ವಾಸ್ತವಿಕತೆ ತಪಸ್ಸಿಗೆ ಸಮಾನ: ಮುರುಘಾ ಶರಣರು


Team Udayavani, Aug 23, 2021, 7:03 PM IST

23-12

ಚಿತ್ರದುರ್ಗ: ಭೌತಿಕತೆ ಕಡೆ ಸಾಗುವವರಿಗೆ ವಾಸ್ತವಿಕತೆಯ ಅರಿವಾಗುವುದಿಲ್ಲ. ಆಗೊಮ್ಮೆ ಈಗೊಮ್ಮೆ ಬರುವ ಸುಖ, ದುಃಖ ಶಾಶ್ವತವಲ್ಲ. ಸುಖವನ್ನು ಮಾನವ ಮರೆಯುತ್ತಾ ಹೋಗುತ್ತಾನೆ. ಆದರೆ ಅವನು ಅನುಭವಿಸಿದ ದುಃಖ ಯಾತನೆಯನ್ನು ಮರೆಯುವುದಿಲ್ಲ. ಹಾಗಾಗಿ ಅವಾಸ್ತವಿಕತೆಯಿಂದ ವಾಸ್ತವಿಕತೆಯ ಕಡೆಗೆ ಪಯಣಿಸುತ್ತಾ ಬದುಕು ಕಟ್ಟಿಕೊಳ್ಳಬೇಕು ಎಂದು ಡಾ| ಶಿವಮೂರ್ತಿ ಮುರುಘಾ ಶರಣರು ಹೇಳಿದರು. ಸದಾಶಿವನಗರ ಬಡಾವಣೆಯ ಶಂಕರಾಚಾರ್‌ ನಿವಾಸದ ಬಳಿ ನಡೆದ “ನಿತ್ಯ ಕಲ್ಯಾಣ’ ಕಾರ್ಯಕ್ರಮದಲ್ಲಿ ಮಾತನಾಡಿದರು.

ವಾಸ್ತವಿಕತೆ ಎನ್ನುವುದು ತತ್ವ. ವಾಸ್ತವಿಕತೆಯ ಬಗ್ಗೆ ಜನರಿಗೆ ಅರಿವು ಇಲ್ಲ. ಅವಾಸ್ತವಿಕತೆ ಎಂದರೆ ನಾಟಕೀಯವಾಗಿರುವುದು ಮತ್ತು ನಯವಂಚಕತನದಿಂದ ಇರುವಿಕೆ. ವಾಸ್ತವಿಕೆ ಅಂದರೆ ಸಹಜವಾಗಿ ಇರುವುದು. ಸಹಜತೆ ಮಾತ್ರವಲ್ಲ ನೈಜತೆ, ಸಮತೋಲನ ಸ್ಥಿತಿಯಿಂದ ಕೂಡಿದ್ದಾಗಿದೆ. ವಾಸ್ತವಿಕತೆಯ ಅರಿವು ಜನರಿಗಾಗಬೇಕು. ವಾಸ್ತವಿಕತೆ ಇರುವವರು ಮಾನ, ಅಪಮಾನವನ್ನು ಸಮಾನವಾಗಿ ಸ್ವೀಕರಿಸುತ್ತಾರೆ.

ವಾಸ್ತವಿಕತೆ ತಪಸ್ಸಿಗೆ ಸಮಾನ ಎಂದರು. ಭೌತಿಕತೆ ಕಡೆ ಸಾಗುವವರಿಗೆ ವಾಸ್ತವಿಕತೆಯ ಅರಿವಾಗುವುದಿಲ್ಲ. ಅಂಥವರು ಕುಗ್ಗಿ ಹೋಗುತ್ತಾರೆ. ಸಣ್ಣದಾದ ದುಃಖದಿಂದ ಕೆಲವರು ವೇದನೆಗೆ ಒಳಗಾಗುತ್ತಾರೆ. ಸಣ್ಣದಾದ ಸುಖ ಬಂದರೆ ಹಿಗ್ಗುತ್ತಾರೆ. ಆಗೊಮ್ಮೆ ಈಗೊಮ್ಮೆ ಬರುವ ಸುಖ, ದುಃಖ ಶಾಶ್ವತವಲ್ಲ. ಸುಖವನ್ನು ಮಾನವ ಮರೆಯುತ್ತಾ ಹೋಗುತ್ತಾನೆ. ಆದರೆ ಅವನು ಅನುಭವಿಸಿದ ದುಃಖ, ಯಾತನೆ ಮರೆಯುವುದಿಲ್ಲ. ಹಾಗಾಗಿ ಅವಾಸ್ತವಿಕತೆಯಿಂದ ವಾಸ್ತವಿಕತೆಯ ಕಡೆಗೆ ಪಯಣ ಮಾಡಬೇಕು ಎಂದು ತಿಳಿಸಿದರು.

ಸಮ್ಮುಖ ವಹಿಸಿದ್ದ ತಿಳುವಳ್ಳಿ ಕಲ್ಮಠದ ಶ್ರೀ ಬಸವ ನಿರಂಜನ ಸ್ವಾಮಿಗಳು ಮಾತನಾಡಿ, ವಾಸ್ತವಿಕತೆ ಎಂದರೆ ಇರುವುದು, ಅವಾಸ್ತವಿಕತೆ ಎಂದರೆ ಇಲ್ಲದಿರುವುದು. ಇದ್ದುದರಲ್ಲೆ ಸಂತೋಷ ಕಾಣುವ ಪ್ರವೃತ್ತಿ ನಮ್ಮದಾಗಬೇಕು. ನಾವು ಆಕಾಶಕ್ಕೆ ಏಣಿ ಹಾಕಲು ಸಾಧ್ಯವಿಲ್ಲ. ಆಸೆ ಒಳ್ಳೆಯದಲ್ಲ. ತೃಪ್ತ ಭಾವನೆ ಇದ್ದರೆ ದುಃಖ ಬರುವುದಿಲ್ಲ. ಸಹಜವಾಗಿ ಸರಳವಾಗಿ ಜೀವನ ರೂಢಿಸಿಕೊಳ್ಳಬೇಕು. ಮೌಢಾÂಚರಣೆಗಳನ್ನು ಬದಿಗೊತ್ತಬೇಕು ಎಂದು ತಿಳಿಸಿದರು.

ವಿಶ್ವಕರ್ಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬು ಪತ್ತಾರ್‌ ಮಾತನಾಡಿ, ಈ ಮೊದಲು ಪುರಾಣ, ಕಥೆಗಳನ್ನು ನಮ್ಮ ಹಿರಿಯರು ಕೇಳುತ್ತಿದ್ದರು ಹಾಗೂ ಹೇಳುತ್ತಿದ್ದರು. ಕಷ್ಟ, ಸುಖಗಳನ್ನು ಹಂಚಿಕೊಳ್ಳುತ್ತಿದ್ದರು. ಇಂದು ತಂತ್ರಜ್ಞಾನದಿಂದ ಅಂತಹ ಕಾರ್ಯಕ್ರಮಗಳು ಕಡಿಮೆಯಾಗುತ್ತಿವೆ. ನಮ್ಮದು ಬಸವಣ್ಣನವರ ನಾಡು. ಅವರ ವಚನಗಳು ಜಗತ್ತಿನಾದ್ಯಂತ ಪರಿಚಯವಾಗಿವೆ. ಅಂಥ ವಚನಗಳನ್ನು ನಮ್ಮ ಮಕ್ಕಳಿಗೆ ತಿಳಿಸಬೇಕು ಎಂದು ಹೇಳಿದರು. ಉಪ್ಪಾರ ಸಮುದಾಯ ನಿಗಮದ ಅಧ್ಯಕ್ಷ ಗಿರೀಶ್‌ ಮಾತನಾಡಿದರು.

ನಗರಸಭಾ ಉಪಾಧ್ಯಕ್ಷೆ ಶ್ವೇತಾ ವೀರೇಶ್‌ ವೇದಿಕೆಯಲ್ಲಿದ್ದರು. ಜಮುರಾ ಕಲಾವಿದರು ಪ್ರಾರ್ಥಿಸಿದರು. ಕಾರ್ಯಕ್ರಮದ ದಾಸೋಹಿ ಶಂಕರಾಚಾರ್‌ ಸ್ವಾಗತಿಸಿದರು.

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.