ಕೆಎಂಇಆರ್‌ಸಿ ಪ್ರಕರಣ ಶೀಘ್ರ ಇತ್ಯರ್ಥ ನಿರೀಕ್ಷೆ


Team Udayavani, Jul 6, 2021, 10:31 PM IST

6-20

ಚಿತ್ರದುರ್ಗ: ಸುಪ್ರೀಂ ಕೋರ್ಟ್‌ನಲ್ಲಿ ಕಳೆದ ಹತ್ತು ವರ್ಷಗಳಿಂದ ಉಳಿದಿರುವ ಕೆಎಂಇಆರ್‌ಸಿಗೆ ಸಂಬಂಧಿ ಸಿದ 25 ಸಾವಿರ ಕೋಟಿ ರೂ.ಹಣದ ಪ್ರಕರಣ ಮೂರು ತಿಂಗಳಲ್ಲಿ ಇತ್ಯರ್ಥವಾಗಿ ಹಣ ಸಿಗುವ ನಿರೀಕ್ಷೆ ಇದೆ ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್‌ ಆರ್‌. ನಿರಾಣಿ ತಿಳಿಸಿದರು.

ನಗರದ ಜಿಲ್ಲಾ ಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಗಣಿ ಮತ್ತು ಭೂವಿಜ್ಞಾನ ಇಲಾಖೆ ಮತ್ತು ಕೆಎಂಇಆರ್‌ಸಿಯ ಪ್ರಗತಿ ಪರಿಶೀಲನಾ ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಮುಂದಿನ 15 ದಿನಗಳಲ್ಲಿ ಈ ಪ್ರಕರಣ ವಿಚಾರಣೆಗೆ ಬರಲಿದ್ದು, ರಾಜ್ಯದಿಂದ ಹಿರಿಯ ನ್ಯಾಯವಾದಿಗಳನ್ನು ನೇಮಿಸಲಾಗಿದೆ.

ಎಲ್ಲವೂ ಸರಿಯಾದರೆ ಮೂರು ತಿಂಗಳಲ್ಲಿ ಚಿತ್ರದುರ್ಗ ಜಿಲ್ಲೆಗೆ ಸಂಬಂಧಿ ಸಿದಂತೆ 3792 ಕೋಟಿ ರೂ. ಅನುದಾನ ದೊರೆಯಲಿದೆ. ಇದನ್ನಾಧರಿಸಿ 4500 ಕೋಟಿ ರೂ.ಗಳಿಗೆ ಸಮಗ್ರ ಡಿಪಿಆರ್‌ ತಯಾರಿಸಲಾಗಿದೆ ಎಂದರು.

ರಾಜ್ಯದಲ್ಲಿ ಗಣಿಗಾರಿಕೆ ಹಾಗೂ ಮರಳಿಗೆ ಸಂಬಂ ಧಿಸಿದಂತೆ ಸ್ಪಷ್ಟವಾದ ನೀತಿ ಇರಲಿಲ್ಲ. ನಮ್ಮ ಸರ್ಕಾರ ಹೊಸ ಮರಳು ನೀತಿ ಹಾಗೂ ಗಣಿ ಪಾಲಿಸಿ 2021-2026 ರೂಪಿಸಿದೆ. ಇದು ಐದು ವರ್ಷದವರೆಗೆ ಚಾಲ್ತಿಯಲ್ಲಿರುತ್ತದೆ. ಸದ್ಯ ಮರಳು ಬ್ಲಾಕ್‌ಗಳಲ್ಲಿ ಸಿಗುತ್ತಿದೆ. ಆದರೆ ಇದನ್ನು ಬ್ಯಾಗ್‌ಗಳಿಗೆ ಹಾಕಿ ಮಾರಾಟ ಮಾಡುವುದು, ಮರಳಿಗೆ ಸಿಮೆಂಟ್‌ ಮಿಶ್ರಣ ಮಾಡಿ ಮಾರಾಟ ಮಾಡುವ ಪ್ರಯೋಗವನ್ನೂ ಮಾಡಲು ಮುಂದಾಗಿದ್ದೇವೆ. ಇದಕ್ಕಾಗಿ ರಾಜ್ಯಾದ್ಯಂತ 500 ಯೂನಿಟ್‌ ತೆರೆಯಬೇಕಿದೆ.

ಆಸಕ್ತರಿಂದ ಅರ್ಜಿ ಆಹ್ವಾನಿಸುತ್ತೇವೆ. ನದಿಗಳಲ್ಲಿ ನೀರು ಸಂಗ್ರಹಣೆಯಾದರೆ ಮರಳು ತೆಗೆಯಲು ಸಾಧ್ಯವಿಲ್ಲ. ಬ್ಯಾಗ್‌ಗಳಲ್ಲಿ ಮರಳು ಸಂಗ್ರಹಿಸಿದರೆ ವರ್ಷಪೂರ್ತಿ ಮರುಳು ಬಳಕೆ ಮಾಡವ ಯೋಜನೆ ಸಿದ್ಧಪಡಿಸಲಾಗಿದೆ ಎಂದು ವಿವರಿಸಿದರು.

ಮರಳು ಬ್ಯಾಗ್‌ಗಳಿಗೆ ಸರ್ಕಾರ ದರ ನಿಗದಿಪಡಿಸಿದ್ದು, ಮರಳು ಬ್ಯಾಗ್‌ಗಳಲ್ಲಿ ಸರ್ಕಾರದ ಲೋಗೊ ಮತ್ತು ಕಂಪನಿ ಹೆಸರು ಇರುತ್ತದೆ. ಪ್ರತಿಯೊಂದು ಬ್ಯಾಗ್‌ ಕ್ರಮಸಂಖ್ಯೆ ಹೊಂದಿದ್ದು, ಇದರಿಂದ ಇಲಾಖೆಗೆ ಬರುವ ಆದಾಯ ಹೆಚ್ಚಾಗಲಿದೆ. ಗ್ರಾಹಕರಿಗೆ ಉತ್ತಮ ಗುಣಮಟ್ಟದ ಮರಳು ಸರಬರಾಜು ಮಾಡಲು ಅನುಕೂಲವಾಗಲಿದೆ ಎಂದರು.

ಅರ್ಜಿ ವಿಲೇವಾರಿಗೆ ಮೈನಿಂಗ್‌ ಅದಾಲತ್‌: 2000 ನೇ ಸಾಲಿನಿಂದ ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ ಸಂಬಂಧಪಟ್ಟಂತೆ ವಿವಿಧ ಉತ್ಪಾದನಾ ಚಟುವಟಿಕೆಗಳಿಗೆ ಸಂಬಂ ಸಿದ 6 ಸಾವಿರ ಅರ್ಜಿಗಳು ಬಾಕಿ ಉಳಿದಿವೆ. ಇವುಗಳನ್ನು ಇತ್ಯರ್ಥಗೊಳಿಸಲು ಸಿಂಗಲ್‌ ವಿಂಡೋ ಸಿಸ್ಟಮ್‌ ಜಾರಿಗೆ ತರಲಾಗುವುದು ಎಂದು ಸಚಿವ ನಿರಾಣಿ ತಿಳಿಸಿದರು.

ಸರ್ಕಾರವೇ ಉದ್ದಿಮೆದಾರರ ಮನೆಗೆ‌ ಬರುವ ಸಲುವಾಗಿ ಇಲಾಖೆಯ ಪ್ರತಿಯೊಂದು ವಿಭಾಗದಲ್ಲೂ ಗಣಿಗೆ ಸಂಬಂಧಪಟ್ಟ ಸಮಸ್ಯೆಗಳನ್ನು ಬಗೆಹರಿಸಲು ಮೈನಿಂಗ್‌ ಆದಾಲತ್‌ ಆರಂಭಿಸಲಾಗುವುದು. ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಸಂಬಂ ಧಿಸಿದಂತೆ ಚಿತ್ರದುರ್ಗದಲ್ಲಿ ಸ್ವಂತ ಕಟ್ಟಡ ಇಲ್ಲ. ಇದಕ್ಕಾಗಿ ಸುಮಾರು 2 ಕೋಟಿ ರೂ. ವೆಚ್ಚದಲ್ಲಿ ಖನಿಜ ಭವನ ನಿರ್ಮಿಸಲು ಶೀಘ್ರದಲ್ಲಿ ಭೂಮಿಪೂಜೆ ನೆರವೇರಿಸಲಾಗುವುದು. ರಾಜ್ಯದ 13 ಜಿಲ್ಲೆಗಳಲ್ಲಿ ಖನಿಜ ಭವನಗಳಿದ್ದು, ಇನ್ನುಳಿದ ಜಿಲ್ಲೆಗಳಲ್ಲೂ ಖನಿಜ ಭವನಗಳನ್ನು ಸ್ಥಾಪನೆ ಮಾಡಲಾಗುವುದು ಎಂದರು.

ರೋಗಗ್ರಸ್ಥ ಗಣಿ ಆರಂಭಕ್ಕೆ ಕ್ರಮ: ಈಗಾಗಲೇ ನಷ್ಟದಲ್ಲಿದ್ದು ಮುಚ್ಚಿರುವ ಸಿ ದರ್ಜೆಯ ಹಲವು ಗಣಿಗಳನ್ನು ಆರಂಭಿಸಲು ಚಿಂತನೆ ನಡೆದಿದೆ. ಇದರಲ್ಲಿ ಇಂಗಳದಾಳ್‌ ತಾಮ್ರ ಗಣಿ, ಕೋಲಾರ ಚಿನ್ನದ ಗಣಿಯೂ ಸೇರಿವೆ. ರಾಜ್ಯದಲ್ಲಿ ಖನಿಜ ಸಂಪತ್ತು ಹೆಚ್ಚಿದೆ. ಯಾವ ಯಾವ ಭಾಗದಲ್ಲಿ ಎಷ್ಟಿದೆ ಎಂದು ತಿಳಿಯಲು ಹೈ ರೆಸಲ್ಯೂಷನ್‌ ಸರ್ವೆ ಮಾಡಲು ಜಾಗತಿಕ ಟೆಂಡರ್‌ ಕರೆಯಲಾಗುವುದು.

ಈ ಮೂಲಕ 2023ಕ್ಕೆ ಮೈನಿಂಗ್‌ ಗ್ಲೋಬಲ್‌ ಹೂಡಿಕೆದಾರರ ಸಮಾವೇಶ ಆಯೋಜಿಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು. ಸಭೆಯಲ್ಲಿ ಶಾಸಕರಾದ ಜಿ.ಎಚ್‌. ತಿಪ್ಪಾರೆಡ್ಡಿ, ಪೂರ್ಣಿಮಾ ಶ್ರೀನಿವಾಸ್‌, ಟಿ. ರಘುಮೂರ್ತಿ, ಎಂ. ಚಂದ್ರಪ್ಪ, ಕೆಎಂಇಆರ್‌ಸಿ ಪ್ರಧಾನ ಕಾರ್ಯದರ್ಶಿ ಪಿ.ಸಿ. ರೇ, ನಿರ್ದೇಶಕ ಪಿ.ಎನ್‌. ರವೀಂದ್ರ, ಜಿಲ್ಲಾಧಿಕಾರಿ ಕವಿತಾ ಎಸ್‌. ಮನ್ನಿಕೇರಿ, ಜಿಪಂ ಸಿಇಒ ಡಾ| ಕೆ.ನಂದಿನಿದೇವಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಜಿ. ರಾಧಿಕಾ, ಗಣಿ ಮತ್ತು ಭೂವಿಜ್ಞಾನ ಇಲಾಖೆ ಉಪನಿರ್ದೇಶಕ ಚಂದ್ರಶೇಖರ್‌ ಮತ್ತಿತರರು ಭಾಗವಹಿಸಿದ್ದರು.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.