ಕ್ವಾರಂಟೈನ್ನಲ್ಲಿದ್ದ ಆಂಧ್ರದ 53 ಮಂದಿ ಮನೆಗೆ
Team Udayavani, May 25, 2020, 12:56 PM IST
ಸಾಂದರ್ಭಿಕ ಚಿತ್ರ
ಚಳ್ಳಕೆರೆ: 14 ದಿನಗಳಿಂದ ನಗರದ ಬಿಸಿಎಂ ಹಾಸ್ಟೆಲ್ನಲ್ಲಿ ಕ್ವಾರಂಟೈನ್ನಲ್ಲಿದ್ದ ಆಂಧ್ರಪ್ರದೇಶದ 53 ಜನರನ್ನು ಕ್ವಾರಂಟೈನ್ನಿಂದ ಬಿಡುಗಡೆಗೊಳಿಸಿ ಸ್ವಗ್ರಾಮಗಳಿಗೆ ಮರಳುವಂತೆ ಸೂಚನೆ ನೀಡಲಾಗಿದೆ ಎಂದು ಕೋವಿಡ್ ನಿಯಂತ್ರಣ ಟಾಸ್ಕ್ಪೋರ್ಸ್ ಅಧ್ಯಕ್ಷ, ತಹಶೀಲ್ದಾರ್ ಎಂ. ಮಲ್ಲಿಕಾರ್ಜುನ್ ತಿಳಿಸಿದರು.
ಭಾನುವಾರ ಕ್ವಾರಂಟೈನ್ ಅವಧಿ ಮುಗಿಸಿದ 53 ಜನರ ಆರೋಗ್ಯ ಪರೀಕ್ಷೆ ನಡೆಸಿದ ನಂತರ ಬೀಳ್ಕೊಡುವ ಸಂದರ್ಭದಲ್ಲಿ ಅವರು ಮಾತನಾಡಿದರು. ಸರ್ಕಾರದ ನಿಯಮದ ಪ್ರಕಾರ ಕ್ವಾರಂಟೈನ್ ಮಾಡಲಾಗಿತ್ತು ಎಂದರು.
ತಾಲೂಕು ಆರೋಗ್ಯಾಧಿಕಾರಿ ಡಾ| ಎನ್. ಪ್ರೇಮಸುಧಾ ಮಾತನಾಡಿ, ಆಂಧ್ರಪ್ರದೇಶದ ಪ್ರಕಾಶಂ ಮತ್ತು ಅನಂತಪುರ ಜಿಲ್ಲೆಯಿಂದ ಖಾಸಗಿ ಕಾಲೇಜಿನ ಪ್ರಾಚಾರ್ಯ, ಉಪನ್ಯಾಸಕರೂ ಸೇರಿದಂತೆ ಹಲವಾರು ಜನರು ಚಳ್ಳಕೆರೆ ತಾಲೂಕನ್ನು ಪ್ರವೇಶಿಸಿದ್ದರು. ಮೇ 14ರಂದು ಇವರನ್ನು ತಡೆದು ಪರಿಶೀಲನೆ ನಡೆಸಿ ಕ್ವಾರಂಟೈನ್ ಮಾಡಲಾಗಿತ್ತು. ಬಿಸಿಎಂ ಹಾಸ್ಟೆಲ್, ಮೊರಾರ್ಜಿ ಶಾಲೆ, ಕಿತ್ತೂರು ರಾಣಿ ಚನ್ನಮ್ಮ ಹಾಗೂ ಖಾಸಗಿ ಲಾಡ್ಜ್ವೊಂದರಲ್ಲಿ ಇವರನ್ನು ಇಡಲಾಗಿತ್ತು. ಕೇರಳದ ನಾಲ್ವರು ಕ್ವಾರಂಟೈನ್ನಲ್ಲಿದ್ದು, ಅವರನ್ನು ಸಹ ಬಿಡುಗಡೆಗೊಳಿಸಲಾಗಿದೆ ಎಂದರು. ಆರ್ಆರ್ಟಿ ತಂಡದ ಮುಖ್ಯಸ್ಥ ಪ್ರಸನ್ನಕುಮಾರ್, ಎ. ನಾಗರಾಜು, ಚಂದ್ರಪ್ಪ, ಗಂಗಾಧರ, ಆರೋಗ್ಯ ಶಿಕ್ಷಣಾ ಧಿಕಾರಿಗಳಾದ ಎಸ್.ಬಿ. ತಿಪ್ಪೇಸ್ವಾಮಿ, ಎನ್. ಪ್ರೇಮಕುಮಾರ್, ಲ್ಯಾಬ್ ಟೆಕ್ನಿಷಿಯನ್ ಎಚ್. ತಿಪ್ಪೇಸ್ವಾಮಿ, ಕಂದಾಯಾಧಿಕಾರಿ ರಾಜೇಶ್, ವರುಣ್, ಡಿ. ಶ್ರೀನಿವಾಸ್, ಕಾರ್ತಿಕ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು
Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ
MUST WATCH
ಹೊಸ ಸೇರ್ಪಡೆ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ