ಸರಗಳ್ಳರ ಬಂಧನ: 10 ಲಕ್ಷ ರೂ. ಮೌಲ್ಯದ ಚಿನ್ನಾಭರಣ-ಸ್ವತ್ತು ವಶ
Team Udayavani, Jun 21, 2021, 9:39 PM IST
ಚಿತ್ರದುರ್ಗ: ನಗರದಲ್ಲಿ ಸರಗಳ್ಳತನ ಮಾಡುತ್ತಾ ಕೆಲ ದಿನಗಳಿಂದ ತಲೆನೋವಾಗಿದ್ದ ಆರೋಪಿಗಳ ಪೈಕಿ ಇಬ್ಬರನ್ನು ನಗರ ಠಾಣೆ ಪೊಲೀಸರು ಬಂಧಿ ಸಿದ್ದಾರೆ. ಇದೇ ವೇಳೆ ಕಳುವು ಮಾಡಿದ ಆಭರಣಗಳನ್ನು ಖರೀ ದಿ ಮಾಡುತ್ತಿದ್ದ ಇಬ್ಬರನ್ನೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾ ಧಿಕಾರಿ ಜಿ. ರಾಧಿಕಾ ತಿಳಿಸಿದರು.
ಚಿತ್ರದುರ್ಗ ತಾಲೂಕಿನ ಮುದ್ದಾಪುರ ಗ್ರಾಮದ ಉಮೇಶ (22), ಉದಯ್ ಕುಮಾರ್ (21) ಹಾಗೂ ಕೀರ್ತಿ (22) ಸರಗಳ್ಳತನ ಮಾಡುತ್ತಿದ್ದ ಆರೋಪಿಗಳು. ಈ ಪೈಕಿ ಇಬ್ಬರನ್ನು ಬಂಧಿಸಲಾಗಿದ್ದು, ಕೀರ್ತಿ ತಪ್ಪಿಸಿಕೊಂಡು ಪರಾರಿಯಾಗಿದ್ದಾನೆ. ಕಳ್ಳತನದ ಆಭರಣಗಳನ್ನು ಸ್ವೀಕರಿಸುತ್ತಿದ್ದ ಜ್ಯುವೆಲರ್ಸ್ ಮಾಲೀಕ ವಿನಯ್, ಮತ್ತೋರ್ವ ವ್ಯಕ್ತಿ ಯಶವಂತ್ ಎಂಬುವರನ್ನು ದಸ್ತಗಿರಿ ಮಾಡಲಾಗಿದೆ. ಬಂಧಿತರಿಂದ ಚಿನ್ನಾಭರಣ ಹಾಗೂ ಕಳ್ಳತನಕ್ಕೆ ಉಪಯೋಗಿಸುತ್ತಿದ್ದ ವಾಹನ ಸೇರಿದಂತೆ ಸುಮಾರು 10 ಲಕ್ಷ ರೂ. ಮೌಲ್ಯದ ಸ್ವತ್ತು ವಶಪಡಿಸಿಕೊಳ್ಳಲಾಗಿದೆ ಎಂದರು.
ಒಂಟಿ ಹೆಣ್ಣುಮಕ್ಕಳೇ ಟಾರ್ಗೆಟ್: ಮೂವರು ಆರೋಪಿತರು ಕಳೆದ ಆರು ತಿಂಗಳಿನಿಂದ ಚಿತ್ರದುರ್ಗ ನಗರ ಮತ್ತು ಹೊರವಲಯದ ಪ್ರಮುಖ ರಸ್ತೆಗಳಲ್ಲಿ ಬೈಕಿನಲ್ಲಿ ಒಂಟಿ ಪ್ರಯಾಣ ಮಾಡುವ ಹೆಣ್ಣುಮಕ್ಕಳನ್ನು ಟಾರ್ಗೆಟ್ ಮಾಡುತ್ತಿದ್ದರು. ಅವರನ್ನು ಬೈಕಿನಲ್ಲಿ ಹಿಂಬಾಲಿಸಿಕೊಂಡು ಹೋಗಿ ಸರಗಳ್ಳತನ ಮಾಡಿಕೊಂಡು ಪರಾರಿಯಾಗುತ್ತಿದ್ದರು. ಈ ಬಗ್ಗೆ ಚಿತ್ರದುರ್ಗ ನಗರ ಠಾಣೆಯಲ್ಲಿ 3, ಬಡಾವಣೆ ಠಾಣೆಯಲ್ಲಿ 2 ಹಾಗೂ ಗ್ರಾಮಾಂತರ ಠಾಣೆಯಲ್ಲಿ 3 ಸೇರಿದಂತೆ ಒಟ್ಟು 8 ಪ್ರಕರಣಗಳು ದಾಖಲಾಗಿವೆ. ಆರೋಪಿತರಿಂದ 200 ಗ್ರಾಂ ತೂಕದ ಬಂಗಾರದ ಸರ, ಕೈ ಚೈನುಗಳು ಹಾಗೂ ಒಂದು ಬೈಕ್ ವಶಪಡಿಸಿಕೊಳ್ಳಲಾಗಿದೆ ಎಂದು ಎಸ್ಪಿ ಮಾಹಿತಿ ನೀಡಿದರು.
ಪ್ರಮುಖ ಆರೋಪಿ ಉಮೇಶ ಪ್ರತಿಷ್ಟಿತ ಕುಟುಂಬದವನಾಗಿದ್ದು ಜೂಜಾಟಕ್ಕಾಗಿ ಸರಗಳ್ಳತನ ಆರಂಭಿಸಿದ್ದ. ಕೆಲವೊಮ್ಮೆ ಒಬ್ಬಂಟಿಗನಾಗಿ, ಮತ್ತೆ ಕೆಲವೊಮ್ಮೆ ತನ್ನ ಸ್ನೇಹಿತರಾದ ಉದಯ್ಕುಮಾರ್ ಮತ್ತು ಕೀರ್ತಿ ಜತೆಗೂಡಿ ಕಳ್ಳತನ ಮಾಡುತ್ತಿದ್ದ ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಎಎಸ್ಪಿ ಮಹಾಲಿಂಗ ಬಿ. ನಂದಗಾವಿ, ಡಿವೈಎಸ್ಪಿ ಎಸ್. ಪಾಂಡುರಂಗ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು
Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ