ಮಂದಿರ ನಿರ್ಮಾಣಕ್ಕೆ ಕೈ ಜೋಡಿಸಿ
ಬೈಕ್ ರ್ಯಾಲಿಗೆ ವಿಶ್ವ ಹಿಂದೂ ಪರಿಷತ್ ತಾಲೂಕು ಅಧ್ಯಕ್ಷ ಡಾ.ಡಿ.ಎನ್.ಮಂಜುನಾಥ ಚಾಲನೆ ನೀಡಿದರು.
Team Udayavani, Jan 29, 2021, 3:45 PM IST
ಚಳ್ಳಕೆರೆ: ಕೋಟಿ, ಕೋಟಿ ಶ್ರೀರಾಮಭಕ್ತರ ಕನಸು ನನಸಾಗುವ ಕಾರ್ಯಕ್ಕೆ ಚಾಲನೆ ದೊರಕಿದ್ದು, ಈಗಾಗಲೇ ದೇಶದ ಶ್ರೀರಾಮಭಕ್ತರು, ಕೋಟಿ,ಕೋಟಿ ಹಣವನ್ನು ರಾಮಮಂದಿರ ನಿರ್ಮಾಣಕ್ಕಾಗಿ ಸ್ವಯಂ ಸ್ಪೂರ್ತಿಯಿಂದ ದೇಣಿಗೆ ನೀಡುತ್ತಿದ್ದು, ಈ ಪವಿತ್ರ ಕಾರ್ಯದಲ್ಲಿ ಎಲ್ಲರೂ ಸಹಕಾರ ನೀಡಬೇಕು ಎಂದು ವಿಶ್ವ ಹಿಂದೂ ಪರಿಷತ್ ತಾಲೂಕು ಅಧ್ಯಕ್ಷ ಡಾ.ಡಿ.ಎನ್.ಮಂಜುನಾಥ ತಿಳಿಸಿದರು.
ಇಲ್ಲಿನ ವಾಲ್ಮೀಕಿ ವೃತ್ತದಲ್ಲಿ ಪ್ರಭುಶ್ರೀ ರಾಮಚಂದ್ರನ ಮಂದಿರ ನಿರ್ಮಾಣ ಹಿನ್ನೆಲೆಯಲ್ಲಿ ಶ್ರೀರಾಮಭಕ್ತರಲ್ಲಿ ಜಾಗೃತಿ ಮೂಡಿಸಲು ಹಮ್ಮಿಕೊಂಡಿದ್ದ ಮೋಟಾರ್ ಬೈಕ್ ರ್ಯಾಲಿಗೆ ಚಾಲನೆ ನೀಡಿ ಮಾತನಾಡಿದ ಅವರು, ಈಗಾಗಲೇ ತಾಲೂಕಿನಾದ್ಯಂತ ದೇಣಿಗೆ ಸಂಗ್ರಹ ಕಾರ್ಯ ನಡೆಯುತ್ತಿದ್ದು, ನಿರೀಕ್ಷೆಗೂ ಮೀರಿ ಹೆಚ್ಚಿನ ಸಂಖ್ಯೆಯ ರಾಮಭಕ್ತರು ಈ ಕಾರ್ಯಕ್ಕೆ ಕೈ ಜೋಡಿಸಿದ್ದಾರೆ. ಆದರೆ, ಪ್ರತಿಯೊಬ್ಬರೂ ಸಹ ತಮ್ಮ ಕೈಲಾದ ಕಾಣಿಕೆಯನ್ನು ಈ ಕಾರ್ಯಕ್ಕೆ ನೀಡುವ ನಿಟ್ಟಿನಲ್ಲಿ ಬೈಕ್ ರ್ಯಾಲಿಯ ಮೂಲಕ ಶ್ರೀರಾಮಭಕ್ತರಲ್ಲಿ ಜಾಗೃತಿಯನ್ನು
ಉಂಟು ಮಾಡಲಾಗುತ್ತಿದೆ ಎಂದರು.
ಶ್ರೀರಾಮ ಮಂದಿರ ದೇಣಿಗೆ ಸಂಗ್ರಹಣ ಕಾರ್ಯದ ನೇತೃತ್ವದ ಸಮಿತಿಯ ನಿರ್ದೇಶಕಿ ಲಕ್ಷ್ಮೀ ಶ್ರೀವತ್ಸ ಮಾತನಾಡಿ, ಇದೊಂದು ಪುಣ್ಯ ಕ್ಷಣ. ಪ್ರತಿಯೊಬ್ಬ ಹಿಂದೂ ಆತ್ಮ ವಿಶ್ವಾಸದಿಂದ ಹೆಮ್ಮೆ ಪಡುವ ಸಂಗತಿಯಾಗಿದೆ. ಸಾವಿರಾರು ವರ್ಷಗಳ ಶ್ರೀರಾಮಮಂದಿರ ನಿರ್ಮಾಣ
ಕನಸು ನನಸಾಗುವ ಕ್ಷಣ ದಿನದಿಂದ ದಿನಕ್ಕೆ ಹತ್ತಿರ ಬರುತ್ತಿದೆ. ಶ್ರೀರಾಮನ ಜನ್ಮಸ್ಥಾನದಲ್ಲಿಯೇ ಮಂದಿರ ನಿರ್ಮಾಣವಾಗುತ್ತಿದ್ದು, ಇದು ವಿಶ್ವದ ಗಮನ ಸೆಳೆಯಲಿದೆ ಎಂದರು.
ಬೈಕ್ ರ್ಯಾಲಿಯಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬಾಳೆಮಂಡಿ ರಾಮದಾಸ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜೆ.ಪಿ.ಜಯಪಾಲಯ್ಯ, ಎಪಿಎಂಸಿ ಅಧ್ಯಕ್ಷ ಡಿ.ಸೋಮಶೇಖರ ಮಂಡಿಮಠ, ನಿರ್ದೇಶಕರಾದ ಸಿ.ಎಸ್ .ಪ್ರಸಾದ್, ಡಿ.ಎಂ.ತಿಪ್ಪೇಸ್ವಾಮಿ, ಬಿಜೆಪಿ ಮುಖಂಡರಾದ ಈಶ್ವರನಾಯಕ, ಚಿದಾನಂದ, ತಿಮ್ಮಣ್ಣ, ಮೋಹನ್, ಟಿ.ಮಂಜುನಾಥ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಮಳೆಯಿಂದ ವಿದ್ಯುತ್ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ
Chitradurga; ಸರ್ಕಾರಕ್ಕೆ, ಪಕ್ಷಕ್ಕೆ, ಪೆನ್ ಡ್ರೈವ್ ಗೆ ಯಾವ ಸಂಬಂಧವಿಲ್ಲ:ರಾಮಲಿಂಗಾರೆಡ್ಡಿ
Tragedy: ಈಜಲು ಬಾರದಿದ್ದರೂ ಕೆರೆಯಲ್ಲಿ ಈಜಲು ಹೋಗಿ ಜೀವ ಕಳೆದುಕೊಂಡ ಯುವಕ
ಉತ್ತರಾಧಿಕಾರಿ ಆಯ್ಕೆ ಟ್ರಸ್ಟ್-ಹಿರಿಯರ ಹೊಣೆ: ಮಾದಾರ ಚನ್ನಯ್ಯ ಶ್ರೀ
ಮದುವೆ ಸಮಾರಂಭದಲ್ಲಿ ಊಟ ಮಾಡಿದ 30ಕ್ಕೂ ಅಧಿಕ ಮಂದಿ ಅಸ್ವಸ್ಥ… ಆಸ್ಪತ್ರೆಗೆ ದಾಖಲು