20ಕ್ಕೂ ಹೆಚ್ಚು ಸೋಂಕಿತರಿದ್ರೆ ಸೀಲ್‌ ಡೌನ್‌


Team Udayavani, Jun 10, 2021, 10:48 PM IST

10-19

ಚಿತ್ರದುರ್ಗ: ಗ್ರಾಮೀಣ ಭಾಗದಲ್ಲಿ 20ಕ್ಕೂ ಹೆಚ್ಚು ಸೋಂಕಿತರು ಕಂಡು ಬಂದಲ್ಲಿ ಅಂತಹ ಹಳ್ಳಿಗಳನ್ನು ಸೀಲ್‌ ಡೌನ್‌ ಮಾಡಿ ಮನೆಗಳಿಗೆ ಕೆಂಪು ಪಟ್ಟಿ ಅಂಟಿಸಿ. ಈ ವಿಷಯದಲ್ಲಿ ನಿರ್ಲಕ್ಷé ವಹಿಸಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿ ಕಾರಿ ಕವಿತಾ ಎಸ್‌. ಮನ್ನಿಕೇರಿ ಎಚ್ಚರಿಕೆ ನೀಡಿದರು.

ಜಿಪಂ ಸಭಾಂಗಣದಲ್ಲಿ ಬುಧವಾರ ನಡೆದ ಗ್ರಾಮ ಪಂಚಾಯಿತಿ ಪಿಡಿಒ, ಗ್ರಾಮ ಲೆಕ್ಕಾಧಿ ಕಾರಿ ಹಾಗೂ ಪಂಚಾಯಿತಿ ಮಟ್ಟದ ನೋಡಲ್‌ ಅ ಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಕೊರೊನಾ ಎರಡನೆ ಅಲೆ ಜಿಲ್ಲೆಯಲ್ಲಿ ವ್ಯಾಪಕವಾಗಿ ಹರಡುತ್ತಿದೆ. ಸೋಂಕಿತರು ಕಂಡು ಬಂದರೆ ತಪಾಸಣೆ ನಡೆಸಿ. ನಂತರ ಹತ್ತು ಮಂದಿ ಪ್ರಾಥಮಿಕ ಹಾಗೂ 20 ಮಂದಿ ದ್ವಿತೀಯ ಸಂಪರ್ಕಿತರನ್ನು ಕಡ್ಡಾಯವಾಗಿ ಪತ್ತೆ ಹಚ್ಚಿ ಚಿಕಿತ್ಸೆ ಕೊಡಿಸುವುದು ನಿಮ್ಮ ಜವಾಬ್ದಾರಿ ಎಂದರು.

ಕೋವಿಡ್‌ ಸೋಂಕು ತಗುಲಿರುವವರನ್ನು ಮನೆಯಲ್ಲೇ ಇರಲು ಬಿಡಬೇಡಿ. ಅವರ ಮನವೊಲಿಸಿ ಕೋವಿಡ್‌ ಸೆಂಟರ್‌ ಅಥವಾ ಜಿಲ್ಲಾ ಕೋವಿಡ್‌ ಕೇಂದ್ರಕ್ಕೆ ಕರೆ ತನ್ನಿ. ಇಲ್ಲದಿದ್ದರೆ ಕೊರೊನಾ ನಿಯಂತ್ರಣ ಕಷ್ಟವಾಗುತ್ತದೆ ಎಂದು ತಾಕೀತು ಮಾಡಿದರು. ಸೋಂಕಿತರನ್ನು ಪ್ರತ್ಯೇಕವಾಗಿಡು ವುದು ಸವಾಲಿನ ಕೆಲಸ. ಕೆಲವರು ಕೋವಿಡ್‌ ಕೇರ್‌ ಸೆಂಟರ್‌ಗಳಿಗೆ ದಾಖಲಾಗಲು ವಿತಂಡವಾದ ಮಾಡುತ್ತಾರೆ.

ಅಂಥವರ ಮನವೊಲಿಸಿ ಕೋವಿಡ್‌ ಕೇರ್‌ ಸೆಂಟರ್‌ನಲ್ಲಿ ಬೆಡ್‌, ಆಕ್ಸಿಜನ್‌, ಊಟ, ಸೊಳ್ಳೆ ಪರದೆ, ಶುದ್ಧ ಕುಡಿಯುವ ನೀರು, ಫ್ಯಾನ್‌ ಎಲ್ಲವೂ ಇದೆ ಎಂದು ವಿವರಿಸಿ ಹೇಳಿ. ಗ್ರಾಮಗಳಲ್ಲಿ ಶಾಲೆ ಇಲ್ಲವೇ ಸಮುದಾಯ ಭವನಗಳನ್ನು ಮೈಕ್ರೋ ಕೋವಿಡ್‌ ಕೇರ್‌ ಸೆಂಟರ್‌ಗಳನ್ನಾಗಿ ತೆರೆದು ಕೊರೊನಾ ಸೋಂಕಿತರಿಗೆ ಚಿಕಿತ್ಸೆ ಕೊಡಿಸುವಲ್ಲಿ ನಿಮ್ಮ ಪಾತ್ರ ಮುಖ್ಯ. ಎಲ್ಲವನ್ನೂ ತಹಶೀಲ್ದಾರ್‌ ಗಳು ಮಾನಿಟರಿಂಗ್‌ ಮಾಡಬೇಕು. ಕೋವಿಡ್‌ ಸೋಂಕಿತರನ್ನು ಕೋವಿಡ್‌ ಕೇರ್‌ ಸೆಂಟರ್‌ಗೆ ದಾಖಲಿಸುವುದಷ್ಟೇ ಮುಖ್ಯವಲ್ಲ. ಪ್ರತಿ ದಿನವೂ ಫೋನ್‌ ಮೂಲಕ ಸೋಂಕಿತರ ಆರೋಗ್ಯ ವಿಚಾರಿಸಿ ಧೈರ್ಯ ತುಂಬುವ ಕೆಲಸವಾಗಬೇಕೆಂದು ಕರೆ ನೀಡಿದರು.

ಕೆಲವು ಗ್ರಾಮಗಳಲ್ಲಿ ಚರಂಡಿ ತುಂಬಿ ರಸ್ತೆಯಲ್ಲಿ ಹರಿಯುತ್ತಿದೆ. ಕೋವಿಡ್‌ ಸಂದರ್ಭದಲ್ಲಿ ಶುಚಿತ್ವ ಕಾಪಾಡುವುದು ಅತ್ಯವಶ್ಯ. ಮಳೆ ಬಂದಾಗ ಕೆರೆಗಳು ಭರ್ತಿಯಾಗಿ ನೀರು ಹರಿಯದೆ ಮನೆಗಳಿಗೆ ಅಪಾಯವಾಗಬಹುದು. ಅದಕ್ಕಾಗಿ ಕೆರೆ ಒತ್ತುವರಿಯಾಗದಂತೆ ಮುತುವರ್ಜಿ ವಹಿಸಿ. ಮಳೆ ಅನಾಹುತಗಳು ಸಂಭವಿಸಿದಲ್ಲಿ ತಕ್ಷಣ ಸ್ಥಳಕ್ಕೆ ದೌಡಾಯಿಸಿ ತುರ್ತು ನಿರ್ವಹಣೆ ಮಾಡಬೇಕು ಎಂದು ಸೂಚಿಸಿದರು.

ಜಿಪಂ ಸಿಇಒ ಡಾ| ಕೆ. ನಂದಿನಿದೇವಿ ಮಾತನಾಡಿ, ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಮೈಕ್ರೋ ಕೋವಿಡ್‌ ಕೇರ್‌ ಸೆಂಟರ್‌ಗಳನ್ನು ತೆರೆಯಲು ಸರ್ಕಾರ ಪ್ರತಿ ಪಂಚಾಯಿತಿಗೆ ಐವತ್ತು ಸಾವಿರ ರೂ.ಗಳನ್ನು ಬಿಡುಗಡೆ ಮಾಡಿದೆ. ಅದರಲ್ಲಿ ಸೋಂಕಿತರಿಗೆ ಉಪಹಾರ, ಊಟಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಗ್ರಾಮಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ. ಬೆಡ್‌, ಕಾಟ್‌ ವ್ಯವಸ್ಥೆ ಮಾಡಿಕೊಳ್ಳಿ. ಕುಡಿಯುವ ನೀರು, ಫ್ಯಾನ್‌, ನ್ಯೂಸ್‌ ಪೇಪರ್‌ಗಳನ್ನು ಸೋಂಕಿತರಿಗೆ ತಲುಪಿಸಬೇಕು ಎಂದರು.

ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು, ಚುನಾಯಿತ ಪ್ರತಿನಿಧಿ ಗಳ ಸಹಕಾರ ಪಡೆದುಕೊಂಡು ನಿಯಂತ್ರಣಕ್ಕೆ ಮುಂದಾಗಿ. ಸಣ್ಣ ಸಣ್ಣ ವಯಸ್ಸಿನವರು ಕೋವಿಡ್‌ಗೆ ಬಲಿಯಾಗುತ್ತಿದ್ದಾರೆ. ಈ ನಿಟ್ಟಿನಲ್ಲಿ ಹೆಚ್ಚು ಜಾಗ್ರತೆ ವಹಿಸಿ. ಸೋಂಕಿನ ಲಕ್ಷಣ ಕಂಡು ಬಂದಲ್ಲಿ ತಕ್ಷಣ ಆಸ್ಪತ್ರೆಗೆ ಸೇರುವಂತೆ ಮಾಡಿ ಎಂದು ಸಲಹೆ ನೀಡಿದರು.

ತಾಲೂಕು ವೈದ್ಯಾಧಿ ಕಾರಿ ಡಾ| ಗಿರೀಶ್‌ ಮಾತನಾಡಿ, ಚಿತ್ರದುರ್ಗ ತಾಲೂಕಿನಾದ್ಯಂತ ಐದು ಕೋವಿಡ್‌ ಕೇರ್‌ ಸೆಂಟರ್‌ಗಳಿವೆ. ಗ್ರಾಮ ಮಟ್ಟದಲ್ಲಿ ಶಾಲೆ, ಸಮುದಾಯ ಭವನ ಗುರುತಿಸಿ ಮೈಕ್ರೋ ಕೋವಿಡ್‌ ಕೇರ್‌ ಸೆಂಟರ್‌ ಗಳು ಆರಂಭಿಸಲಾಗುವುದು. ಪ್ರಾಥಮಿಕ ಆರೋಗ್ಯ ಕೇಂದ್ರದವರು ನಿರ್ವಹಣೆ ನೋಡಿಕೊಳ್ಳುತ್ತಾರೆ. ಕೊರೊನಾ ಕೋವಿಡ್‌ ಕೇರ್‌ ಸೆಂಟರ್‌ನಲ್ಲಿ ಕಸ ವಿಲೇವಾರಿ ಸಮಸ್ಯೆಯಿದ್ದು, ಸರಿಪಡಿಸಿ ಎಂದು ಹೇಳಿದರು.

ಡಿಎಚ್‌ಒ ಡಾ| ಸಿ.ಎಲ್‌. ಪಾಲಾಕ್ಷ, ತಹಶೀಲ್ದಾರ್‌ ಜೆ.ಸಿ. ವೆಂಕಟೇಶಯ್ಯ, ಕೋವಿಡ್‌-19 ಜಾಗೃತಿ ನೋಡಲ್‌ ಅ ಧಿಕಾರಿ ಕೃಷ್ಣಪ್ಪ, ತಾಪಂ ಇಒ ಹನುಮಂತಪ್ಪ ಇದ್ದರು.

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.