ಮರದ ನೆರಳಿನಲ್ಲಿ ನಡೆದಿದೆ ಚಿಣ್ಣರ ಅಕ್ಷರಾಭ್ಯಾಸ!


Team Udayavani, Jun 11, 2018, 4:30 PM IST

chit.jpg

ಚಳ್ಳಕೆರೆ: ಗ್ರಾಮೀಣ ಪ್ರದೇಶದಲ್ಲಿರುವ ಬಹುತೇಕ ಅಂಗನವಾಡಿ ಕೇಂದ್ರಗಳಲ್ಲಿ ಮೂಲ ಸೌಕರ್ಯ ಕೊರತೆ ಎದುರಿಸುತ್ತಿವೆ. ತಾಲೂಕಿನ ನಾಯಕನಹಟ್ಟಿ ಹೋಬಳಿಯ ಓಬಯ್ಯನಹಟ್ಟಿ ಗೊಲ್ಲರಹಟ್ಟಿಯಲ್ಲೂ ಇದೇ ಪರಿಸ್ಥಿತಿ ಇದ್ದು ಚಿಣ್ಣರು ಕಟ್ಟಡವಿಲ್ಲದೆ ಮರದ ನೆರಳಿನಲ್ಲಿ ಅಕ್ಷರಾಭ್ಯಾಸ ಮಾಡಬೇಕಾಗಿದೆ.

ಕಳೆದ ಸುಮಾರು 8-10 ವರ್ಷಗಳಿಂದ ಓಬಯ್ಯನಹಟ್ಟಿ ಗೊಲ್ಲರಹಟ್ಟಿಯಲ್ಲಿ ಅಂಗನವಾಡಿ ಕೇಂದ್ರವಿದೆ. ಕಟ್ಟಡ ಶಿಥಿಲಗೊಂಡ ಹಿನ್ನೆಲೆಯಲ್ಲಿ 2013-14ರಲ್ಲಿ ಕಟ್ಟಡವನ್ನು ನೆಲಸಮಗೊಳಿಸಲಾಗಿದೆ. ಮತ್ತೂಂದು ಹೊಸ ಕಟ್ಟಡ ನಿರ್ಮಾಣಕ್ಕೆ ಬುನಾದಿ ಹಾಕಿ ಐದು ವರ್ಷಗಳು ಕಳೆದಿದ್ದರೂ ಕಟ್ಟಡ ಮಾತ್ರ ನಿರ್ಮಾಣವಾಗಿಲ್ಲ.

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳಿಗೆ ಸಾಕಷ್ಟು ಬಾರಿ ಮನವಿ
ಮಾಡಿದ್ದರೂ ಪ್ರಯೋಜನವಾಗಿಲ್ಲ.  ಕಟ್ಟಡ ಇಲ್ಲದ್ದರಿಂದ ಅಂಗನವಾಡಿ ಮಕ್ಕಳು ಕಟ್ಟಡ ಸಮೀಪ ಇರುವ ಮರದ ನೆರಳಿನಲ್ಲಿ ಕುಳಿತು ಪಾಠ ಕಲಿಯುತ್ತಿದ್ದಾರೆ. ಮಳೆಗಾಲದಲ್ಲಿ ಅಂಗನವಾಡಿ ಕೇಂದ್ರವನ್ನು ಅನಿವಾರ್ಯವಾಗಿ ಮುಚ್ಚಬೇಕಾಗಿದೆ. ಪುಟ್ಟ ಮಕ್ಕಳು ಬಯಲು ಪ್ರದೇಶದಲ್ಲಿ ಅಭ್ಯಾಸ ಮಾಡುವ ಸ್ಥಿತಿ ನಿರ್ಮಾಣವಾಗಿದೆ. 

ಮಕ್ಕಳ ಹಿತದೃಷ್ಟಿಯಿಂದ ಬಾಡಿಗೆ ಕಟ್ಟಡ ಅಥವಾ ಸರ್ಕಾರದ ಯಾವುದೇ ಇಲಾಖೆಯ ಕಟ್ಟಡವನ್ನು ಅಂಗನವಾಡಿಗೆ
ಪಡೆದುಕೊಳ್ಳಬಹುದಿತ್ತು. ಅಂಗನವಾಡಿಯಲ್ಲಿ ಕಾರ್ಯಕರ್ತೆ ಹಾಗೂ ಸಹಾಯಕಿ ಇದ್ದು, 13 ಮಕ್ಕಳು ಇಲ್ಲಿ ಕಲಿಯುತ್ತಿದ್ದಾರೆ. ಮರದ ಕೆಳಗೆ ಮಕ್ಕಳು ವಿದ್ಯಾಭ್ಯಾಸ  ಮಾಡುತ್ತಿರುವುದುರಿಂದ ಯಾವುದೇ ಕ್ಷಣದಲ್ಲಿ ಅಪಾಯ ಸಂಭವಿಸುವ ಭೀತಿ ಇದೆ.

ನನೆಗುದಿಗೆ ಬಿದ್ದಿರುವ ಅಂಗನವಾಡಿ ಕಟ್ಟಡವನ್ನು ಆದಷ್ಟು ಬೇಗ ಪೂರ್ಣಗೊಳಿಸಬೇಕು. ಮೂಲ ಸೌಲಭ್ಯ ಕಲ್ಪಿಸಿ ಗ್ರಾಮಸ್ಥರ ಭೀತಿಯನ್ನು ದೂರ ಮಾಡಲು ಶಿಶು ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಮುಂದಾಗಬೇಕು ಎಂದು
ಗ್ರಾಮದ ಯುವಕರಾದ ಗುರು ಯಾದವ್‌, ಬಸಣ್ಣ, ಬೋಸಲಿಂಗಯ್ಯ, ಬೋರಯ್ಯ ಮತ್ತಿತರರು ಒತ್ತಾಯಿಸಿದ್ದಾರೆ.

ಕಳೆದ ಹತ್ತಾರು ವರ್ಷಗಳಿಂದ ನಮ್ಮ ಗ್ರಾಮದ ಪುಟ್ಟ ಮಕ್ಕಳು ಅಕ್ಷರ ಕಲಿಯಲು ಅಂಗನವಾಡಿ ಕೇಂದ್ರಕ್ಕೆ ಹೋಗಿ  ಬರುತ್ತಾರೆ. ಆದರೆ ಸುಸಜ್ಜಿತವಾದ ಕಟ್ಟಡವಿಲ್ಲ. ಬಯಲಿನಲ್ಲೇ ವಿದ್ಯಾಭ್ಯಾಸ ಮಾಡಬೇಕಾಗಿದೆ. ಮಳೆ, ಗಾಳಿ, ಗುಡುಗು, ಸಿಡಿಲು ಉಂಟಾದಲ್ಲಿ ಮಕ್ಕಳ ಪೋಷಕರು ಹೋಗಿ ಮನೆಗೆ ಕರೆದುಕೊಂಡು ಬರಬೇಕಿದೆ. ಆದ್ದರಿಂದ ಕೂಡಲೇ ಕಟ್ಟಡ ನಿರ್ಮಿಸಿಕೊಡಬೇಕು. 
 ಶಿವು ಯಾದವ್‌, ಗ್ರಾಮಸ್ಥ

 ಓಬಯ್ಯನಹಟ್ಟಿ ಗೊಲ್ಲರಹಟ್ಟಿಯ ಅಂಗನವಾಡಿ ಕಟ್ಟಡದ ಬುನಾದಿ ಕಾರ್ಯ ಪೂರ್ಣಗೊಂಡಿದೆ. ಈ ಕಟ್ಟಡವನ್ನು
ಆದಷ್ಟು ಬೇಗ ನಿರ್ಮಿಸುವಂತೆ ಹಿರಿಯ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ವಿಧಾನಸಭೆ ಚುನಾವಣೆ ಇದ್ದಿದ್ದರಿಂದ ವಿಳಂಬವಾಗಿದೆ. ಮಕ್ಕಳ ಹಿತದೃಷ್ಟಿಯಿಂದ ಶೀಘ್ರದಲ್ಲೇ ಅಂಗನವಾಡಿ ಕಟ್ಟಡ ನಿರ್ಮಾಣ ಮಾಡಲಾಗುವುದು.
 ಸಿ.ಕೆ. ಗಿರಿಜಾಂಬ, ಸಿಡಿಪಿಒ.

„ಕೆ.ಎಸ್‌. ರಾಘವೇಂದ್ರ

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

BY Raghavendra ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸ್‌ ದಾಖಲು

BY Raghavendra ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸ್‌ ದಾಖಲು

Gas ಸಿಲಿಂಡರ್ ಸ್ಫೋಟ: ಮನೆ ಸಂಪೂರ್ಣ ಭಸ್ಮ

Gas ಸಿಲಿಂಡರ್ ಸ್ಫೋಟ: ಮನೆ ಸಂಪೂರ್ಣ ಭಸ್ಮ

ಬೈಕ್ ಗೆ ಡಿಕ್ಕಿ ಹೊಡೆದ ಟಾಟಾ ಏಸ್… ಓರ್ವ ಸ್ಥಳದಲ್ಲೇ ಮೃತ್ಯು, ಇನ್ನೋರ್ವ ಗಂಭೀರ

ಬೈಕ್ ಗೆ ಡಿಕ್ಕಿ ಹೊಡೆದ ಟಾಟಾ ಏಸ್… ಓರ್ವ ಸ್ಥಳದಲ್ಲೇ ಮೃತ್ಯು, ಇನ್ನೋರ್ವ ಗಂಭೀರ

ISRO Success: ಅಂತರಿಕ್ಷ ನೌಕೆ ‘ಪುಷ್ಪಕ್‌’ ಲ್ಯಾಂಡಿಂಗ್ ಪರೀಕ್ಷೆ ಯಶಸ್ವಿ…

ISRO ಸಾಧನೆ: ಅಂತರಿಕ್ಷ ನೌಕೆ ‘ಪುಷ್ಪಕ್‌’ ಲ್ಯಾಂಡಿಂಗ್ ಪರೀಕ್ಷೆ ಯಶಸ್ವಿ…

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.