ಶಂಕರಾಚಾರ್ಯರಿಂದ ಸನಾತನ ಪರಂಪರೆ ರಕ್ಷಣೆ
Team Udayavani, Apr 29, 2020, 5:18 PM IST
ಚಳ್ಳಕೆರೆ: ನಗರದ ತಾಲೂಕು ಕಚೇರಿಯಲ್ಲಿ ಶಂಕರ ಜಯಂತಿ ಆಚರಿಸಲಾಯಿತು
ಚಳ್ಳಕೆರೆ: ಭಾರತೀಯ ಸನಾತನ ಪರಂಪರೆಗೆ ವಿಶೇಷ ಮೌಲ್ಯವನ್ನು ತಂದುಕೊಟ್ಟಿದ್ದೇ ಆದಿಗುರು ಶಂಕರಾಚಾರ್ಯರು. ಕೆಲವೇ ವರ್ಷಗಳಲ್ಲಿ ಅಮೋಘ ಸಾಧನೆಯನ್ನು ದಾಖಲಿಸಿದ ಕೀರ್ತಿ ಅವರದ್ದು, ಅವರ ದೂರದೃಷ್ಟಿಯ ಫಲವಾಗಿ ಇಂದು ನಮ್ಮ ಹಿಂದೂ ಧಾರ್ಮಿಕ ಪದ್ಧತಿ ಪ್ರಜ್ವಲಿಸುತ್ತಿದೆ ಎಂದು ಶಾಸಕ ಟಿ. ರಘುಮೂರ್ತಿ ಹೇಳಿದರು.
ಮಂಗಳವಾರ ನಗರದ ತಾಲೂಕು ಕಚೇರಿ ಆವರಣದಲ್ಲಿ ಶಂಕರ ಜಯಂತಿ ಪ್ರಯುಕ್ತ ಶಂಕರಾಚಾರ್ಯರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ತಾಲೂಕು ಬ್ರಾಹ್ಮಣ ಸಂಘ ಹಮ್ಮಿಕೊಂಡಿದ್ದ ಪೂಜಾ ಕಾರ್ಯದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಭಾರತ ಪುಣ್ಯಭೂಮಿ ಎಂಬ ವಾಕ್ಯದಲ್ಲಿ ಸಂಪೂರ್ಣ ಸತ್ಯಾಂಶವಿದೆ. ಕಾರಣ ನಮ್ಮ ಧಾರ್ಮಿಕ ಪರಂಪರೆಗೆ ಅನೇಕ ಮಹನೀಯರು ತಮ್ಮದೇಯಾದ ವಿಶೇಷ ಸೇವೆಯನ್ನು ಸಲ್ಲಿಸಿದ್ದಾರೆ. ಅವರ ಹಾಕಿಕೊಟ್ಟ ಮಾರ್ಗದಲ್ಲೇ ನಾವೆಲ್ಲರೂ ನಡೆಯಬೇಕೆಂದರು.
ತಾಲೂಕಿನ ಬ್ರಾಹ್ಮಣ ಸಮುದಾಯ ಹಾಗೂ ಇನ್ನಿತರ ಬಡ ಕುಟುಂಬಗಳಿಗೆ ಸರ್ಕಾರದ ವತಿಯಿಂದ ನೀಡಲಾದ ಉಚಿತ ಆಹಾರ ಕಿಟ್ಗಳನ್ನು ಶಾಸಕರು ವಿತರಿಸಿದರು. ತಹಶೀಲ್ದಾರ್ ಎಂ. ಮಲ್ಲಿಕಾರ್ಜುನ, ಪೌರಾಯುಕ್ತ ಪಿ. ಪಾಲಯ್ಯ, ಸಿಪಿಐ ಈ. ಆನಂದ, ನಗರಸಭಾ ಸದಸ್ಯರಾದ ರಮೇಶ್ ಗೌಡ, ವೀರಭದ್ರಪ್ಪ, ಚಳ್ಳಕೆರೆಯಪ್ಪ, ವೈ. ಪ್ರಕಾಶ್, ಜಿ. ವೀರೇಶ್, ತಾಲೂಕು ಬ್ರಾಹ್ಮಣ ಸಂಘದ ಗೌರವಾಧ್ಯಕ್ಷ ಎಂ. ವಾಸುದೇವ ರಾವ್, ಅಧ್ಯಕ್ಷ ಡಾ| ಅನಂತರಾಮ್ ಗೌತಮ್, ಎನ್. ಗೋಪಿನಾಥ, ಎಂ. ಸತ್ಯನಾರಾಯಣ, ಮಹಿಳಾ ಘಟಕದ ಅಧ್ಯಕ್ಷೆ ಸೀತಾಲಕ್ಷ್ಮೀ ವಾದಿರಾಜ್, ನಿರ್ದೇಶಕರಾದ ಶೈಲಜಾ, ಶಾಂತಮ್ಮ, ಸಿ.ಎಸ್. ಗೋಪಿನಾಥ, ಮುರಳಿ, ಶ್ರೀನಾಥ, ಅನಂತಪ್ರಸಾದ್, ಲಕ್ಷ್ಮೀ ಶ್ರೀವತ್ಸ, ವಿಷ್ಣುಮೂರ್ತಿ ರಾವ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು
Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ