ಟೊಮ್ಯಾಟೋ ಖರೀದಿ ಕೇಂದ್ರ ಶುರು


Team Udayavani, Jul 16, 2021, 10:58 PM IST

16-20

„ಕೆ.ಎಸ್‌. ರಾಘವೇಂದ್ರ

ಚಳ್ಳಕೆರೆ: ತಾಲೂಕಿನಲ್ಲಿ ಟೊಮ್ಯಾಟೋವನ್ನು ಹೆಚ್ಚಿನ ಪ್ರಮಾಣದಲ್ಲಿ ಬೆಳೆಯಲಾಗುತ್ತಿದೆ. ಆದರೆ ಮಾರುಕಟ್ಟೆ ಸೌಲಭ್ಯ ಇಲ್ಲದ್ದರಿಂದ ಕೋಲಾರ ಸೇರಿದಂತೆ ದೂರದ ನಗರ ಪ್ರದೇಶಗಳಿಗೆ ಟೊಮ್ಯಾಟೋ ಕಳುಹಿಸಿ ಮಾರಾಟ ಮಾಡುವ ಪರಿಸ್ಥಿತಿ ಇತ್ತು. ಇದರಿಂದ ಬೆಳೆಗಾರರಿಗೆ ಅನಾನುಕೂಲವಾಗುತ್ತಿರುವುದನ್ನು ಮನಗಂಡ ಇಬ್ಬರು ವರ್ತಕರು ತಮ್ಮದೇ ಖರ್ಚಿನಲ್ಲಿ ಟೊಮ್ಯಾಟೋ ಖರೀದಿ ಕೇಂದ್ರ ಆರಂಭಿಸಿದ್ದಾರೆ.

ಸಾವಿರಾರು ರೂ. ಸಾಗಾಣಿಕೆ ವೆಚ್ಚ ನೀಡಿ ಮಾರಾಟ ಮಾಡಿ ನಷ್ಟ ಅನುಭವಿಸುತ್ತಿದ್ದ ಟೊಮ್ಯಾಟೋ ಬೆಳೆಗಾರರು ಖರೀದಿ ಕೇಂದ್ರ ಆರಂಭದಿಂದ ಸಂತಸಗೊಂಡಿದ್ದಾರೆ. ಪ್ರತಿನಿತ್ಯ ನೂರಾರು ಗ್ರಾಮಗಳಿಂದ ಗುಣಮಟ್ಟದ ಟೊಮ್ಯಾಟೋದ ಸಾವಿರಾರು ಬಾಕ್ಸ್‌ಗಳನ್ನು ಕೋಲಾರದ ಮಾರುಕಟ್ಟೆಗೆ ಕಳುಹಿಸಲಾಗುತ್ತಿತ್ತು. ಅಲ್ಲಿ ಕೆಲವೊಮ್ಮೆ ಉತ್ತಮ ಬೆಲೆ ದೊರೆತರೂ ಹೆಚ್ಚಿನ ಲಾಭವಾಗುತ್ತಿರಲಿಲ್ಲ.

ವಾಹನ ಬಾಡಿಗೆಯನ್ನೂ ಪಾವತಿಸಲಾಗದ ಸ್ಥಿತಿ ನಿರ್ಮಾಣವಾಗುತ್ತಿತ್ತು. ಈ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ತಾಲೂಕಿನ ದೊಡ್ಡಉಳ್ಳಾರ್ತಿ ಗ್ರಾಮದ ವೆಂಕಟೇಶ ರೆಡ್ಡಿ ಹಾಗೂ ಅನಂತಪುರದ ಗುರುಮೂರ್ತಿ ಚಿಕ್ಕಮ್ಮನಹಳ್ಳಿ ಬಳಿ ವಿಶಾಲವಾದ ಶೆಡ್‌ ನಿರ್ಮಿಸಿ ಅಲ್ಲಿ ರೈತರಿಂದ ಟೊಮ್ಯಾಟೋ ಖರೀದಿಸುತ್ತಿದ್ದಾರೆ. ಈ ಬಗ್ಗೆ ಪತ್ರಿಕೆಯೊಂದಿಗೆ ಮಾತನಾಡಿದ ಖರೀದಿದಾರ ವೆಂಕಟೇಶ ರೆಡ್ಡಿ, ಭಾನುವಾರ ನಾವು ಖರೀದಿ ಕೇಂದ್ರ ಆರಂಭಿಸಿದ್ದೇವೆ.

ಈ ಸುದ್ದಿ ತಿಳಿದ ಸುತ್ತಮುತ್ತಲಿನ 100ಕ್ಕೂ ಹೆಚ್ಚು ಟೊಮ್ಯಾಟೋ ಬೆಳೆಗಾರರು ಉತ್ಸಾಹದಿಂದ ಟೊಮ್ಯಾಟೋ ಮಾರಾಟ ಮಾಡಿದ್ದಾರೆ. ಕೇವಲ ಎರಡೇ ದಿನದಲ್ಲಿ 5600 ಬಾಕ್ಸ್‌ ಟೊಮ್ಯಾಟೋ ಚಳ್ಳಕೆರೆ, ಜಗಳೂರು, ಕೂಡ್ಲಗಿ, ಹೊಸಪೇಟೆ, ಬಳ್ಳಾರಿ, ಹಿರಿಯೂರು, ಚಿತ್ರದುರ್ಗ, ದಾವಣಗೆರೆ, ಹೊಸದುರ್ಗ, ಹೊಳಲ್ಕೆರೆ ಮೊದಲಾದ ಕಡೆಗಳಿಂದ ಬಂದಿದೆ. ಕೋಲಾರಕ್ಕೆ ತೆರಳಿದರೆ 10 ರಿಂದ 12 ಸಾವಿರ ರೂ. ಬಾಡಿಗೆ ಹಾಗೂ ಇನ್ನಿತರ ವೆಚ್ಚವಾಗುತ್ತಿತ್ತು. ಆದರೆ ಈಗ ಬಾಕ್ಸ್‌ಗೆ 100 ರಿಂದ 200 ರೂ. ದೊರೆತರೂ ರೈತರಿಗೆ ಏನಿಲ್ಲ ಎಂದರೂ 15 ರಿಂದ 20 ಸಾವಿರ ರೂ. ಲಾಭವಾಗುತ್ತಿದೆ. ವಾಹನ ವೆಚ್ಚ ಹಾಗೂ ಅನಗತ್ಯ ಖರ್ಚು ಉಳಿಯುತ್ತದೆ ಎಂದು ತಿಳಿಸಿದರು.

ಒಟ್ಟಿನಲ್ಲಿ ಸ್ಥಳೀಯವಾಗಿಯೇ ಟೊಮ್ಯಾಟೋ ಖರೀದಿ ಕೇಂದ್ರ ಆರಂಭಗೊಂಡಿದ್ದರಿಂದ ಬೆಳೆಗಾರರಿಗೆ ಅನುಕೂಲವಾಗುತ್ತಿದೆ. ಇಬ್ಬರು ವರ್ತಕರ ಪ್ರಯತ್ನಕ್ಕೆ ಉತ್ತಮ ಸ್ಪಂದನೆ ದೊರೆತಿದ್ದು, ಇದು ಹೀಗೆಯೇ ಮುಂದುವರೆಯಬೇಕಿದೆ.

ಟಾಪ್ ನ್ಯೂಸ್

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.