ನ್ಯಾನೋ ಯೂರಿಯಾ ಪರಿಸರ ಸ್ನೇಹಿ


Team Udayavani, Jun 16, 2021, 10:49 PM IST

16-20

ಭರಮಸಾಗರ: ಪ್ರಪಂಚದಲ್ಲೇ ಮೊಟ್ಟ ಮೊದಲ ಬಾರಿಗೆ ಇಫ್ಕೋ ಸಂಸ್ಥೆ ರೈತ ಮತ್ತು ಪರಿಸರ ಸ್ನೇಹಿ ನ್ಯಾನೋ ಯೂರಿಯಾವನ್ನು ಕರ್ನಾಟಕದಲ್ಲಿ ಪರಿಚಯಿಸುತ್ತಿದೆ ಎಂದು ಇಫ್ಕೋ ಸಂಸ್ಥೆಯ ಕ್ಷೇತ್ರಾಧಿಕಾರಿ ಲಕ್ಷ್ಮೀಶ್‌ ಹೇಳಿದರು.

ಸಮೀಪದ ಕಾಲಗೆರೆ ಗ್ರಾಮದ ಜಮೀನೊಂದರಲ್ಲಿ ಕೃಷಿ ಇಲಾಖೆ ವತಿಯಿಂದ ಆಯೋಜಿಸಿದ್ದ ನ್ಯಾನೋ ಯೂರಿಯಾ ದ್ರಾವಣ ಸಿಂಪಡಣೆಯ ಪ್ರಾತ್ಯಕ್ಷಿಕೆಯಲ್ಲಿ ಅವರು ಮಾತನಾಡಿದರು. ಒಂದು ಚೀಲ ಯೂರಿಯಾ ಗೊಬ್ಬರ ಬಳಕೆಗೆ ಬದಲಾಗಿ 500 ಎಂಎಲ್‌ ನ್ಯಾನೋ ಯೂರಿಯಾವನ್ನು ಬೆಳೆಗಳಿಗೆ ಸಿಂಪಡಣೆ ಮಾಡಿ ರೈತರು ಹೆಚ್ಚಿನ ಲಾಭ ಪಡೆದುಕೊಳ್ಳಬಹುದು. ಮೆಕ್ಕೆಜೋಳ ಸೇರಿದಂತೆ ಎಲ್ಲಾ ಬೆಳೆಗಳಿಗೆ ಇದನ್ನು ಬಳಸಬಹುದು. ಪರಿಸರಕ್ಕು ಹಾನಿಯಲ್ಲ. ಮನುಷ್ಯ, ಪ್ರಾಣಿ, ಜೇನುಹುಳು ಇತರೆ ಜೀವಿಗಳಿಗೆ ಈ ದ್ರಾವಣ ಅಪಾಯಕಾರಿಯಲ್ಲ. 50 ಕೆಜಿ ಯೂರಿಯಾ ಗೊಬ್ಬರ ಬಳಕೆ ಮಾಡಿದಾಗ ನೈಜವಾಗಿ ಶೇ. 30 ರಿಂದ 40 ಮಾತ್ರ ಉಪಯೋಗಕ್ಕೆ ಬರುತ್ತಿತ್ತು. ಉಳಿದಿದ್ದೆಲ್ಲ ಮಳೆ ನೀರಿಗೆ ಹರಿಯುವುದು ಇಲ್ಲವೇ ಬಿಸಿಲಿಗೆ ಆವಿಯಾಗುತ್ತಿತ್ತು. ದಪ್ಪ ಕಾಳಿನ ಗ್ಲಾನ್‌ಲಾರ್‌ ಯೂರಿಯಾ ಬೇಗ ಕರಗುತ್ತಿರಲಿಲ್ಲ. ಅದನ್ನು ಬೇಗ ಕರಗದಂತೆ ತಯಾರಿಸಲಾಗುತ್ತಿತ್ತು. ಶೇ. 80ಕ್ಕಿಂತ ಹೆಚ್ಚು ಪ್ರಮಾಣದ ನ್ಯಾಯೋ ಯೂರಿಯಾ ಸಿಂಡಪಣೆ ಮಾಡುವುದರಿಂದ ನಷ್ಟವಾಗದು ಎಂದರು.

ನ್ಯಾನೋ ಯೂರಿಯಾ ಸಿಂಪಡಣೆ ಮಾಡಿದಾಗ ಎಲೆಗಳ ಮೂಲಕ ಸ್ಟೊಮ್ಯಾಟೋ ಮೂಲಕ ನೇರವಾಗಿ ಗಿಡಕ್ಕೆ ಬಳಕೆಯಾಗುತ್ತದೆ. ಮಳೆ ಕಡಿಮೆ ಇದ್ದಾಗ ಒಂದು ಲೀಟರ್‌ ನೀರಿಗೆ 4 ಅಥವಾ 2 ಎಂಎಲ್‌ ಸೇರಿಸಿ ಸಿಂಪಡಿಸಬೇಕು. ಸಾರಜನಕದ ಅಂಶ ಇದರಲ್ಲಿದ್ದು, 25 ರಿಂದ 30 ದಿನದಲ್ಲಿ ಮೆಕ್ಕೆಜೋಳಕ್ಕೆ ಮೊದಲ ನ್ಯಾನೊ ಯೂರಿಯಾ ಸಿಂಪಡಣೆ ಮಾಡಬೇಕು.

40 ರಿಂದ 45 ದಿನಗಳ ಅವ ಧಿಯಲ್ಲಿ ಎರಡನೇ ಸಿಂಡಪಣೆ ಮಾಡಬೇಕು. 45 ದಿನಗಳ ಒಳಗೆ ನೀಡುವ ಗೊಬ್ಬರದ ಅಂಶಗಳು ಮಾತ್ರ ಉಪಯುಕ್ತವಾಗಿರುತ್ತದೆ. ಇದನ್ನು ಸಿಂಪಡಣೆ ಮಾಡಿದ ಮೇಲೆ ಯೂರಿಯಾ ಗೊಬ್ಬರ ಬಳಕೆ ಮಾಡುವಂತಿಲ್ಲ ಎಂದು ತಿಳಿಸಿದರು. ಜೂನ್‌ 25ರ ನಂತರ ಎಲ್ಲಾ ಸಹಕಾರ ಸಂಘ, ಗೊಬ್ಬರದ ಅಂಗಡಿಗಳಲ್ಲಿ 240 ರೂ.ಗೆ 500 ಎಂಎಲ್‌ನ ನ್ಯಾನೋ ಯೂರಿಯಾ ಲಭ್ಯವಾಗಲಿದೆ. ಒಂದು ಎಕರೆಗೆ ಅರ್ಧ ಲೀಟರ್‌ ಬಳಸಬಹುದು. ಮಳೆ ಕಡಿಮೆ ಇದ್ದಾಗ ಲೀಟರ್‌ಗೆ 2 ಎಂಎಲ್‌, ಮಳೆ ಜಾಸ್ತಿ ಇದ್ದಾಗ 4 ಎಂಎಲ್‌ ಬಳಕೆ ಮಾಡಬಹುದು ಎಂದರು.

ಇಫ್ಕೋ ಸಂಸ್ಥೆಯಿಂದ ಖರೀದಿಸಿದ ಯೂರಿಯಾ ಗೊಬ್ಬರ ಚೀಲ ಒಂದಕ್ಕೆ ನಾಲ್ಕು ಸಾವಿರದಂತೆ ಇನ್ಷೊರೆನ್ಸ್‌ ಇರುತ್ತದೆ. ಅಪಘಾತ ಹೊಂದಿದ ವ್ಯಕ್ತಿಯ ನಾಮಿನಿಗೆ 25 ಚೀಲಕ್ಕೆ ಒಂದು ಲಕ್ಷದವರೆಗೆ ಜೀವವಿಮೆ ಸೌಲಭ್ಯ ನೀಡಲಾಗುತ್ತದೆ. ಈ ಯೋಜನೆಯ ಲಾಭ ಪಡೆಯಲು ಕಡ್ಡಾಯವಾಗಿ ಗೊಬ್ಬರ ಖರೀದಿಸಿದ ರಸೀದಿಯನ್ನು ಹೊಂದಿರಬೇಕು ಎಂದು ಹೇಳಿದರು.

ಜಿಪಂ ಸದಸ್ಯ ಡಿ.ವಿ. ಶರಣಪ್ಪ, ಟಿಎಪಿಎಂಸಿ ಅಧ್ಯಕ್ಷ ಕೋಗುಂಡೆ ಮಂಜುನಾಥ್‌, ಬಿಜೆಪಿ ಮಂಡಲ ಅಧ್ಯಕ್ಷ ಶೈಲೇಶ್‌ಕುಮಾರ್‌, ತಾಪಂ ಸದಸ್ಯರಾದ ಕಾಲಗೆರೆ ಶೇಖರಪ್ಪ, ಎನ್‌. ಕಲ್ಲೇಶ್‌, ಕೃಷಿ ಇಲಾಖೆ ಜಂಟಿ ಉಪ ನಿರ್ದೇಶಕ ರಮೇಶ್‌ಕುಮಾರ್‌, ಸಹಾಯಕ ಕೃಷಿ ನಿರ್ದೇಶಕ ಚಂದ್ರ ಕುಮಾರ್‌, ಕೃಷಿ ಅ ಧಿಕಾರಿಗಳಾದ ಶ್ರೀನಿವಾಸ್‌ ಇತರರು ಇದ್ದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

BY Raghavendra ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸ್‌ ದಾಖಲು

BY Raghavendra ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸ್‌ ದಾಖಲು

Gas ಸಿಲಿಂಡರ್ ಸ್ಫೋಟ: ಮನೆ ಸಂಪೂರ್ಣ ಭಸ್ಮ

Gas ಸಿಲಿಂಡರ್ ಸ್ಫೋಟ: ಮನೆ ಸಂಪೂರ್ಣ ಭಸ್ಮ

ಬೈಕ್ ಗೆ ಡಿಕ್ಕಿ ಹೊಡೆದ ಟಾಟಾ ಏಸ್… ಓರ್ವ ಸ್ಥಳದಲ್ಲೇ ಮೃತ್ಯು, ಇನ್ನೋರ್ವ ಗಂಭೀರ

ಬೈಕ್ ಗೆ ಡಿಕ್ಕಿ ಹೊಡೆದ ಟಾಟಾ ಏಸ್… ಓರ್ವ ಸ್ಥಳದಲ್ಲೇ ಮೃತ್ಯು, ಇನ್ನೋರ್ವ ಗಂಭೀರ

ISRO Success: ಅಂತರಿಕ್ಷ ನೌಕೆ ‘ಪುಷ್ಪಕ್‌’ ಲ್ಯಾಂಡಿಂಗ್ ಪರೀಕ್ಷೆ ಯಶಸ್ವಿ…

ISRO ಸಾಧನೆ: ಅಂತರಿಕ್ಷ ನೌಕೆ ‘ಪುಷ್ಪಕ್‌’ ಲ್ಯಾಂಡಿಂಗ್ ಪರೀಕ್ಷೆ ಯಶಸ್ವಿ…

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.