ದುರ್ಗದಲ್ಲಿ ಜ್ವಾಲಾಮುಖೀ?
Team Udayavani, Oct 7, 2018, 6:00 AM IST
ಚಳ್ಳಕೆರೆ (ಚಿತ್ರದುರ್ಗ): ಸತತ ಬರಕ್ಕೆ ತುತ್ತಾಗುತ್ತಿರುವ ತಾಲೂಕಿನ ಜಮೀನೊಂದರ ಭೂಮಿಯ ಕೆಳಭಾಗದಿಂದ ಅಗ್ನಿ ಜ್ವಾಲೆ ಕಾಣಿಸಿಕೊಂಡು “ಜ್ವಾಲಾಮುಖೀ’ಯ ಆತಂಕ ಸೃಷ್ಟಿಸಿದೆ.
ಇಲ್ಲಿನ ನಾಯಕನಹಟ್ಟಿ ಹೋಬಳಿಯ ಮನಮೈನಹಟ್ಟಿ ಗ್ರಾಮದ ತಿಪ್ಪೇಸ್ವಾಮಿ ಎಂಬವರಿಗೆ ಸೇರಿದ ಜಮೀನಿನಲ್ಲಿ ಕಳೆದ ಮಂಗಳವಾರ (ಅ. 2) ಸಂಜೆ 4 ಗಂಟೆ ಸುಮಾರಿಗೆ ಭೂಮಿಯ ಒಳಭಾಗದಿಂದ ಬೆಂಕಿ ಹೊರ ಹೊಮ್ಮಿದೆ. ಕೆಲ ನಿಮಿಷಗಳ ನಂತರ ಈ ಜ್ವಾಲೆ, ಆರಿದ ಬಳಿಕ ಜ್ವಾಲಾಮುಖೀಯಿಂದ ಉಂಟಾಗುವ ಲಾವಾರಸ ಮಾದರಿ ಕಂಡು ಬಂದಿತ್ತು. ಹೀಗಾಗಿ ಸಣ್ಣ ಪ್ರಮಾಣ ಜ್ವಾಲಾಮುಖೀ ಶಂಕೆ ವ್ಯಕ್ತವಾಗಿದೆ. ಬೆಂಕಿ ಜ್ವಾಲೆ ಕಂಡು ಬಂದ ಸ್ಥಳದ ಪಕ್ಕದಲ್ಲೇ ವಿದ್ಯುತ್ ಕಂಬ ಇದ್ದು, ಬೆಂಕಿಯ ಕಾವಿಗೆ ಕಂಬವೂ ಕರಗಿದಂತಾಗಿ ಬಾಗಿಕೊಂಡಿದೆ. ಬೆಸ್ಕಾಂ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ಆಗಮಿಸಿ ಕಂಬ ಬದಲಿಸಿದ್ದಾರೆ.
ಜಮೀನಿನ ಮಾಲೀಕ ತಿಪ್ಪೇಸ್ವಾಮಿ ಪೊಲೀಸರಿಗೆ ವಿಷಯ ತಿಳಿಸಿದ್ದು, ಅವರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಜ್ವಾಲೆಯಿಂದ ಕರಗಿದ ವಿದ್ಯುತ್ ಕಂಬದ ತುಂಡನ್ನು ಭೂಗರ್ಭ ಇಲಾಖೆ ಪ್ರಯೋಗಾಲಯಕ್ಕೆ ರವಾನಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ವರದಿ ಇನ್ನಷ್ಟೇ ಬರಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
MUST WATCH
ಹೊಸ ಸೇರ್ಪಡೆ
BS ಯಡಿಯೂರಪ್ಪನೇ ನನ್ನನ್ನು ವಾಪಸ್ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ
Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್ ವಶ: ಜಿಲ್ಲಾಧಿಕಾರಿ ಮಾಹಿತಿ
K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್ ಕೊಡಿಸಲಿ: ಮಧು
Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ
K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ