ನೆನಪಿಡಿ, ಇನ್ನೂ ಕೊರೊನಾ ಹೋಗಿಲ್ಲ!


Team Udayavani, Jun 15, 2021, 10:15 PM IST

15-16

ಚಿತ್ರದುರ್ಗ: ಕೊರೊನಾ ಎರಡನೇ ಅಲೆ ಕಾರಣಕ್ಕೆ ಕಳೆದೊಂದು ತಿಂಗಳಿನಿಂದ ಮೌನ ಆವರಿಸಿದ್ದ ನಗರಕ್ಕೆ ಸೋಮವಾರ ಲಾಕ್‌ಡೌನ್‌ ಸಡಿಲಿಕೆಯಿಂದ ಜೀವಕಳೆ ಬಂದಿತ್ತು. ರಸ್ತೆಗಳಲ್ಲಿ ವಿಪರೀತ ವಾಹನಗಳ ಸಂಚಾರ, ವ್ಯಾಪಾರ ವಹಿವಾಟು, ಜನರಲ್ಲಿ ಹೊಸ ಉತ್ಸಾಹ ಕಂಡು ಬರುತ್ತಿತ್ತು.

ಕೋವಿಡ್‌ಸಂಪೂರ್ಣ ಹತೋಟಿಗೆ ಬಾರದಿದ್ದರೂ ಸರ್ಕಾರ ಬೆಳಗ್ಗೆ 6 ರಿಂದ ಮಧ್ಯಾಹ್ನ 2 ಗಂಟೆವರೆಗೆ ಲಾಕ್‌ ಡೌನ್‌ ಸಡಿಲಿಕೆ ಮಾಡಿ ರುವುದರಿಂದ ಸಹಜವಾಗಿ ಎಲ್ಲೆಲ್ಲೂ ಜನಜಂಗುಳಿ ಕಾಣಿಸುತ್ತಿತ್ತು. ಜೂನ್‌ 21 ರವರೆಗೆ ಇನ್ನೂ ಲಾಕ್‌ಡೌನ್‌ ಮುಂದುವರೆದಿರುವುದರಿಂದ ಮಧ್ಯಾಹ್ನದೊಳಗೆ ಅಗತ್ಯ ವಸ್ತುಗಳನ್ನು ಖರೀದಿಸಬೇಕು ಎಂದು ಗ್ರಾಮೀಣ ಪ್ರದೇಶಗಳಿಂದ ಸಾಕಷ್ಟು ಜನ ನಗರ ಪ್ರದೇಶಗಳಿಗೆ ಆಗಮಿಸಿದ್ದರು.

ಜನರಿಗಿಲ್ಲ ಕೊರೊನಾ ಭಯ: ಜಿಲ್ಲಾಡಳಿತ ಲಾಕ್‌ ಡೌನ್‌ನಲ್ಲಿ ಕೊಂಚ ವಿನಾಯಿತಿ ನೀಡಿದ್ದನ್ನೇ ನೆಪ ಮಾಡಿಕೊಂಡು ಸಾವಿರಾರು ಜನರು ರಸ್ತೆಗಿಳಿದಿದ್ದರು. ಇದರಿಂದ ಹೊಳಲ್ಕೆರೆ ರಸ್ತೆಯಲ್ಲಿ ಟ್ರಾಫಿಕ್‌ ಜಾಮ್‌ ಆಗಿತ್ತು. ಬೆಳಗ್ಗೆ 6 ರಿಂದ 10 ರವರೆಗೆ ಇದ್ದ ವಿನಾಯಿತಿ ಮಧ್ಯಾಹ್ನ 2 ಗಂಟೆವರೆಗೆ ವಿಸ್ತರಣೆಯಾಗಿರುವುದು ಜನರಿಗಿಂತ ವ್ಯಾಪಾರಿಗಳಿಗೆ ಹೆಚ್ಚು ಖುಷಿ ತಂದಿತ್ತು.

ಜನರು ಸಾಮಾಜಿಕ ಅಂತರ ಮರೆತು ಗುಂಪು ಕಟ್ಟಿಕೊಂಡಿದ್ದರು. ಸಾಕಷ್ಟು ಮಂದಿ ಮಾಸ್ಕ್ ಇಲ್ಲದೆ ನೆಪಕ್ಕೆ ಎಂಬಂತೆ ಕರವಸ್ತ್ರ ಅಥವಾ ಟವೆಲ್‌ಗ‌ಳನ್ನು ಮುಖಕ್ಕೆ ಹಿಡಿದು ಓಡಾಡುತ್ತಿದ್ದರು. ಬಹುತೇಕ ಅಂಗಡಿ ಮತ್ತಿತರೆ ವ್ಯಾಪಾರ ಮಾಡುವ ಸ್ಥಳಗಳಲ್ಲಿ ಸ್ಯಾನಿಟೈಸರ್‌ ಇರಲೇ ಇಲ್ಲ.

ತರಕಾರಿ ವ್ಯಾಪಾರ ಜೋರು: ಇಷ್ಟು ದಿನ ನಗರದ ಹಳೇ ಮಾಧ್ಯಮಿಕ ಶಾಲಾ ಆವರಣ ಹಾಗೂ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನಕ್ಕೆ ಸೀಮಿತವಾಗಿದ್ದ ತರಕಾರಿ ವ್ಯಾಪಾರ ಸೋಮವಾರ ತುಸು ವಿಸ್ತಾರಗೊಂಡಿತ್ತು. ವಾಹನಗಳು, ತಳ್ಳು ಗಾಡಿಗಳಲ್ಲಿ ಕೂಡಾ ವ್ಯಾಪಾರ ಜೋರಾಗಿತ್ತು. ಗಾಂಧಿ  ವೃತ್ತ, ಜೆಸಿಆರ್‌ ಬಡಾವಣೆ, ದೊಡ್ಡಪೇಟೆ, ಚಿಕ್ಕಪೇಟೆ, ಕೆಳಗೋಟೆ ಸೇರಿದಂತೆ ಅಲ್ಲಲ್ಲಿ ತರಕಾರಿ ಮಾರಾಟ ಕಾಣಿಸುತ್ತಿತ್ತು.

ಹಳೇ ಮಾಧ್ಯಮಿಕ ಶಾಲಾ ಆವಣದಲ್ಲಂತೂ ಜನ ಜಾತ್ರೆಯಾಗಿತ್ತು. ಪೊಲೀಸರು ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ಮನವಿ ಮಾಡಿದರೂ ಜನ ಕೇಳಿಸಿಕೊಳ್ಳುವ ಸ್ಥಿತಿಯಲ್ಲಿರಲಿಲ್ಲ. ದಿನಸಿ, ಕಟ್ಟಡ ನಿರ್ಮಾಣ, ಕನ್ನಡಕದ ಅಂಗಡಿ, ಮಾಂಸ ಮಾರಾಟಕ್ಕೂ ಅವಕಾಶ ಇರುವುದರಿಂದ ಕಬ್ಬಿಣ, ಸಿಮೆಂಟ್‌ ಅಂಗಡಿಗಳ ಬಳಿ ಜನರು ಜಮಾಯಿಸಿದ್ದರು.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.