ಹಿರಿಯೂರಿನ 30 ಕಡೆ ಬ್ಯಾರಿಕೇಡ್ ಅಳವಡಿಕೆ
Team Udayavani, May 2, 2021, 6:12 PM IST
ಹಿರಿಯೂರು: ನಗರದಲ್ಲಿ ಅನವಶ್ಯಕವಾಗಿ ಓಡಾಡುವ ವಾಹನಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಸುಮಾರು 30 ಕಡೆಗಳಲ್ಲಿ ಬ್ಯಾರಿಕೇಡ್ ಅಳವಡಿಸಲಾಗುವುದು ಎಂದು ಡಿವೈಎಸ್ಪಿ ರೋಷನ್ ಜಮೀರ್ ಹೇಳಿದರು.
ನಗರದಲ್ಲಿ ಡಿವೈಎಸ್ಪಿ ಕಚೇರಿಯಲ್ಲಿ ನಡೆದ ನಗರಸಭೆ ಸದಸ್ಯರು ಹಾಗೂ ಅಧಿಕಾರಿಗಳೊಂದಿಗೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ತರಕಾರಿ, ಹೂವು, ಹಣ್ಣು ಮಾರಾಟಕ್ಕೆ ಬಬ್ಬೂರಿನ ಎಪಿಎಂಸಿ ಆವರಣದಲ್ಲಿ ಅವಕಾಶ ಮಾಡಿಕೊಡಲಾಗಿದೆ. ಜನರು ಅಗತ್ಯ ವಸ್ತು ಕೊಳ್ಳಲು ನಿಗದಿತ ಸಮಯದಲ್ಲಿ ಮಾತ್ರ ಓಡಾಟ ಮಾಡಬಹುದು. ವಿನಾಕಾರಣ ಓಡಾಡುವ ವಾಹನ ಸವಾರರ ವಾಹನಗಳನ್ನು ಸೀಜ್ ಮಾಡಿ ಕಾನೂನು ಕ್ರಮ ಜರುಗಿಸಲಾಗುವುದು.
ಕೊರೊನಾ ಮಾರ್ಗಸೂಚಿ ಅನುಸರಿಸದೇ ಇರುವ ಅಂಗಡಿ ಮಾಲೀಕರುಗಳಿಗೆ ಹಾಗೂ ವರ್ತಕರುಗಳಿಗೆ ದಂಡ ವಿಧಿ ಸಲಾಗುವುದು ಎಂದು ಎಚ್ಚರಿಕೆ ನೀಡಿದರು. ಸಿಪಿಐ ರಾಘವೇಂದ್ರ ಮಾತನಾಡಿ, ಪ್ರತಿ ವಾರ್ಡ್ಗೂ ಸ್ಯಾನಿಟೈಜೇಷನ್ ಮಾಡುವಾಗ ಆ ಭಾಗದ ಚುನಾಯಿತ ಪ್ರತಿನಿ ಧಿಗಳು ಪಾಲ್ಗೊಳ್ಳಿ. ಅನಗತ್ಯವಾಗಿ ಓಡಾಡುವ ವಾಹನ ಸವಾರರ ಮೇಲಿನ ಪ್ರಕರಣಗಳಲ್ಲಿ ಅಥವರ ಪರವಾಗಿ ಜನಪ್ರತಿನಿಧಿಗಳ ವಕಾಲತ್ತು ಬೇಡ.
ಕೊರೊನಾ ಬಗ್ಗೆ ಜಾಗೃತಿ ಮೂಡಿಸಲು ಎಲ್ಲರೂ ಸಹಕಾರ ನೀಡಬೇಕು ಎಂದು ಕೋರಿದರು. ಸಿಪಿಐ ವಿ.ಎಸ್. ಶಿವಕುಮಾರ್ ಮಾತನಾಡಿ, ತಾಲೂಕಿನಲ್ಲಿ ಕೊರೊನಾ ಸಾವು-ನೋವು ಪ್ರಕರಣಗಳು ಹೆಚ್ಚಾದ ಹಿನ್ನೆಲೆಯಲ್ಲಿ ಬಿಗಿ ಕ್ರಮ ಕೈಗೊಳ್ಳಬೇಕಾಗಿದೆ. ಆದ್ದರಿಂದ ಕೊರೊನಾ ನಿಯಂತ್ರಿಸಲು ಅನವಶ್ಯಕವಾಗಿ ಗುಂಪು ಸೇರದಂತೆ ನೋಡಿಕೊಳ್ಳಬೇಕು. ಈ ವಿಚಾರದಲ್ಲಿ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಿ. ತಮ್ಮ ವಾರ್ಡ್ಗಳಲ್ಲಿ ಅನುಮತಿ ಇಲ್ಲದೆ ನಡೆಯುವ ಕಾರ್ಯಕ್ರಮಗಳ ಬಗ್ಗೆ ಇಲಾಖೆ ಗಮನಕ್ಕೆ ತರಬೇಕು ಎಂದರು. ಸಭೆಯಲ್ಲಿ ತಹಶೀಲ್ದಾರ್ ಸತ್ಯನಾರಾಯಣ, ಪೌರಾಯುಕ್ತೆ ಟಿ. ಲೀಲಾವತಿ, ಆರೋಗ್ಯ ನಿರೀಕ್ಷಕ ಅಂಜಿನಪ್ಪ, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಚಿತ್ರಜಿತ್ ಯಾದವ್, ನಗರಸಭೆ ಸದಸ್ಯರುಗಳಾದ ಅಂಬಿಕಾ ಆರಾಧ್ಯ, ಸಣ್ಣಪ್ಪ, ಮಂಜುಳಾ, ಕೇಶವಮೂರ್ತಿ, ಬಿ.ಎನ್. ತಿಪ್ಪೇಸ್ವಾಮಿ, ಸಿ.ಎಂ. ಸ್ವಾಮಿ, ಜಿ. ನಾಗರಾಜ, ಮಹಿಪಾಲ್, ಚಿರಂಜೀವಿ ಮತ್ತಿತರರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು
Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ
Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ
Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ
Road mishap: ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ; ಓರ್ವ ಸಾವು
MUST WATCH
ಹೊಸ ಸೇರ್ಪಡೆ
T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ
CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ