಶದಲ್ಲಿ ಕಲಾ ಶಿಕ್ಷಕರು ಖುಷಿಯಿಂದ ಕಲಾಕೃತಿಗಳನ್ನು ರಚಿಸಿದ್ದೇವೆ.
 ಎಂ.ವೈ. ಅಶೋಕ್‌ಕುಮಾರ್‌, ಕಲಾ ಶಿಕ್ಷಕರು

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.