ಒತ್ತುವರಿ ತೆರವಿಗೆ ಶಾಸಕ ತಿಪ್ಪಾರೆಡ್ಡಿ ಸೂಚನೆ
Team Udayavani, Jun 16, 2021, 10:34 PM IST
ಚಿತ್ರದುರ್ಗ: ನಗರದ ವಿ.ಪಿ. ಬಡಾವಣೆಯಲ್ಲಿ ಕನ್ಸರ್ವೆನ್ಸಿಗಳ ಒತ್ತುವರಿಯಾಗಿದ್ದು, ಕೂಡಲೇ ಅದನ್ನು ತೆರವುಗೊಳಿಸಿ ಎಂದು ಶಾಸಕ ಜಿ.ಎಚ್. ತಿಪ್ಪಾರೆಡ್ಡಿ, ನಗರಸಭೆ ಪೌರಾಯುಕ್ತರಿಗೆ ಸೂಚಿಸಿದರು.
ವಿ.ಪಿ. ಬಡಾವಣೆಯ 3ನೇ ಕ್ರಾಸ್ (ಹಿಟ್ಟಿನ ಗಿರಣಿ ಹತ್ತಿರ) ಸಿಸಿ ರಸ್ತೆ, ಕಾಮಗಾರಿಗೆ ಚಾಲನೆ ನೀಡಿ ಅಕ್ಕ-ಪಕ್ಕದಲ್ಲಿ ನಗರಸಭೆಯ ಜಾಗವಾದ ಕನ್ಸರ್ವೆನ್ಸಿಯನ್ನು ಕೆಲವರು ಒತ್ತುವರಿ ಮಾಡಿ ಗೇಟ್ ಹಾಕಿದ್ದನ್ನು ಕಂಡು ಕೋಪಗೊಂಡ ಶಾಸಕರು, ಇದನ್ನು ಯಾರು ಮಾಡಿದ್ದು, ಇಲ್ಲಿ ನಗರಸಭೆಯ ಜಾಗವನ್ನು ಒತ್ತುವರಿ ಮಾಡುವ ಮೂಲಕ ಮನೆಯನ್ನು ನಿರ್ಮಾಣ ಮಾಡಿ ಮೆಟ್ಟಿಲುಗಳನ್ನು ಹಾಕಿದ್ದಾರೆ ಇದರ ಬಗ್ಗೆ ಪೌರಾಯುಕ್ತರಿಗೆ ತಿಳಿಸಿ ಕೊಡಲೇ ತೆರವುಗೊಳಿಸುವಂತೆ ಸೂಚನೆ ನೀಡಿದರು.
ಜೆ.ಸಿ.ಆರ್. ಬಡಾವಣೆಯ ಎರಡನೇ ತಿರುವಿನಿಂದ ವಿ.ಪಿ. ಬಡಾವಣೆಗೆ ಬರುವ ದಾರಿಯ ಪಕ್ಕದಲ್ಲಿ ಇರುವ ಕನ್ಸರ್ವೆನ್ಸಿಗೆ ಅಡ್ಡಲಾಗಿ ಗೇಟ್ ಹಾಕಿದ್ದರಿಂದ ಇಲ್ಲಿ ಹಂದಿಗಳ ವಾಸ ಹೆಚ್ಚಾಗಿದೆ. ಇದರಿಂದ ನಗರದಲ್ಲಿ ರೋಗಗಳ ಹೆಚ್ಚಾಗುತ್ತಿದೆ. ಈಗಲೇ ಜನತೆ ಕೊರೊನಾಗೆ ತುತ್ತಾಗುತ್ತಿದ್ದಾರೆ. ಮುಂದೆ ಮತ್ತೂಂದು ರೋಗ ಬರುವುದು ಬೇಡ, ಇದರ ಬಗ್ಗೆ ನಿಗಾ ವಹಿಸಿ ಎಲ್ಲವನ್ನೂ ತೆರವುಗೊಳಿಸಿ ಎಂದರು.
ಇದೇ ವೇಳೆ ಸಮಯದಲ್ಲಿ ಅಲ್ಲೇ ಇದ್ದ ಸರ್ಕಾರದ ಸಹಾಯಕ ಔಷ ಧ ನಿಯಂತ್ರಣ ಕಚೇರಿಗೆ ಸಮಯ ಮೀರಿದ್ದರೂ ಕರ್ತವ್ಯಕ್ಕೆ ಹಾಜರಾಗದ ಅ ಧಿಕಾರಿ ಹಾಗೂ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡರು. ನಗರಸಭಾ ಸದಸ್ಯೆ ರೋಹಿಣಿ ನವೀನ್, ಮುಖಂಡರಾದ ರವಿಕುಮಾರ್, ವೇದ ಪ್ರಕಾಶ್, ಕುಮಾರ್, ತಿಮ್ಮಣ್ಣ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು
Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ
MUST WATCH
ಹೊಸ ಸೇರ್ಪಡೆ
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..