ಜನರಲ್ಲಿನ ಕೋವಿಡ್ ಭಯ ನಿವಾರಣೆಗೆ ಯತ್ನ: ಕುಮಾರಸ್ವಾಮಿ
Team Udayavani, Jun 1, 2020, 4:18 PM IST
ಸಾಂದರ್ಭಿಕ ಚಿತ್ರ
ಚಳ್ಳಕೆರೆ: ಕೋವಿಡ್ ವೈರಾಣು ನಿಯಂತ್ರಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಪಾಸಿಟಿವ್ ಪ್ರಕರಣದ ರೋಗಿಗಳು ಸಹ ಗುಣಮುಖರಾಗಿದ್ದು, ಈ ಬಗ್ಗೆ ಯಾರೂ ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ಜಿಲ್ಲಾ ಕೋವಿಡ್ ವೈರಾಣು ನಿಯಂತ್ರಣ ನೋಡಲ್ ಅಧಿಕಾರಿ ಕುಮಾರಸ್ವಾಮಿ ಹೇಳಿದರು.
ಭಾನುವಾರ ನಗರದ ಹೊರವಲಯದಲ್ಲಿರುವ ಬಿಸಿಎಂ ಹಾಸ್ಟೆಲ್ಗೆ ಭೇಟಿ ನೀಡಿದ್ದ ಅವರು ಕೋವಿಡ್ ಪಾಸಿಟಿವ್ ದೃಢಪಟ್ಟಿರುವ ರೋಗಿಗಳ ಆರೋಗ್ಯ ವಿಚಾರಿಸಿ ಸೌಲಭ್ಯಗಳ ಪರಿಶೀಲನೆ ನಡೆಸಿ ಅವರು ಮಾತನಾಡಿದರು. ಜಿಲ್ಲಾ ಕೇಂದ್ರಗಳಲ್ಲೇ ಪಾಸಿಟಿವ್ ಪ್ರಕರಣಗಳಿಗೆ ಚಿಕಿತ್ಸೆ ನೀಡಬೇಕೆಂಬ ನಿಯಮವಿದೆ. ಆದರೆ ಸಾರ್ವಜನಿಕರಲ್ಲಿ ಈ ರೋಗದ ಬಗ್ಗೆ ಇರುವ ಆತಂಕ ಹಾಗೂ ಭಯವನ್ನು ದೂರ ಮಾಡಲು ತಾಲೂಕು ಮಟ್ಟದಲ್ಲೇ ಚಿಕಿತ್ಸೆ ಮುಂದುವರೆಸಲಾಗಿದೆ. ಪ್ರಸ್ತುತ ಸ್ಥಿತಿಯಲ್ಲಿ ಈ ರೋಗದ ಬಗ್ಗೆ ಜನರಲ್ಲಿ ಇರುವ ಭಯದ ವಾತಾವರಣ ದೂರವಾಗುತ್ತಿದೆ ಎಂದರು.
ಸರ್ಕಾರಿ ಆಸ್ಪತ್ರೆ ಆಡಳಿತಾಧಿಕಾರಿ ಡಾ| ಬಸವರಾಜು, ತಾಲೂಕು ಆರೋಗ್ಯಾಧಿಕಾರಿ ಡಾ| ಎನ್. ಪ್ರೇಮಸುಧಾ, ಆರ್ಆರ್ಟಿ ತಂಡದ ಮುಖ್ಯಸ್ಥರಾದ ಆರ್. ನಾಗರಾಜು, ಪ್ರಸನ್ನಕುಮಾರ್, ಗಂಗಾಧರ, ಚಂದ್ರಪ್ಪ, ಎಸ್.ಬಿ. ತಿಪ್ಪೇಸ್ವಾಮಿ, ಎನ್. ಪ್ರೇಮಕುಮಾರ್, ಪ್ರಯೋಗಾಲಯ ಸಿಬ್ಬಂದಿ ಶಿವಕುಮಾರ್, ರಮೇಶ್, ದಯಾನಂದ, ವಿಕ್ರಮ್, ಎಚ್.ತಿಪ್ಪೇಸ್ವಾಮಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Renukaswamy ಕುಟುಂಬಕ್ಕೆ ನಟ ವಿನೋದ್ ರಾಜ್ ಸಾಂತ್ವನ
Bharamasagara; ಸ್ಥಳೀಯ ಟಿಪ್ಪರ್ ಗಳನ್ನು ಬಳಸಿಕೊಳ್ಳಲು ಆಗ್ರಹಿಸಿ ಪ್ರತಿಭಟನೆ
Nayakanahatti; ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ ಕಳ್ಳರ ಗ್ಯಾಂಗ್
Congress Government; ಮೊದಲು ನಿಮ್ಮ ಕಾಲದ ಹಗರಣಕ್ಕೆ ಉತ್ತರ ಕೊಡಿ: ಬಿವೈವಿ
Renuka Swamy Case: ಎ 4 ತಾಯಿ ನಿಧನ; ವಿಡಿಯೋ ಕಾಲ್ನಲ್ಲಿ ಅಂತಿಮ ದರ್ಶನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.