ಪ್ರಕೃತಿ ಮೇಲಿನ ದೌರ್ಜನ್ಯ ನಿಲ್ಲಲಿ
Team Udayavani, Jun 6, 2021, 9:36 PM IST
ಚಿತ್ರದುರ್ಗ: ಮಾನವ ಪ್ರಕೃತಿಯಿಂದಲೇ ಜನಿಸಿ ಪ್ರಕೃತಿಯ ಮೇಲೆಯೇ ಸದಾ ದೌರ್ಜನ್ಯ ನಡೆಸುತ್ತಿದ್ದಾನೆ ಎಂದು ಡಾ| ಶಿವಮೂರ್ತಿ ಮುರುಘಾ ಶರಣರು ಹೇಳಿದರು.
ಮುರುಘಾಮಠ, ಎಸ್.ಜೆ.ಎಂ ಶಾಂತಿ ಮತ್ತು ಪ್ರಗತಿ ಫೌಂಡೇಶನ್ ಸಹಯೋಗದಲ್ಲಿ ನಡೆದ ಸಾಮೂಹಿಕ ಕಲ್ಯಾಣ ಮಹೋತ್ಸವದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ರತಿಯೊಬ್ಬರಿಗೂ ತಾಯಿ ಎಂದರೆ ಪ್ರಕೃತಿ ಮಾತೆ. ಪ್ರಖೃತಿ ಮಾತೆಯ ಮೇಲೆ ದೌರ್ಜನ್ಯ ನಡೆದರೆ ಎಲ್ಲಿಯವರೆಗೆ ಸಹನೆ ಮಾಡಿಕೊಳ್ಳಲು ಸಾಧ್ಯವಿದೆ, ಪ್ರಕೃತಿಯಲ್ಲಿ ದೇವರನ್ನು ಕಾಣಬೇಕು ಎಂದರು.
ಕೆಲವು ದಶಕಗಳ ಹಿಂದೆ ವಿಶ್ವಸಂಸ್ಥೆ ಜೂನ್ 5ನೇ ತಾರೀಖನ್ನು ವಿಶ್ವ ಪರಿಸರ ದಿನವನ್ನಾಗಿ ಆಚರಿಸಲು ಸುತ್ತೋಲೆ ಹೊರಡಿಸಿತು. ಇಂದಿಗೂ ಸಹ 5ನೇ ತಾರೀಖನ್ನು ವಿಶ್ವಪರಿಸರ ದಿನವನ್ನಾಗಿ ಆಚರಿಸುತ್ತಿಆದರೆ ಇಂದು ಜಗತ್ತು ಯಂತ್ರ ಮತ್ತು ಯಾಂತ್ರಿಕವಾಗಿದೆ. ಕೃತಕವಾಗಿರುವ ಜೀವನ ಇಂದು ನಡೆಯುತ್ತಿದೆ. ಸಹಜ ಜೀವನದಿಂದ ಮಾನವ ದೂರ ಸರಿಯುತ್ತಿದ್ದಾನೆ. ಪ್ರಕೃತಿ ಸೂಸುತ್ತಿರುವ ಶುದ್ಧ ಗಾಳಿಯನ್ನು ಸೇವಿಸುತ್ತ ಪರಿಸರವನ್ನು ಮಲಿನಗೊಳಿಸುವ ಕೆಲಸ ನಡೆಯುತ್ತಿದೆ.
ಹಾಗಾಗಿ ಎಲ್ಲದರಲ್ಲಿಯೂ ಮಾಲಿನ್ಯ ಉಂಟಾಗುತ್ತಿದೆ ಎಂದು ವಿಷಾದಿಸಿದರು. ಮುಖ್ಯ ಅತಿಥಿ ಪಟೇಲ್ ಶಿವಕುಮಾರ್ ಮಾತನಾಡಿ, ಕೊರೊನಾ ಕಾಲದಲ್ಲಿ ನಮಗೆ ಆಕ್ಸಿಜನ್ ಬಹಳ ಮುಖ್ಯವಾಗಿದೆ. ಹಾಗಾಗಿ ನಾವು ಪರಿಸರವನ್ನು ಉಳಿಸಿ ಬೆಳೆಸಬೇಕಿದೆ. ಅದಕ್ಕಾಗಿ ಆದಷ್ಟು ಗಿಡ-ಮರಗಳನ್ನು ಬೆಳೆಸಬೇಕಾದ ಅಗತ್ಯತೆ ನಮಗಿದೆ ಎಂದರು. ಪರಿಸರ ದಿನದ ಅಂಗವಾಗಿ ಅತಿಥಿಗಳಿಗೆ, ವಧು-ವರರಿಗೆ ಸಸಿಗಳನ್ನು ವಿತರಿಸಲಾಯಿತು ಹಾಗೂ ಶ್ರೀಮಠದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ವಧು-ವರರು ಸಸಿಗಳನ್ನು ನೆಟ್ಟರು. ಮತ್ತೋರ್ವ ಅತಿಥಿ ಸಿದ್ದಾಪುರದ ಜಯದೇವ ಕಂಪನಿಯ ಎಸ್.ವಿ. ನಾಗರಾಜಪ್ಪ ವೇದಿಕೆಯಲ್ಲಿದ್ದರು.
ಎಸ್ ಜೆಎಂ ವಿದ್ಯಾಪೀಠದ ಕಾರ್ಯದರ್ಶಿ ಎ.ಜೆ. ಪರಮಶಿವಯ್ಯ, ಕೆಇಬಿ ಷಣ್ಮುಖಪ್ಪ, ಎನ್. ತಿಪ್ಪಣ್ಣ, ಮುರುಗೇಶ್ ಮತ್ತಿತರರು ಇದ್ದರು. ಉಮೇಶ್ ಪತ್ತಾರ್ ಪ್ರಾರ್ಥಿಸಿದರು. ಜ್ಞಾನಮೂರ್ತಿ ಸ್ವಾಗತಿಸಿದರು. ಹರೀಶ್ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು
Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ
Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ
Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ
MUST WATCH
ಹೊಸ ಸೇರ್ಪಡೆ
Mangaluru; ಪೆಟ್ರೋಲ್ ಬದಲು ಡೀಸೆಲ್ ತುಂಬಿಸಿದ ಆರೋಪ: ಕೋರ್ಟ್ಗೆ ಮೊರೆ
RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ