ಚಳ್ಳಕೆರೆಗೆ ವೇದಾವತಿ ನೀರು: ಶಾಸಕರ ಸಂತಸ
Team Udayavani, Apr 24, 2020, 4:21 PM IST
ಚಳ್ಳಕೆರೆ: ನಗರದ ನೆಹರೂ ವೃತ್ತದಲ್ಲಿ ಶಾಸಕ ಟಿ. ರಘುಮೂರ್ತಿ ಅವರನ್ನು ರೈತ ಸಂಘದ ಮುಖಂಡರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಅಭಿನಂದಿಸಿದರು.
ಚಳ್ಳಕೆರೆ: ಈ ಭಾಗದ ಸಾರ್ವಜನಿಕರು ಹಾಗೂ ರೈತರಿಗೆ ಶಾಶ್ವತ ಕುಡಿಯುವ ನೀರು ಒದಗಿಸುವ ನಿಟ್ಟಿನಲ್ಲಿ ನಡೆಸಿದ ಹೋರಾಟಕ್ಕೆ ಅಭೂತಪೂರ್ವ ಬೆಂಬಲ ವ್ಯಕ್ತವಾಗಿತ್ತು. ರೈತ ಸಂಘಟನೆಗಳ ಸಹಕಾರ ಹಾಗೂ ವಿವಿಧ ಪಕ್ಷಗಳ ಮುಖಂಡರ ನೆರವಿನಿಂದ ಈ ಕ್ಷೇತ್ರಕ್ಕೆ ವೇದಾವತಿ ನದಿ ನೀರು ಹರಿದು ಬರುವಂತಾಗಿದೆ ಎಂದು ಶಾಸಕ ಟಿ. ರಘುಮೂರ್ತಿ ಸಂತಸ ವ್ಯಕ್ತಪಡಿಸಿದರು.
ಹಿರಿಯೂರು ತಾಲೂಕಿನ ವಿವಿ ಸಾಗರದಲ್ಲಿ ನೀರು ಹರಿಸುವ ಕಾರ್ಯಕ್ಕೆ ಚಾಲನೆ ನೀಡಿದ ನಂತರ ಚಳ್ಳಕೆರೆಗೆ ಮರಳಿದ ಶಾಸಕರನ್ನು ನೆಹರೂ ವೃತ್ತದಲ್ಲಿ ರೈತ ಸಂಘದ ಧುರೀಣರಾದ ಸೋಮಗುದ್ದು ರಂಗಸ್ವಾಮಿ, ಕೆ.ಪಿ. ಭೂತಯ್ಯ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಅಭಿನಂದಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಚಳ್ಳಕೆರೆ ವಿಧಾನಸಭಾ ಕ್ಷೇತ್ರಕ್ಕೆ ವಿವಿ ಸಾಗರದಿಂದ ನೀರು ತರುವ ಕಾರ್ಯಕ್ಕೆ ಆರಂಭದ ಹಂತದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಅಂದಿನ ಜಲಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ್, ಜಿಲ್ಲಾ ಉಸ್ತುವಾರಿ ಮಾಜಿ ಸಚಿವ ಎಚ್. ಆಂಜನೇಯ, ಮಾಜಿ ಸಂಸದ ಬಿ.ಎನ್. ಚಂದ್ರಪ್ಪ ಸಹಕಾರ ನೀಡಿದ್ದರು. ಈಗಿನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೀರು ಹರಿಸುವ ಕಾರ್ಯಕ್ಕೆ ಆದೇಶ ನೀಡಿದರು. ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಈ ಭಾಗದ ಜನರ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ನೀಡಿದ್ದಾರೆ ಎಂದರು. ಅಖಂಡ ಕರ್ನಾಟಕ ರೈತ ಸಂಘದ ರಾಜ್ಯಾಧ್ಯಕ್ಷ ಸೋಮಗುದ್ದು ರಂಗಸ್ವಾಮಿ, ರೈತ ಸಂಘ ಹಾಗೂ ಹಸಿರುಸೇನೆಯ ರಾಜ್ಯ ಉಪಾಧ್ಯಕ್ಷ ಕೆ.ಪಿ. ಭೂತಯ್ಯ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು
Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ