ಲೋಪ ರಹಿತ ಕೆಲಸಕ್ಕೆ ಒತ್ತು ಕೊಡಿ
Team Udayavani, Jul 2, 2021, 9:24 PM IST
ಚಿತ್ರದುರ್ಗ: ಕಂದಾಯ ಇಲಾಖೆ ಕಟ್ಟ ಕಡೆಯ ನಾಗರಿಕನವರೆಗೆ ತಲುಪವಂತಹ ಇಲಾಖೆ. ಆದರೆ ಈ ಇಲಾಖೆ ಮೇಲೆ ಅನೇಕ ದೂರುಗಳು ಕೇಳಿ ಬರುತ್ತಿದ್ದು, ಮುಂದೆ ಹೀಗಾಗದಂತೆ ಜವಾಬ್ದಾರಿಯಿಂದ ಕೆಲಸ ಮಾಡಬೇಕು ಎಂದು ಜಿಲ್ಲಾಧಿ ಕಾರಿ ಕವಿತಾ ಎಸ್. ಮನ್ನಿಕೇರಿ ಹೇಳಿದರು.
ರಾಜ್ಯ ಕಂದಾಯ ಇಲಾಖೆ ನೌಕರರ ಸಂಘ, ರಾಜ್ಯ ಗ್ರಾಮ ಲೆಕ್ಕಾ ಕಾರಿಗಳ ಸಂಘ ಹಾಗೂ ಜಿಲ್ಲಾ ಶಾಖೆಗಳ ಸಹಯೋಗದಲ್ಲಿ ತಾಲೂಕು ಕಚೇರಿ ಆವರಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕಂದಾಯ ದಿನಾಚರಣೆ ಹಾಗೂ ಹಸಿರೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಬೇರೆಯವರಿಗೆ ಕೇಳಿದ್ದನ್ನೆಲ್ಲಾ ಕೊಡುವ ಕಂದಾಯ ಇಲಾಖೆ ಮಾತ್ರ ಸೋರುತ್ತಿರುವುದು ವಿಪರ್ಯಾಸ. ಕಂದಾಯ ಇಲಾಖೆ ಹೇಗಿದ್ದರೂ ಪರವಾಗಿಲ್ಲ, ಕಷ್ಟ ಸಹಿಸಿಕೊಂಡು ಜನಸೇವೆಯಲ್ಲಿ ತೊಡಗುತ್ತಿದ್ದೀರಿ. ಜನಸೇವೆಗೆ ನಿಮ್ಮ ಸಮಯವನ್ನು ಮುಡಿಪಾಗಿಡಿ. ಗ್ರಾಮಲೆಕ್ಕಾಧಿ ಕಾರಿಗಳು ನೈಜ ಸೈನಿಕರಿದ್ದಂತೆ. ಧೈರ್ಯವಾಗಿ ಮುನ್ನುಗಿ ಜನರ ಕೆಲಸ ಮಾಡಿ. ನಿಮ್ಮ ಹಿಂದೆ ನಾವಿದ್ದೇವೆ ಎಂದರು.
ಉಪವಿಭಾಗಾ ಧಿಕಾರಿ ಚಂದ್ರಯ್ಯ ಮಾತನಾಡಿ, ಕಟ್ಟ ಕಡೆಯ ವ್ಯಕ್ತಿಗೆ ಸೇವೆ ಮಾಡುವ ಅವಕಾಶ ಕಂದಾಯ ಇಲಾಖೆ ನೌಕರರಿಗೆ ಮಾತ್ರ ಇದೆ. ಕೊರೊನಾ ಸಂದಿಗ್ಧ ಪರಿಸ್ಥಿತಿಯಲ್ಲಿ ಕಂದಾಯ ಇಲಾಖೆ ಸಿಬ್ಬಂದಿಗಳು ಜೀವದ ಹಂಗು ತೊರೆದು ಕೆಲಸ ಮಾಡಿದ್ದಾರೆ. ಕಂದಾಯ ಇಲಾಖೆಗೆ ತನ್ನದೇ ಆದ ಮಹತ್ವವಿದೆ ಎಂದು ತಿಳಿಸಿದರು.
ಜಿಲ್ಲಾ ಕಂದಾಯ ಇಲಾಖೆ ನೌಕರರ ಸಂಘದ ಅಧ್ಯಕ್ಷ ಶರಣಪ್ಪ ಮಾತನಾಡಿ, ಕಂದಾಯ ಇಲಾಖೆ ಬೇರೆಯವರಿಗೆ ಸೇವೆ ಮಾಡುವುದಕ್ಕಾಗಿಯೇ ಮುಡುಪಾಗಿದೆ. ಈ ನಿಟ್ಟಿನಲ್ಲಿ ಯಾವುದೇ ದೂರು ಇಲಾಖೆಯ ಮೇಲೆ ಬರದಂತೆ ಪ್ರಾಮಾಣಿಕವಾಗಿ ಕೆಲಸ ಮಾಡುವಂತೆ ಗ್ರಾಮಲೆಕ್ಕಾ ಧಿಕಾರಿಗಳಿಗೆ ಕಿವಿಮಾತು ಹೇಳಿದರು.
ಗ್ರಾಮಲೆಕ್ಕಾ ಧಿಕಾರಿಗಳ ಸಂಘದ ಅಧ್ಯಕ್ಷ ಸಿದ್ದೇಶ್, ಉಪತಹಶೀಲ್ದಾರ್ ಪರಶುರಾಮ್, ಗ್ರಾಮಲೆಕ್ಕಾಧಿ ಕಾರಿಗಳ ಸಂಘದ ಗೌರವಾಧ್ಯಕ್ಷ ಪಾಂಡುರಂಗಪ್ಪ, ರಾಜಸ್ವ ನಿರೀಕ್ಷಕ ನವೀನ್ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು
Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ
MUST WATCH
ಹೊಸ ಸೇರ್ಪಡೆ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ