ಅಧಿಕಾರಿಗಳಿಗೆ ಹೂಮಳೆಗೈದ ಜನ
ಜನಸ್ಪಂದನೆಗೆ ಅಧಿಕಾರಿಗಳ ಕಣ್ಣಲ್ಲಿ ಆನಂದಬಾಷ್ಪ
Team Udayavani, Apr 16, 2020, 5:05 PM IST
ಚಳ್ಳಕೆರೆ: ಬಸವೇಶ್ವರ ವೃತ್ತದಲ್ಲಿ ಪೊಲೀಸ್ ಪಥಸಂಚಲನಕ್ಕೆ ಡಿವೈಎಸ್ಪಿ ಎಸ್.ರೋಷನ್ ಜಮೀರ್ ಚಾಲನೆ ನೀಡಿದರು.
ಚಳ್ಳಕೆರೆ: ಕೋವಿಡ್ ವೈರಾಣು ಹಿನ್ನೆಲೆಯಲ್ಲಿ ಪಥಸಂಚಲನದ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿರುವ ಪೊಲೀಸ್ ಇಲಾಖೆ ಕಾರ್ಯಕ್ಕೆ ಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ಸ್ವಯಂ ಪ್ರೇರಣೆಯಿಂದ ಸಾರ್ವಜನಿಕರು ಪೊಲೀಸ್ ಇಲಾಖೆಯ ಪಥಸಂಚಲದ ಮೇಲೆ ಹೂ ಮಳೆಗೈದು, ರಾಷ್ಟ್ರಧ್ವಜ ಹಿಡಿದು ಜೈಕಾರ ಹಾಕಿದರು.
ಇಲ್ಲಿನ ಬಸವೇಶ್ವರ ವೃತ್ತದಿಂದ ಪ್ರಾರಂಭವಾದ ಪಥಸಂಚಲನಕ್ಕೆ ಚಾಲನೆ ನೀಡಿ ಮಾತನಾಡಿದ ಉಪವಿಭಾಗದ ಡಿವೈಎಸ್ಪಿ ಎಸ್.ರೋಷನ್ ಜಮೀರ್, ಮಾರ್ಗದೂದ್ದಕ್ಕೂ ಸಾರ್ವಜನಿಕರು ಸ್ವಯಂ ಸೇವಾ ಸಂಸ್ಥೆಗಳು, ಮಕ್ಕಳು, ವಯೋವೃದ್ಧರು ಪುಷ್ಪಾರ್ಚನೆ ಮಾಡಿ ಕೈಮುಗಿಯುತ್ತಿದ್ದು, ನಮ್ಮ ಸೇವೆಗೆ ಸಾರ್ಥಕ ಭಾವನೆ ಮೂಡಿದೆ. ಜನರು ಹೂವನ್ನು ಎರಚುತ್ತಿದ್ದರೆ ನಮ್ಮೆಲ್ಲಾ ಕಣ್ಣಲ್ಲಿ ಆನಂದಬಾಷ್ಪ ನಮಗೆ ಅರಿವಿಲ್ಲದಂತೆ ಹೊರಗೆ ಬರುತ್ತಿತ್ತು ಎಂದರು. ತಹಶೀಲ್ದಾರ್ ಎಂ.ಮಲ್ಲಿಕಾರ್ಜುನ, ವೃತ್ತ ನಿರೀಕ್ಷಕ ಈ.ಆನಂದ, ಪೌರಾಯುಕ್ತ ಪಿ.ಪಾಲಯ್ಯ, ತಾಪಂ ಇಒ ಶ್ರೀಧರ್ ಐ.ಬಾರಿಕೇರ್, ಆರೋಗ್ಯಾಧಿಕಾರಿ ಡಾ| ಎನ್.ಪ್ರೇಮಸುಧಾ, ಪಿಎಸ್ ಐಗಳಾದ ನೂರ್ ಆಹಮ್ಮದ್, ರಾಘವೇಂದ್ರ ಮುಂತಾದವರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು
Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ
Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ
Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ
MUST WATCH
ಹೊಸ ಸೇರ್ಪಡೆ
Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು
Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ
Karataka Damanaka: ಭಟ್ರಾ ಗರಡಿಲಿ ತಯಾರಾದ ಕರಟಕ ದಮನಕ
ʼಭಜರಂಗಿ ಭಾಯಿಜಾನ್ʼ, ʼರೌಡಿ ರಾಥೋರ್ʼ ಸೀಕ್ವೆಲ್ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ನಿರ್ಮಾಪಕ
Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ