ತಿಪ್ಪೇರುದ್ರಸ್ವಾಮಿ ದೇವಾಲಯ ಇಂದಿನಿಂದ ಓಪನ್
Team Udayavani, Jul 5, 2021, 10:51 PM IST
ನಾಯಕನಹಟ್ಟಿ: ಕೊರೊನಾದಿಂದ ಮುಚ್ಚಿದ್ದ ಇಲ್ಲಿನ ತಿಪ್ಪೇರುದ್ರಸ್ವಾಮಿ ದೇವಾಲಯದಲ್ಲಿ ಸೋಮವಾರದಿಂದ ದೇವರ ದರ್ಶನ ಆರಂಭವಾಗಲಿದೆ. ದೀರ್ಘ ಕಾಲ ಮುಚ್ಚಿದ್ದರಿಂದ ಸ್ವತ್ಛತಾ ಕಾರ್ಯ ಆರಂಭಗೊಂಡಿದೆ. ಏ. 22 ರಂದು ಧಾರ್ಮಿಕ ದತ್ತಿ ಇಲಾಖೆ ಕೊರೊನಾ ಕಾರಣದಿಂದ ದೇವಾಲಯವನ್ನು ಮುಚ್ಚು ವಂತೆ ಆದೇಶಿಸಿತ್ತು.
ದೇವಾಲಯದ ಗರ್ಭಗುಡಿಯಲ್ಲಿ ದೇವರಿಗೆ ನಿತ್ಯಪೂಜೆ ನೆರವೇರುತ್ತಿತ್ತು. ಜತೆಗೆ ಭಕ್ತರಿಲ್ಲದೆ ರುದ್ರಾ ಭಿಷೇಕ ಜರುಗಿಸಲಾಗುತ್ತಿತ್ತು. ದೇವಾಲಯದ ಆರಂಭಕ್ಕೆ ದೇವಾಲಯದ ಸಿಬ್ಬಂದಿ ಸ್ವತ್ಛತಾ ಕಾರ್ಯ ಕೈಗೊಂಡಿದ್ದಾರೆ. ದೇವಾಲಯದ ಹೊರಾಂಗಣದಲ್ಲಿ ಅಳವಡಿಸಿದ್ದ ಬ್ಯಾರಿಕೇಡ್ಗಳನ್ನು ತೆರವುಗೊಳಿಸಲಾಗಿದೆ. ಒಳಾಂಗಣವನ್ನು ಸೋಪ್ ಪೌಡರ್, ನಾಯಿಲ್ ಬಳಸಿ ಸ್ವತ್ಛಗೊಳಿಸಲಾಗಿದೆ. ಮೂರನೇ ಹಂತದ ಅನ್ಲಾಕ್ ನಿಯಮಗಳಂತೆ ಪ್ರತಿಯೊº ಭಕ್ತರೂ ಮಾಸ್ಕ್ ಹಾಕಿರಬೇಕು. ದೇವಾಲಯದ ವತಿಯಿಂದ ಭಕ್ತರ ಕೈಗಳಿಗೆ ಸ್ಯಾನಿಟೈಸ್ ಮಾಡಲಾಗುವುದು.
ಗುಂಪಾಗಿ ದೇವಾಲಯ ಪ್ರವೇಶಕ್ಕೆ ಅವಕಾಶವಿಲ್ಲ. ಒಬ್ಬರಾದ ನಂತರ ಒಬ್ಬರಂತೆ ಸರತಿ ಸಾಲಿನಲ್ಲಿ ದೇವಾಲಯಕ್ಕೆ ಪ್ರವೇಶ ನೀಡಲಾಗುವುದು. ದೇವಾಲಯದಲ್ಲಿ ತೀರ್ಥ-ಪ್ರಸಾದ, ದಾಸೋಹ ಇರುವುದಿಲ್ಲ. ದರ್ಶನ, ವಾಹನ ಪೂಜೆ ಹಾಗೂ ಮಂಗಳಾರತಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ದೇವಾಲಯದ ಒಳಗೆ ಹಾಗೂ ಹೊರಗೆ ಭಕ್ತರಿಗೆ ಧ್ವನಿವರ್ಧಕದ ಮೂಲಕ ಸೂಚನೆಗಳನ್ನು ನೀಡಲಾಗುವುದು.
ಲಾಕ್ಡೌನ್ ಸಮಯದಲ್ಲಿ ದೇವಾಲಯದ ಹೊರಗೆ ಕೈಮುಗಿದು ಬಾಗಿಲಿಗೆ ತೆಂಗಿನಕಾಯಿ ಒಡೆದು ಪೂಜೆ ಸಲ್ಲಿಸುತ್ತಿದ್ದ ಭಕ್ತರಿಗೆ ಇದೀಗ ಸಂತಸವಾಗಿದೆ. ಕೊರೊನಾ ಕಾಲದಲ್ಲಿಯೂ ಇಲ್ಲಿನ ಐತಿಹಾಸಿಕ ತಿಪ್ಪೇರುದ್ರಸ್ವಾಮಿ ಜಾತ್ರೆ ಯಾವುದೇ ಅಡೆತಡೆಗಳಿಲ್ಲದೆ ಜರುಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…