ಗ್ರಾಪಂನಿಂದ ಸ್ಯಾನಿಟೈಸರ್ ಸಿಂಪಡಣೆ
Team Udayavani, Apr 30, 2021, 8:35 PM IST
ಭರಮಸಾಗರ: ಕೊರೊನಾ ಕರ್ಫ್ಯೂ ನಡುವೆ ಇಲ್ಲಿನ ಗ್ರಾಪಂ ವತಿಯಿಂದ ಪ್ರಮುಖ ಸರ್ಕಾರಿ ಕಚೇರಿಗಳು, ಪೆಟ್ರೋಲ್ ಬಂಕ್, ಖಾಸಗಿ ಆಸ್ಪತ್ರೆಗಳು ಸೇರಿದಂತೆ ಮುಖ್ಯ ರಸ್ತೆಯಲ್ಲಿ ಸ್ಯಾನಿಟೈಸರ್ ಸಿಂಪಡಣೆ ಕಾರ್ಯ ನಡೆಸಲಾಯಿತು. ಕೊರೊನಾ ಕರ್ಫ್ಯೂ ಎರಡನೇ ದಿನವಾದ ಗುರುವಾರ ಗ್ರಾಮ ಪಂಚಾಯತ್ ವತಿಯಿಂದ ಬ್ಯಾಂಕ್, ಪೊಲೀಸ್ ಠಾಣೆ, ಸರ್ಕಾರಿ ಕಾಲೇಜು, ನಾಡಕಚೇರಿ, ಹಾಸ್ಟೆಲ್, ಎಪಿಎಂಸಿ ಕಚೇರಿ, ರೈತ ಸಂಪರ್ಕ ಕೇಂದ್ರ, ಖಾದಿ ಗ್ರಾಮೋದ್ಯೋಗ ಕೇಂದ್ರ, ಅಂಗನವಾಡಿ ಕೇಂದ್ರಗಳು, ಶಾಲಾ ಕಾಲೇಜುಗಳಲ್ಲಿ ಸ್ಯಾನಿಟೈಸರ್ ಸಿಂಪಡಿಸಲಾಯಿತು.
ಮುಖ್ಯ ರಸ್ತೆಯ ಪೆಟ್ರೋಲ್ ಬಂಕ್, ಕೆಇಬಿ ಕಚೇರಿ, ವ್ಯವಸಾಯ ಸೇವಾ ಸಹಕಾರ ಸಂಘ, ಎಟಿಎಂ ಕೇಂದ್ರಗಳು, ಕೆಎಸ್ಆರ್ಟಿಸಿ ಬಸ್ ನಿಲ್ದಾಣ ಸೇರಿದಂತೆ ಖಾಸಗಿ ಆಸ್ಪತ್ರೆಗಳ ಕ್ಲಿನಿಕ್ ಗಳು ಸೇರಿದಂತೆ ಹೆಚ್ಚು ಜನರ ಒಡನಾಟವಿರುವ ಸ್ಥಳಗಳಲ್ಲಿ ಸ್ಯಾನಿಟೈಸರ್ ಸಿಂಪಡಿಸಿ ರೋಗಕಾರರಗಳ ಹರಡುವಿಕೆ ತಡೆಯುವ ನಿಟ್ಟಿನಲ್ಲಿ ಅಗತ್ಯ ಕ್ರಮ ಗ್ರಾಮ ಪಂಚಾಯತ್ ವತಿಯಿಂದ ನಡೆಸಲಾಯಿತು.
ಗ್ರಾಮ ಪಂಚಾಯತ್ ಸದಸ್ಯ ಶ್ರೀನಿವಾಸ್ ಪತ್ರಿಕೆಯೊಂದಿಗೆ ಮಾತನಾಡಿ, ಶುಕ್ರವಾರದಿಂದ ವಾರ್ಡ್ವಾರು ಮುಖ್ಯ ರಸ್ತೆಗಳು ಇತರೆ ರಸ್ತೆ ಮಾರ್ಗಗಳಲ್ಲೂ ಸ್ಯಾನಿಟೈಸರ್ ಸಿಂಪಡಿಸುವ ಜತೆಗೆ ಜನರಲ್ಲಿ ಕೊರೊನಾ ಕುರಿತು ಆಟೋದಲ್ಲಿನ ಧ್ವನಿವರ್ಧಕದ ಮೂಲಕ ಜಾಗೃತಿ ಮೂಡಿಸಲಾಯಿತು. ಸಂತೋಷ್, ಮಹಾಬುಲಿ, ಸುನೀಲ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು
Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ
Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ
MUST WATCH
ಹೊಸ ಸೇರ್ಪಡೆ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ