ತರಾಸು ಜಯಂತಿ ಸರ್ಕಾರಿ ಆಚರಣೆಯಾಗಲಿ
Team Udayavani, Apr 22, 2021, 6:59 PM IST
ಚಿತ್ರದುರ್ಗ: ಸಾಹಿತ್ಯದ ಮೂಲಕ ದುರ್ಗದ ಇತಿಹಾಸವನ್ನು ನಾಡಿನೆಲ್ಲೆಡೆ ಪಸರಿಸಿದ ತರಾಸು ಜನ್ಮ ದಿನಾಚರಣೆಯನ್ನು ಸರ್ಕಾರಿ ಜಯಂತಿಯಾಗಿ ಆಚರಿಸಬೇಕು ಎಂದು ನಗರಸಭೆ ಮಾಜಿ ಸದಸ್ಯ ಕೆ. ನಾಗರಾಜ್ ಒತ್ತಾಯಿಸಿದರು.
ಸಾಹಿತಿ ತರಾಸು ಅವರ 101ನೇ ಜಯಂತಿ ಅಂಗವಾಗಿ ನಗರದ ಶ್ರೀಕೃಷ್ಣರಾಜೇಂದ್ರ ಕೇಂದ್ರ ಗ್ರಂಥಾಲಯದ ಆವರಣದಲ್ಲಿರುವ ತರಾಸು ಪುತ್ಥಳಿಗೆ ಮಾಲಾರ್ಪಣೆ ಮಾಡಿ ಅವರು ಮಾತನಾಡಿದರು. ಐತಿಹಾಸಿಕ ಚಿತ್ರದುರ್ಗ ನಗರ ದೇವತೆಗಳಾದ ಏಕನಾಥೇಶ್ವರಿ, ಉಚ್ಚಂಗೆಲ್ಲಮ್ಮ, ಬರಗೇರಮ್ಮ, ತಿಪ್ಪಿನಘಟ್ಟಮ್ಮನವರ ಆಶೀರ್ವಾದ ತರಾಸುರವರ ಮೇಲಿದ್ದುದರಿಂದ ದುರ್ಗಾಸ್ತಮಾನದಂತಹ ಐತಿಹಾಸಿಕ ಕಾದಂಬರಿ ಬರೆದು ಮುಗಿಸಿದರು. ರಾಜ್ಯ ಸರ್ಕಾರ ಎಲ್ಲರ ಜಯಂತಿಗಳನ್ನು ಆಚರಿಸುತ್ತಿದೆ. ಅದೇ ರೀತಿ ತರಾಸು ಅವರಂತಹ ಮಹಾನ್ ಸಾಹಿತಿಯ ಜಯಂತಿಯನ್ನೂ ಆಚರಿಸಬೇಕೆಂದರು.
ಡಾ| ರಾಮಚಂದ್ರ ನಾಯಕ ಮಾತನಾಡಿ, ಐತಿಹಾಸಿಕ ಚಿತ್ರದುರ್ಗದಲ್ಲಿ ರಾಜವೀರ ಮದಕರಿ ನಾಯಕನ ಪ್ರತಿಮೆ ನಿರ್ಮಾಣವಾಗಬೇಕೆಂಬುದು ತರಾಸುರವರ ಕನಸಾಗಿತ್ತು. ಅವರ ಆಸೆಯಂತೆ ಪ್ರತಿಮೆ ನಗರದಲ್ಲಿ ರಾರಾಜಿಸುತ್ತಿದೆ. ಶ್ರೀಕೃಷ್ಣರಾಜೇಂದ್ರ ಕೇಂದ್ರ ಗ್ರಂಥಾಲಯ ಮುಂದೆ ಕಂಚಿನ ಪ್ರತಿಮೆ ನಿರ್ಮಾಣವಾಗಲಿ. ತರಾಸುರವರ ಪುಸ್ತಕಗಳು ಗ್ರಂಥಾಲಯದಲ್ಲಿ ಎಲ್ಲರಿಗೂ ಓದಲು ಸಿಗುವಂತಾಗಬೇಕೆಂದು ಮನವಿ ಮಾಡಿದರು.
ಶ್ರೀಕೃಷ್ಣರಾಜೇಂದ್ರ ಕೇಂದ್ರ ಗ್ರಂಥಾಲಯದ ಅ ಧಿಕಾರಿ ತಿಪ್ಪೇಸ್ವಾಮಿ ಮಾತನಾಡಿ, ಕೊರೊನಾ ವ್ಯಾಪಕವಾಗಿ ಹರಡುತ್ತಿರುವುದರಿಂದ ಈ ಬಾರಿ ತರಾಸುರವರ 101ನೇ ಜಯಂತಿಯನ್ನು ಸರಳವಾಗಿ ಆಚರಿಸಲಾಗುತ್ತಿದೆ. ಚಿತ್ರದುರ್ಗದ ಇತಿಹಾಸವನ್ನು ಬೆಳಕಿಗೆ ತಂದ ಶ್ರೇಷ್ಠ ಸಾಹಿತಿ ತರಾಸುರವರ ಪುಸ್ತಕಗಳನ್ನು ವಿಶೇಷವಾಗಿ ವಿದ್ಯಾರ್ಥಿಗಳು ಓದಿದಾಗ ಇತಿಹಾಸದ ಜ್ಞಾನ ಮೂಡುತ್ತದೆ. ಮುಂದಿನ ದಿನಗಳಲ್ಲಿ ಈ ಪ್ರತಿಮೆಗೆ ಹೊಸ ರೂಪ ಕೊಡಲಾಗುವುದೆಂದು ತಿಳಿಸಿದರು.
ಡಾ| ಮಂಜುನಾಥ್, ಜಯಣ್ಣ ಸೇರಿದಂತೆ ವಿದ್ಯಾರ್ಥಿಗಳು, ತರಾಸು ಅಭಿಮಾನಿಗಳು ಜಯಂತಿಯಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಚಿತ್ರದುರ್ಗ-ಬಸವ ತತ್ವ ಪ್ರತಿ ಮನೆಗೆ ತಲುಪಲಿ: ಡಾ| ಬಸವಕುಮಾರ ಶ್ರೀ
Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ
Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
MUST WATCH
ಹೊಸ ಸೇರ್ಪಡೆ
PM Modi: ಕಲಬುರಗಿಗೆ ಇಂದು ಪ್ರಧಾನಿ ನರೇಂದ್ರ ಮೋದಿ
Crime; ಕ್ಯಾಸನಮಕ್ಕಿ: ಮನೆಗೆ ಬೆಂಕಿ ಹೆಚ್ಚಿ ವ್ಯಕ್ತಿ ಪರಾರಿ
ಲಾ ಸೇವ್ಯು ಬೇಕರಿ – ಸಂಸ್ಥೆಯಿಂದ ಬೀಡಿನಗುಡ್ಡೆಯಲ್ಲಿ ಮೇ 24-26: “ಆಹಾರ-ವ್ಯಾಪಾರ ಮೇಳ-2024′
Madikeri: ಪ್ರೌಢ ಶಾಲಾ ವಿದ್ಯಾರ್ಥಿನಿಯ ಕೊಲೆ ಪ್ರಕರಣ; ಆರೋಪಿ ಪತ್ತೆಗೆ ತನಿಖೆ ಚುರುಕು
Missing Case: ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಸುಳ್ಯದ ಅರಂತೋಡಿನಲ್ಲಿ ಪತ್ತೆ