ವಲಸಿಗರಿಗೆ ಕ್ವಾರಂಟೈನ್: ಡಾ| ಪ್ರೇಮಸುಧಾ
Team Udayavani, May 1, 2020, 3:36 PM IST
ಚಳ್ಳಕೆರೆ: ದೊಡ್ಡೇರಿ ಗ್ರಾಮಕ್ಕೆ ಬೇರೆ ಜಿಲ್ಲೆಯಿಂದ ಬಂದಿದ್ದವರ ಮನೆಗಳಿಗೆ ಟಿಎಚ್ಒ ಡಾ| ಎನ್. ಪ್ರೇಮಸುಧಾ, ತಹಶೀಲ್ದಾರ್ ಮಲ್ಲಿಕಾರ್ಜುನ್, ತಾಪಂ ಇಒ ಡಾ| ಶ್ರೀಧರ್ ಬಾರಕೇರ್ ಭೇಟಿ ನೀಡಿದ್ದರು.
ಚಳ್ಳಕೆರೆ: ಕೋವಿಡ್ ವೈರಾಣು ನಿಯಂತ್ರಣದ ಹಿನ್ನೆಲೆಯಲ್ಲಿ ಬೇರೆ ಜಿಲ್ಲೆ, ರಾಜ್ಯಗಳಿಂದ ಬಂದ ವಲಸಿಗರ ಆರೋಗ್ಯ ತಪಾಸಣೆ ನಡೆಸಿ ಅವರನ್ನು ಹಾಸ್ಟೆಲ್ಗಳಲ್ಲಿ ಕ್ವಾರಂಟೈನ್ ಮಾಡಲಾಗುವುದು. ಆಂಧ್ರಪ್ರದೇಶದೊಂದಿಗೆ ನಿಕಟ ಸಂಪರ್ಕ ಹೊಂದಿದ್ದ 15 ಜನ ಹಾಗೂ ಬೇರೆ ಜಿಲ್ಲೆಯಿಂದ ಆಗಮಿಸಿರುವ 3 ಜನ ಸೇರಿದಂತೆ ಒಟ್ಟು 18 ಜನರನ್ನು ನಗರದ ಬಿಸಿಎಂ ಹಾಸ್ಟಲ್ನಲ್ಲಿ ಕ್ವಾರಂಟೈನ್ ಮಾಡಲಾಗಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ| ಎನ್. ಪ್ರೇಮಸುಧಾ ತಿಳಿಸಿದ್ದಾರೆ.
ಮೈಸೂರು, ಬೆಂಗಳೂರು ಮತ್ತು ದೊಡ್ಡಬಳ್ಳಾಪುರದಿಂದ ಆಗಮಿಸಿದ ಮೂವರು ವ್ಯಕ್ತಿಗಳು ಕ್ರಮವಾಗಿ ದೊಡ್ಡೇರಿ ಮತ್ತು ಇನ್ನಿತರೆ ಗ್ರಾಮಗಳಲ್ಲಿದ್ದಾರೆ. ಅವರನ್ನು ಪತ್ತೆ ಹಚ್ಚಿ ಪ್ರಾಥಮಿಕ ಹಂತದ ಆರೋಗ್ಯ ತಪಾಸಣೆ ನಡೆಸಿ ಕ್ವಾರಂಟೈನ್ ಮಾಡಲಾಗಿದೆ. ಅದೇ ರೀತಿ ತಾಲೂಕಿನ ಗಡಿ ಭಾಗದಲ್ಲಿರುವ ಕಡೇಉಡೆ, ಪಿ.ಮಹದೇವಪುರ ಮುಂತಾದ ಗ್ರಾಮಗಳಲ್ಲಿ ಆಂಧ್ರಪ್ರದೇಶಕ್ಕೆ ಸಂಪರ್ಕ ಹೊಂದಿದ್ದ 15 ಜನರನ್ನು ಪತ್ತೆ ಹಚ್ಚಿ ಕ್ವಾರಂಟೈನ್ ಮಾಡಿರುವುದಾಗಿ ಹೇಳಿದರು. ತಹಶೀಲ್ದಾರ್ ಎಂ. ಮಲ್ಲಿಕಾರ್ಜುನ್ ತಾಪಂ ಇಒ ಡಾ| ಶ್ರೀಧರ್ ಐ. ಬಾರಕೇರ್, ಪರಶುರಾಂಪುರ ಠಾಣೆ ಪಿಎಸ್ಐ ಮಹೇಶ್ ಹೊಸಪೇಟೆ, ಎನ್. ಪ್ರೇಮಕುಮಾರ್, ತಿಪ್ಪೇಸ್ವಾಮಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು
Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ