ಕೊರೊನಾ ನಿರ್ಮೂಲನೆಗೆ ಶ್ರಮಿಸಿ: ಎಸ್. ಪರಮೇಶ್
Team Udayavani, May 9, 2021, 10:15 PM IST
ಮೊಳಕಾಲ್ಮೂರು: ಮಾರಣಾಂತಿಕ ಕೊರೊನಾ ನಿರ್ಮೂಲನೆಗೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಸಮಾಜ ಪರಿವರ್ತನಾ ಸೇವಾ ಸಂಸ್ಥೆಯ ನಿರ್ದೇಶಕ ಎಸ್. ಪರಮೇಶ್ ಹೇಳಿದರು. ತಾಲೂಕಿನ ನೇರ್ಲಹಳ್ಳಿ ಗ್ರಾಮದಲ್ಲಿ ಸಮಾಜ ಪರಿವರ್ತನಾ ಸೇವಾ ಸಂಸ್ಥೆ ಹಾಗೂ ಗ್ರಾಮ ಪಂಚಾಯಿತಿ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ಕೊರೊನಾ ನಿಯಂತ್ರಣ ಜಾಗೃತಿ ಜಾಥಾದಲ್ಲಿ ಅವರು ಮಾತನಾಡಿದರು.
ಪ್ರತಿಯೊಬ್ಬರೂ ಮಾಸ್ಕ್ ಧರಿಸಿ ಅಗತ್ಯ ಮತ್ತು ಅನಿವಾರ್ಯತೆ ಇದ್ದಲ್ಲಿ ಮಾತ್ರ ಹೊರಗಡೆ ಬಂದು ಕನಿಷ್ಠ 2 ಮೀಟರ್ನಷ್ಟು ಭೌತಿಕ ಅಂತರ ಕಾಪಾಡಿಕೊಳ್ಳಬೇಕು. ಅಗತ್ಯ ವಸ್ತುಗಳನ್ನು ಖರೀದಿಸಿ ಸುರಕ್ಷಿತವಾಗಿ ಮನೆ ಸೇರಬೇಕು ಆಗಾಗ.ಸ್ಯಾನಿಟೈಸರ್ ಅಥವಾ ಸಾಬೂನಿನಿಂದ ಕೈಗಳನ್ನು ಸ್ವತ್ಛಗೊಳಿಸಬೇಕು. ಕೆಮ್ಮು, ನೆಗಡಿ, ಶೀತ, ಜ್ವರ, ತಲೆನೋವು ಇತ್ಯಾದಿ ಲಕ್ಷಣಗಳು ಕಂಡು ಬಂದಲ್ಲಿ ಹತ್ತಿರದ ಆರೋಗ್ಯ ಕೇಂದ್ರಗಳನ್ನು ಸಂಪರ್ಕಿಸಿ ಸೂಕ್ತ ಚಿಕಿತ್ಸೆ ಪಡೆದು ಆರೋಗ್ಯವನ್ನು ಕಾಪಾಡಿಕೊಳ್ಳಬೇಕೆಂದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ಆರ್. ಕೆಂಚಪ್ಪ ಮಾತನಾಡಿ ಕೊರೊನಾ ಎರಡನೇ ಅಲೆ ದೇಶಾದ್ಯಂತ ಅತ್ಯಂತ ಭಯಂಕರ ವಾತಾವರಣವನ್ನು ಸೃಷ್ಟಿಸಿ ಸಾವು-ನೋವುಗಳಿಗೆ ಕಾರಣವಾಗಿದೆ. ಆರೋಗ್ಯವೇ ಮಹಾಭಾಗ್ಯವಾಗಿರುವುದರಿಂದ ಪ್ರತಿಯೊಬ್ಬರೂ ಕೊರೊನಾ ಲಸಿಕೆ ಪಡೆಯಬೇಕು. ಏಕೆಂದರೆ ಕೊರೊನಾ ಲಸಿಕೆ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದು ತಿಳಿಸಿದರು.
ಗ್ರಾಮ ಪಂಚಾಯಿತಿ ಅಧ್ಯಕ್ಷೆ ರತ್ನಮ್ಮ, ಕಾರ್ಯದರ್ಶಿ ಕೊಲ್ಲಣ್ಣ, ಜಯಣ್ಣ, ಯುವ ಮುಖಂಡರಾದ ಎಚ್.ತಿಪ್ಪೇಸ್ವಾಮಿ, ಪದ್ಮಾವತಿ, ಪಾಪಣ್ಣ, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು
Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ
MUST WATCH
ಹೊಸ ಸೇರ್ಪಡೆ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Dr Rajkumar: ಇಂದು ರಾಜ್ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ