ಕೋವಿಡ್ ಸೋಂಕಿತರ ಹಾಸ್ಟೇಲ್‌ ಚಿಕಿತ್ಸೆಗೆ ವಿರೋಧ


Team Udayavani, May 28, 2020, 1:39 PM IST

28-May-14

ಸಾಂದರ್ಭಿಕ ಚಿತ್ರ

ಚಳ್ಳಕೆರೆ: ಕೋವಿಡ್ ಪಾಸಿಟಿವ್‌ ದೃಢಪಟ್ಟಿರುವ ಉತ್ತರಪ್ರದೇಶ ಮೂಲದ 20 ಕೂಲಿ ಕಾರ್ಮಿಕರನ್ನು ಜಿಲ್ಲಾ ಕೋವಿಡ್‌ ಆಸ್ಪತ್ರೆಗೆ ಸ್ಥಳಾಂತರಿಸದೆ ನಗರದ ಪಾವಗಡ ರಸ್ತೆಯ ಬಿಸಿಎಂ ಹಾಸ್ಟೆಲ್‌ನಲ್ಲಿಯೇ ಚಿಕಿತ್ಸೆ ನೀಡುತ್ತಿರುವುದಕ್ಕೆ ಸಾರ್ವಜನಿಕರಿಂದ ತೀವ್ರ ಅಸಮಾಧಾನ ವ್ಯಕ್ತವಾಗಿದೆ.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಿರ್ಧಾರದ ಬಗ್ಗೆ ನಗರದ ವಿವಿಧ ಪಕ್ಷಗಳ ಚುನಾಯಿತ ಸದಸ್ಯರು, ಸಂಘ ಸಂಸ್ಥೆಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಚಿತ್ರದುರ್ಗ ನಗರದಲ್ಲಿ ಪ್ರತ್ಯೇಕವಾಗಿ 100 ಹಾಸಿಗೆಗಳ ಕೋವಿಡ್‌ ಆಸ್ಪತ್ರೆ ಇದ್ದರೂ ಅಲ್ಲಿ ಕೇವಲ ಕೆಲವೇ ಜನ ಪಾಸಿಟಿವ್‌ ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ವಿಶಾಲವಾದ ಜಾಗ, ಸೌಲಭ್ಯವಿದ್ದರೂ ಪಾಸಿಟಿವ್‌ ಹೊಂದಿದ 20 ಜನ ಕಾರ್ಮಿಕರನ್ನು ಇಲ್ಲಿನ ಹಾಸ್ಟೆಲ್‌ನಲ್ಲಿಡಲು ಆರೋಗ್ಯ ಇಲಾಖೆ ನಿರ್ಧರಿಸಿ ಇಲ್ಲಿಯೇ ಅವರಿಗೆ ಚಿಕಿತ್ಸೆ ಮುಂದುವರಿಸಿರುವುದು ಸಾರ್ವಜನಿಕರು ಭಯಭೀತರಾಗುವಂತೆ ಮಾಡಿದೆ.

ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್‌ ಪ್ರಕರಣ ಕೇವಲ ಬೆರಳಿಕೆಯಷ್ಟಿದ್ದು, ಚಳ್ಳಕೆರೆ ನಗರದಲ್ಲಿ ಕ್ವಾರಂಟೈನ್‌ ಆದ ಕೂಲಿ ಕಾರ್ಮಿಕರಲ್ಲಿ 20 ಜನರಿಗೆ ಪಾಸಿಟಿವ್‌ ವರದಿ ಬಂದಿದೆ. ಇದು ಜಿಲ್ಲೆಯ ಅತಿ ದೊಡ್ಡ ಪ್ರಕರಣವಾಗಿದೆ. ಚಳ್ಳಕೆರೆ ತಾಲೂಕಿನ ಸುತ್ತಮುತ್ತಲಿನ ನೂರಾರು ಹಳ್ಳಿಗಳ ಸಾವಿರಾರು ಜನರು ಇಲ್ಲಿಗೆ ಆಗಮಿಸುತ್ತಿದ್ದು, ಕೋವಿಡ್ ಪಾಸಿಟಿವ್‌ ವ್ಯಕ್ತಿಗಳನ್ನು ಸ್ಥಳಾಂತರಿಸುವ ಒತ್ತಡ ಎಲ್ಲೆಡೆಯಿಂದ ಕೇಳಿಬರುತ್ತಿದೆ.

ನಗರಸಭಾ ಸದಸ್ಯರಾದ ಆರ್‌. ರುದ್ರನಾಯಕ, ನಾಗರಾಜ, ಹೊಯ್ಸಳ ಗೋವಿಂದ, ಸಿ. ಶ್ರೀನಿವಾಸ್‌, ವೆಂಕಟೇಶ್‌, ರಮೇಶ್‌ ಗೌಡ, ವೈ. ಪ್ರಕಾಶ್‌, ವಿರೂಪಾಕ್ಷಿ, ಚಳ್ಳಕೆರೆಯಪ್ಪ, ಕೆ. ವೀರಭದ್ರಪ್ಪ ಮುಂತಾದವರು ಜಿಲ್ಲಾ ಆರೋಗ್ಯ ಇಲಾಖೆಯ ಕ್ರಮವನ್ನು ಖಂಡಿಸಿದ್ದಾರೆ. ಯುವ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಎಚ್‌.ಎನ್‌. ಆದರ್ಶ, ನಗರದ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಆರ್‌. ಪ್ರಸನ್ನಕುಮಾರ್‌, ಕರವೇ ತಾಲೂಕು ಅಧ್ಯಕ್ಷ ಟಿ.ಜೆ. ವೆಂಕಟೇಶ್‌, ಪ್ರಗತಿಪರ ರೈತ ಆರ್‌.ಎ.ದಯಾನಂದಮೂರ್ತಿ, ಆರ್‌ .ನಾಗೇಶ್‌ ಕೂಡ ಆರೋಗ್ಯ ಇಲಾಖೆ ಕ್ರಮಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಸಾರ್ವಜನಿಕರ ವಿರೋಧದ ಹಿನ್ನೆಲೆಯಲ್ಲಿ ಸಂಸದ ಎ. ನಾರಾಯಣಸ್ವಾಮಿ ಹಾಗೂ ಶಾಸಕ ಟಿ. ರಘುಮೂರ್ತಿಯವರು, ಕೋವಿಡ್ ಸೋಂಕಿತರನ್ನು ಇಲ್ಲಿಂದ ಜಿಲ್ಲಾಸ್ಪತ್ರೆಗೆ ಸ್ಥಳಾಂತರಿಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಆದರೆ ಬುಧವಾರ ರಾತ್ರಿವರೆಗೂ ಸ್ಥಳಾಂತರ ಕಾರ್ಯ ನಡೆದಿಲ್ಲ ಎಂದು ತಿಳಿದು ಬಂದಿದೆ.

ಟಾಪ್ ನ್ಯೂಸ್

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.