ಚಳ್ಳಕೆರೆ: ಬಂದ್‌ಗೆ ಸಿಗ್ಲಿಲ್ಲ ಸಾರ್ವಜನಿಕರ ಉತ್ತಮ ಪ್ರತಿಕ್ರಿಯೆ


Team Udayavani, Jan 9, 2019, 6:08 AM IST

cta-2.jpg

ಚಳ್ಳಕೆರೆ: ರಾಷ್ಟ್ರೀಯ ಕಾರ್ಮಿಕರ ಒಕ್ಕೂಟ ಕರೆ ನೀಡಿದ್ದ ಭಾರತ ಬಂದ್‌ಗೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ
ವ್ಯಕ್ತವಾಗಲಿಲ್ಲ.  ಮಂಗಳವಾರ ಬೆಳಿಗ್ಗೆಯಿಂದ ಕಾರ್ಮಿಕ ಸಂಘಟನೆಗಳ ಮುಖಂಡರು ನಗರದ ಬೀದಿ ಬೀದಿಗಳಲ್ಲಿ ಸಂಚರಿಸಿ ಬಂದ್‌ಗೆ ಸಹಕಾರ ನೀಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದರು. ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿ, ಉದ್ಯೋಗ ಸೃಷ್ಟಿ ಭರವಸೆಯನ್ನು ಈಡೇರಿಸದೇ ಇರುವುದು, ಸಾರ್ವಜನಿಕ ಉದ್ಯೋಗಿಗಳ ಖಾಸಗೀಕರಣ, ಕಾರ್ಮಿಕರಿಗೆ ಸಾಮಾಜಿಕ ಭದ್ರತೆ, ಗುತ್ತಿಗೆ ಮತ್ತು ಇನ್ನಿತರ ಕಾರ್ಮಿಕರ ಕಾಯಂ, ಕನಿಷ್ಠ ವೇತನ 18 ಸಾವಿರ ರೂ.ಗೆ ಹೆಚ್ಚಳ ಮತ್ತಿತರ ಬೇಡಿಕೆಗಳನ್ನು ಮುಂದಿಟ್ಟು ಪ್ರತಿಭಟನೆ ನಡೆಸುತ್ತಿರುವುದಾಗಿ ತಿಳಿಸಿದರು.

ನೆಹರೂ ವೃತ್ತದಲ್ಲಿ ಎಐಟಿಯುಸಿ ರಾಜ್ಯ ಸಂಚಾಲಕ ಸಿ.ವೈ. ಶಿವರುದ್ರಪ್ಪ, ತಾಲೂಕು ಅಧ್ಯಕ್ಷ ತಿಪ್ಪೇರುದ್ರಪ್ಪ, ಉಪಾಧ್ಯಕ್ಷ ಪಿ.ಒ. ಬಸವರಾಜು ಮೊದಲಾದವರು ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಬಂದ್‌ ಗೆ ಸಹಕಾರ ನೀಡಬೇಕು, ಕಾರ್ಮಿಕ ವಿರೋಧಿ ನೀತಿಯನ್ನು ಎಲ್ಲರೂ ಧಿಕ್ಕರಿಸಬೇಕೆಂದು ಮನವಿ ಮಾಡುತ್ತಿದ್ದರು. ಸಿಐಟಿಯು ಜಿಲ್ಲಾ ಸಂಚಾಲಕ ಟಿ. ತಿಪ್ಪೇಸ್ವಾಮಿ, ತಾಲೂಕು ಅಧ್ಯಕ್ಷ ಕೆ.ವಿ. ವೀರಭದ್ರಪ್ಪ, ಉಪಾಧ್ಯಕ್ಷ ನಾಗರಾಜ, ಖಜಾಂಚಿ ನಿಂಗಣ್ಣ ಮುಂತಾದವರು ಆಟೋದಲ್ಲಿ ಸಂಚರಿಸಿ ಬಂದ್‌ ಬೆಂಬಲಿಸುವಂತೆ ಮನವಿ ಮಾಡಿದರು.

ಪ್ರತಿಭಟನಾಕಾರರು ಗುಂಪು ಗುಂಪಾಗಿ ತೆರಳಿ ಬಂದ್‌ ಮಾಡುವಂತೆ ಒತ್ತಾಯ ಮಾಡುತ್ತಿದ್ದುದನ್ನು ಗಮನಿಸಿದ ಪಿಎಸ್‌ಐ ಕೆ. ಸತೀಶ್‌ ನಾಯ್ಕ ಪ್ರತಿಭಟನಾಕಾರರ ಬಳಿ ತೆರಳಿದರು. ಬಂದ್‌ ಮಾಡುವಂತೆ ಯಾವುದೇ ರೀತಿಯ ಒತ್ತಡ ಹೇರಬಾರದು, ಕೇವಲ ಮನವಿ ಮಾಡಬೇಕೆಂದು ತಾಕೀತು ಮಾಡಿದರು. ಅಲ್ಲದೆ ಬಲವಂತವಾಗಿ ಬಂದ್‌ ಮಾಡುವಂತೆ ಯಾರಾದರೂ ಒತ್ತಡ ಹೇರಿದರೆ ಪೊಲೀಸ್‌ ಇಲಾಖೆಗೆ ಮಾಹಿತಿ ನೀಡುವಂತೆ ತಿಳಿಸಿದರು.

ತಾಲೂಕಿನಾದ್ಯಂತ ಯಾವುದೇ ಕೆಎಸ್‌ಆರ್‌ಟಿಸಿ ಬಸ್‌ಗಳು ರಸ್ತೆಗೆ ಇಳಿಯಲಿಲ್ಲ. ಖಾಸಗಿ ಬಸ್‌ಗಳ ಸಂಚಾರ ಎಂದಿನಂತಿತ್ತು. ಆಟೋರಿಕ್ಷಾಗಳು ಸಹ ಎಂದಿನಂತೆ ಕಾರ್ಯನಿರ್ವಹಿಸಿದವು, ಬ್ಯಾಂಕ್‌, ಅಂಚೆ ಕಚೇರಿ ಬಂದ್‌ ಆಗಿದ್ದವು. ಬಂದ್‌ ಇದ್ದಿದ್ದರಿಂದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಯುವಕರು ಕ್ರಿಕೆಟ್‌ ಆಡಿದರು.

 ಕೆಎಸ್‌ಆರ್‌ಟಿಸಿಯ ಚಳ್ಳಕೆರೆ ಘಟಕದಲ್ಲಿ 48 ಬಸ್‌ಗಳಿದ್ದು, 44 ಮಾರ್ಗಗಳಲ್ಲಿ ನಿತ್ಯ ಸೇವೆ ನೀಡಲಾಗುತ್ತಿದೆ. ಇಂದು ಕೇವಲ
ನಾಲ್ಕು ಮಾರ್ಗಗಳಲ್ಲಿ ಮಾತ್ರ ಬಸ್‌ಗಳು ಸಂಚರಿಸಿದ್ದು, ಅವುಗಳನ್ನು ಸಹ ಪ್ರತಿಭಟನೆ ಹಿನ್ನೆಲೆಯಲ್ಲಿ ವಾಪಾಸ್‌
ಪಡೆಯಲಾಯಿತು ಎಂದು ಡಿಪೋ ವ್ಯವಸ್ಥಾಪಕ ಪ್ರಭು ತಿಳಿಸಿದರು.

ಟಾಪ್ ನ್ಯೂಸ್

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

11-

Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

10

Bengaluru: ಫ್ಲೈಓವರ್‌ಗಳಲ್ಲೂ ಕಸ ಸುರಿಯುವ ವಾಹನ ಸವಾರರು 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.