ಮಹಿಳೆಯರ ಬಗೆಗಿನ ದೃಷ್ಟಿಕೋನ ಬದಲಾಗಲಿ: ಪಂಡಿತಾರಾಧ್ಯ ಶ್ರೀ


Team Udayavani, Nov 2, 2020, 7:20 PM IST

cd-tdy-1

ಹೊಸದುರ್ಗ: ಪುರುಷ ಸಮಾಜ ಮಹಿಳೆಯರ ಬಗೆಗಿನ ದೃಷ್ಟಿಕೋನವನ್ನು ಬದಲಾಯಿಸಿಕೊಳ್ಳಬೇಕು. ಆಗ ಮನುಕುಲದ ಉದ್ಧಾರ ಸಾಧ್ಯ ಎಂದು ಡಾ| ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ತಾಲೂಕಿನ ಸಾಣೇಹಳ್ಳಿ ಮಠದಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಅಂತರ್ಜಾಲ ನಾಟಕೋತ್ಸವದ ಮೊದಲನೇ ದಿನವಾದ ಭಾನುವಾರ ನಡೆದ “ಮಹಿಳೆಯರು ಮತ್ತುಸಾಮಾಜಿಕ ಜವಾಬ್ದಾರಿ’ ಕುರಿತು ಚಿಂತನ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಶ್ರೀಗಳು ಮಾತನಾಡಿದರು. 12ನೆಯ ಶತಮಾನದಲ್ಲಿ ಶರಣರು ಮಹಿಳೆಯರಿಗೆ ಕೊಟ್ಟಷ್ಟು ಸ್ವಾತಂತ್ರ್ಯವನ್ನು ಪ್ರಪಂಚಲ್ಲಿ ಯಾರೂ ಕೊಟ್ಟಿಲ್ಲ. ಶರಣರು “ನಡುವೆ ಸುಳಿವಾತ್ಮ ಹೆಣ್ಣೂ ಅಲ್ಲ, ಗಂಡೂ ಅಲ್ಲ’ ಎನ್ನುವ ಮೂಲಕ ಸ್ತ್ರೀ ಪುರುಷರಲ್ಲಿ ಸಮಾನತೆಯನ್ನು ಸಾಧಿಸಿದರು. ಪರಧನ, ಪರಸ್ತ್ರೀ ಬೇಡವೆಂಬ ಛಲವಿರಬೇಕು, ಪರ ವಧುವನ್ನು ಮಹಾದೇವಿ ಎಂದು ಭಾವಿಸಬೇಕು ಎಂದಿದ್ದಾರೆ. ಶರಣರ ಇಂಥ ಮಾತುಗಳನ್ನು ಸಾಕ್ಷತ್ಕಾರ ಮಾಡಿಕೊಂಡರೆ ಸ್ತ್ರೀ ಪುರುಷ ಎನ್ನುವ ಅಂತರ ಹೊರಟು ಹೋಗುವುದು ಎಂದರು.

ಎಸ್‌. ನಿಜಲಿಂಗಪ್ಪ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಕೆ.ಎಸ್‌. ಕಲ್ಮಠ್ ಮಾತನಾಡಿ, ಕೇಂದ್ರ ಸರಕಾರದ “ಒಂದು ದೇಶ ಒಂದು ಕಾನೂನು’ ಯೋಜನೆ ಸ್ಥಳೀಯ ಭಾಷೆಗಳ ಉಳಿವಿಗೆ ಮಾರಕವಾಗಿದೆ. ರಾಜ್ಯದ ಜಿಎಸ್‌ಟಿ ತೆರಿಗೆಯಪಾಲನ್ನು ಕೇಂದ್ರ ಸರಕಾರ ನೀಡಬೇಕು. ರಾಷ್ಟ್ರೀಯ ಕೃಷಿ ನೀತಿ, ಮಾರುಕಟ್ಟೆ ನೀತಿ,ಶಿಕ್ಷಣ ನೀತಿಯಲ್ಲಿ ಪೂರಕ ಅಂಶಗಳಿರುವಂತೆ ಮಾರಕ ಅಂಶಗಳೂ ಇವೆ. ಇವುಗಳ ಬಗ್ಗೆ ನಾವು ಜಾಗರೂಕರಾಗಿರಬೇಕಿದೆ ಎಂದರು.

ಅಧ್ಯಾಪಕಿ ಪಿ.ಎಲ್‌. ಸಂಧ್ಯಾ “ಮಹಿಳೆಯರು ಮತ್ತು ಸಾಮಾಜಿಕ ಜವಾಬ್ದಾರಿ’ ವಿಷಯದ ಕುರಿತು ಮಾತನಾಡಿ, ಅಭಿವೃದ್ಧಿಹೊಂದಿದ ದೇಶಗಳಲ್ಲಿ ಮಹಿಳೆ ಸ್ವತಂತ್ರಳು. ಆದರೆ ಭಾರತೀಯ ಪರಂಪರೆಯಲ್ಲಿಮಹಿಳೆಯ ಪಾತ್ರ ಕುಟುಂಬದ ಜವಾಬ್ದಾರಿಗೆ ಮಾತ್ರ ಸೀಮಿತವಾಗಿದೆ. ಸಾವಿರಾರು ವರ್ಷಗಳ ಹಿಂದೆಯೇ ಅಪಲ, ಮೈತ್ರೇಯಿ, ಗಾಗೇìಯಿ, ಲೋಕಮುದ್ರೆ ಮುಂತಾದ ಮಹಿಳೆಯರು ಪುರುಷ ಋಷಿ, ಮುನಿಗಳಿಗೆ ಸಮಾನವಾಗಿ ಚಿಂತನೆಯನ್ನು ನಡೆಸುತ್ತಿದ್ದರು ಎನ್ನುವ ಉಲ್ಲೇಖವಿದೆ. 12ನೇ ಶತಮಾನದಲ್ಲಿ ಬಸವಣ್ಣ “ಅಕ್ಕನಿಗಿಲ್ಲದ ಜನಿವಾರ ನನಗೆ ಬೇಡ’ ಎನ್ನುವ ಮೂಲಕಮೊದಲ ಮಹಿಳಾಪರ ಚಿಂತಕರಾಗಿದ್ದಾರೆ. ಸಾವಿತ್ರಿಬಾಯಿ ಬಾಫುಲೆ ಮೊದಲ ಮಹಿಳಾ ಶಿಕ್ಷಕಿ. ಪುರುಷ ಸಮಾಜವೇ ಅವಳ ವಿರುದ್ಧ ನಿಂತರೂ ಕಷ್ಟಗಳನ್ನು ಎದುರಿಸಿದರು. ಕಿರಣ್‌, ಮಜುಂದಾರ್‌ ಷಾ, ಸುಧಾಮೂರ್ತಿಯಂಥ ಯಶಸ್ವಿ ಮಹಿಳೆಯರು ನಮ್ಮ ಮುಂದೆ ಇದ್ದಾರೆ. ಇಂದು ಗ್ರಾಮೀಣ ಮಹಿಳೆಯರ ಮೇಲಿನ ಕೆಲಸದ ಒತ್ತಡಗಳು ಜಾಸ್ತಿಯಾಗಿ ವೈಯಕ್ತಿಕ ಆರೋಗ್ಯವನ್ನೂ ಕಡೆಗಣಿಸಿರುವುದು ಆರೋಗ್ಯಕರ ಸಮಾಜದ ಲಕ್ಷಣವಲ್ಲ. ನಮ್ಮ ಪ್ರಾಚೀನ ಪರಂಪರೆಯಲ್ಲಿ ಮಹಿಳೆಯರಿಗೆಸಮಾನ ಗೌರವ, ಸ್ಥಾನಮಾನ ನೀಡಿರುವಾಗಈ ಆಧುನಿಕ 21ನೇ ಶತಮಾನದಲ್ಲಿ ಹೀಗೇಕೆ ಎಂದು ಪುರುಷ ಪ್ರಧಾನ ಸಮಾಜ ಯೋಚಿಸಬೇಕಿದೆ ಎಂದರು.

ಟಾಪ್ ನ್ಯೂಸ್

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.