ತೈಲ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ


Team Udayavani, Jun 18, 2021, 10:49 PM IST

18-18

ಮೊಳಕಾಲ್ಮೂರು: ಕೊರೊನಾ ಸಂಕಷ್ಟದಲ್ಲಿಯೂ ಕೇಂದ್ರ ಬಿಜೆಪಿ ಸರ್ಕಾರವು ನಿತ್ಯವೂ ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಮಾಡಿ ದೇಶದಲ್ಲಿ ಜನಸಾಮಾನ್ಯರು ಒಪ್ಪತ್ತಿನ ಊಟಕ್ಕೂ ಗತಿಯಿಲ್ಲದೆ ಸಾಯುವಂತಹ ದುಸ್ಥಿತಿ ನಿರ್ಮಿಸಿ ಮರಣಶಾಸನವಾಗಿಸಿದ ಬಿಜೆಪಿಯನ್ನು ದೇಶದಿಂದ ಕಿತ್ತೂಗೆಯಬೇಕೆಂದು ಕಾಂಗ್ರೆಸ್‌ ಮಹಿಳಾ ಕಾರ್ಮಿಕ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಜೆ.ಜಯಲಕ್ಷ್ಮೀ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪಟ್ಟಣದ ಪಿ.ಟಿ.ಹಟ್ಟಿ ಬಳಿಯ ಪೆಟ್ರೋಲ್‌ ಬಂಕ್‌ ಆವರಣದಲ್ಲಿ ಮಹಿಳಾ ಕಾಂಗ್ರೆಸ್‌ ವತಿಯಿಂದ ಕೈಗೊಂಡ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಪೆಟ್ರೋಲ್‌, ಡೀಸೆಲ್‌ ದರ ಏರಿಕೆ ಮಾಡಿದ್ದರಿಂದ ದೇಶದ ಬಡ ಕೂಲಿ ಕಾರ್ಮಿಕ ಜನತೆಯು ಅಗತ್ಯ ಆಹಾರ ಪದಾರ್ಥಗಳ ಬೆಲೆ ಏರಿಕೆಯಾಗಿ ಒಪ್ಪತ್ತಿನ ಊಟಕ್ಕೆ ಪರದಾಡುವಂತಾಗಿದೆ. ದೇಶದಲ್ಲಿ 100 ರೂ.ಗೂ ಹೆಚ್ಚು ಪೆಟ್ರೋಲ್‌ ಹಾಗೂ ಡೀಸೆಲ್‌ನ ಬೆಲೆ ಏರಿಕೆಯಿಂದ ನಿತ್ಯದ ಜೀವನಕ್ಕೆ ಅಡುಗೆ ಎಣ್ಣೆ, ಬೇಳೆ, ಅಕ್ಕಿ ಬೆಲೆ ಸೇರಿದಂತೆ ಹಲವಾರು ಅಗತ್ಯ ವಸ್ತುಗಳ ಬೆಲೆಗಳು ಗಗನಕ್ಕೇರಿರುವುದರಿಂದ ಜನ ಸಾಮಾನ್ಯರು ಬದುಕಲಾರದಂತ ದುಸ್ಥಿತಿ ನಿರ್ಮಾಣವಾಗಿದೆ.

ಹಿಂದಿನ ಕಾಂಗ್ರೆಸ್‌ ಸರ್ಕಾರವು ದೇಶದಲ್ಲಿ ಪೆಟ್ರೋಲ್‌ ಮತ್ತು ಡೀಸೆಲ್‌ ತೆರಿಗೆ ಹಾಕದೆ ಬೆಲೆ ಏರಿಕೆ ಮಾಡದೆ ಆರ್ಥಿಕತೆಯನ್ನು ಸಮತೋಲನ ಕಾಪಾಡಲಾಗುತ್ತಿತ್ತು. ಪ್ರಸ್ತುತ ಪೆಟ್ರೋಲ್‌, ಡೀಸೆಲ್‌ಗೆ ಸುಮಾರು 60 ರಷ್ಟು ತೆರಿಗೆ ವಿಧಿಸಿ 100ಕ್ಕೂ ಹೆಚ್ಚಿನ ಬೆಲೆ ಏರಿಕೆ ಮಾಡಿದ್ದರಿಂದ ದಿನ ನಿತ್ಯದ ಸಾಮಗ್ರಿಗಳನ್ನು ಪಡೆಯಲಾಗದೆ ಬಡ ಜನತೆಯು ಹಸಿವಿನಿಂದ ಸಾಯುವಂತಾಗಿದೆ. ದೇಶದಲ್ಲಿ ಕೊರೊನಾ 3 ನೇ ಅಲೆ ಹರಡುತ್ತದೆ ಎಂದು ತಜ್ಞರ ಮಾಹಿತಿಯಿದ್ದರೂ ಯಾವುದೇ ಮುಂಜಾಗ್ರತೆ ಕ್ರಮ ಕೈಗೊಂಡು ಜನರ ರಕ್ಷಣೆ ಮಾಡದೆ ಹಲವಾರು ಹಗರಣವೆಸಗಿ ಬ್ಯಾಂಕ್‌ಗಳಲ್ಲಿ ಹಣ ದೋಚಿದವರನ್ನು ರಕ್ಷಿಸುವ ಕಾರ್ಯದಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿದರು.

ಭಾರತದಲ್ಲಿ ಜನಸಾಮಾನ್ಯರು ಸಂಕಷ್ಟದಲ್ಲಿದ್ದರೂ ಯಾವುದೇ ಪರಿಹಾರ ನೀಡದೆ ದೇಶದಲ್ಲಿ ಸಾವಿರಾರು ಕೋಟಿ ತೆರಿಗೆ ವಸೂಲಿ ಮಾಡಿ ಬೇರೆ ದೇಶಗಳಿಗೆ ದಾನ ನೀಡುತ್ತಿರುವುದು ನಾಚಿಕೆಗೇಡಿನ ಸಂಗತಿ. ಬಹುದಿನಗಳಿಂದಲೂ ರೈತರು ಪ್ರತಿಭಟನೆ ಮಾಡುತ್ತಿದ್ದರೂ ಕೇಂದ್ರ ಬಿಜೆಪಿ ಸರ್ಕಾರವು ಗಮನಹರಿಸದೆ ನಿರ್ಲಕ್ಷವಹಿಸಿ ಜನರ ಮೇಲೆ ಬರೆ ಮೇಲೆ ಬರೆ ಹಾಕಿ ಬಡಜನರ ಹೊಟ್ಟೆ ಮೇಲೆ ಹೊಡೆಯುತ್ತಿದ್ದೀರಿ.

ಇಂತಹ ಹಲವಾರು ಸಮಸ್ಯೆಗಳನ್ನು ನಿವಾರಿಸದ ಬಿಜೆಪಿ ಸರ್ಕಾರ ಕೂಡಲೇ ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆ ತಗ್ಗಿಸಬೇಕು. ನ್ಯಾಯಯುತವಾಗಿ ಆಡಳಿತ ನಡೆಸದಿದ್ದಲ್ಲಿ ರಾಜೀನಾಮೆ ನೀಡಿ ಇವಿಎಂ ಮಷಿನ್‌ ಗಳನ್ನು ಪಕ್ಕಕ್ಕಿಟ್ಟು ಆತ್ಮಸಾಕ್ಷಿಯಾಗಿ ಜನತಾ ನ್ಯಾಯಾಲಯದಲ್ಲಿ ಅಗ್ನಿ ಪರೀಕ್ಷೆಯಲ್ಲಿ ನ್ಯಾಯಯುತವಾಗಿ ಗೆಲ್ಲಿರಿ ನೋಡೋಣ ಎಂದು ಸವಾಲು ಹಾಕಿದರು.

ಪ.ಪಂ ಸದಸ್ಯ ಎಂ.ಅಬ್ದುಲ್ಲಾ, ಮಹಮ್ಮದ್‌ ವಸೀವುಲ್ಲಾ, ವೆಂಕಟೇಶ, ಗೋಪಾಲ್‌, ಮಹಿಳಾ ಕಾಂಗ್ರೆಸ್‌ನ ಬ್ಲಾಕ್‌ ಅಧ್ಯಕ್ಷೆ ಇಂದ್ರಮ್ಮ ಪಕ್ಷದ ಪದಾ ಧಿಕಾರಿಗಳಾದ ಜ್ಯೋತಮ್ಮ, ಕಮಲಮ್ಮ, ತಿಮ್ಮರಾಜ್‌, ಜುಬೇರ, ರμ ಹೆಚ್ಚಿನ ಕಾರ್ಯಕರ್ತರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.