ಅನುದಾನ ಬಳಸದ ಅಧಿಕಾರಿಗಳಿಗೆ ಕ್ಲಾಸ್‌


Team Udayavani, Jul 7, 2021, 10:23 PM IST

7-18

ಚಿತ್ರದುರ್ಗ: ಸರ್ಕಾರದಿಂದ ವಿವಿಧ ಉದ್ದೇಶಗಳಿಗೆ ಬಿಡುಗಡೆಯಾದ ಅನುದಾನವನ್ನು ಕಾಲಮಿತಿಯೊಳಗೆ ಬಳಕೆ ಮಾಡದ ಅ ಧಿಕಾರಿಗಳನ್ನು ಕ್ರೀಡಾ ಸಚಿವ ಡಾ| ನಾರಾಯಣ ಗೌಡ ತರಾಟೆಗೆ ತೆಗೆದುಕೊಂಡರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಕ್ರೀಡಾ ಇಲಾಖೆ, ಶಾಸಕರ ಪ್ರದೇಶಾಭಿವೃದ್ಧಿ ಅನುದಾನ ಬಳಕೆ, ಬಯಲುಸೀಮೆ ಪ್ರದೇಶಾಭಿವೃದ್ಧಿ ಮತ್ತಿತರೆ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಸರ್ಕಾರ ಅನುದಾನ ನೀಡಿದರೂ ಸರಿಯಾದ ರೀತಿಯಲ್ಲಿ ನಿರ್ಮಾಣ ಏಜೆನ್ಸಿಯವರು ಕಾರ್ಯ ನಿರ್ವಹಿಸುತ್ತಿಲ್ಲ. ನಿರ್ಮಾಣ ಏಜೆನ್ಸಿಯವರ ವಿಳಂಬದಿಂದ ಅಭಿವೃದ್ಧಿ ಕಾರ್ಯಗಳಿಗೆ ತೊಂದರೆಯಾಗುತ್ತಿದೆ ಎಂದು ಕೆಆರ್‌ಐಡಿಎಲ್‌, ನಿರ್ಮಿತಿ ಕೇಂದ್ರ, ಭೂಸೇನಾ ನಿಗಮದ ಅಧಿ ಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ಜಿಲ್ಲೆಯಲ್ಲಿ ಒಟ್ಟು 24.94 ಕೋಟಿ ರೂ. ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನವಿದ್ದು, ದಾಖಲೆ ಪ್ರಕಾರ ಅನುದಾನದ ಶೇ.1 ರಷ್ಟೂ ಖರ್ಚಾಗಿಲ್ಲ. ಈ ನಿಟ್ಟಿನಲ್ಲಿ ಸಂಬಂಧಪಟ್ಟ ಅ ಧಿಕಾರಿಗಳು ತಕ್ಷಣ ಎಚ್ಚೆತ್ತು ಕೆಲಸ ಮಾಡಬೇಕು ಎಂದು ತಾಕೀತು ಮಾಡಿದರು.

ಶಾಸಕ ಜಿ.ಎಚ್‌. ತಿಪ್ಪಾರೆಡ್ಡಿ ಮಾತನಾಡಿ, ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನಕ್ಕೆ ಸಂಬಂಧಿ  ಸಿದಂತೆ ಎಲ್ಲ ಅನುದಾನಕ್ಕೂ ಕ್ರಿಯಾ ಯೋಜನೆ ನೀಡಲಾಗಿದೆ. ಹೆಚ್ಚಿನ ಅನುದಾನಕ್ಕೆ ಬೇಡಿಕೆ ಇಡಗಿದೆ ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ದಾಖಲೆ ಪ್ರಕಾರ ಅನುದಾನದ ಬಳಕೆ ಶೇ. 1ರಷ್ಟು ಅನುದಾನವೂ ಖರ್ಚಾಗಿಲ್ಲ. ಕಾಮಗಾರಿ ಮುಗಿಸಿ ಅಪ್ರೂವ್‌ ಮಾಡದೆ ಅಧಿ ಕಾರಿಗಳು ನಿರ್ಲಕ್ಷé ಮಾಡಿದ್ದರಿಂದ ಸಮಸ್ಯೆಯಾಗಿದೆ. ಶಾಸಕರು ಅಧಿ  ಕಾರಿಗಳನ್ನು ಎಚ್ಚರಿಸುವ ಕೆಲಸ ಮಾಡಬೇಕು. ಸರ್ಕಾರ ನೀಡಿರುವ ಅನುದಾನ ಖರ್ಚಾಗದಿದ್ದರೆ ಸರ್ಕಾರ ಅನುದಾನವನ್ನು ವಾಪಾಸ್‌ ಪಡೆಯಲಿದೆ ಎಂದರು.

ಶಾಸಕಿ ಪೂರ್ಣಿಮಾ ಶ್ರೀನಿವಾಸ್‌ ಮಾತನಾಡಿ, ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನಕ್ಕೆ ಸಂಬಂಧಿ ಸಿದಂತೆ ನಿಯಮಾವಳಿಗಳನ್ನು ಸರಳೀಕರಣ ಮಾಡುವ ಅಗತ್ಯವಿದೆ. ಅನುದಾನ ಮಂಜೂರಾತಿಯಲ್ಲಿ ಸಾಕಷ್ಟು ವಿಳಂಬವಾಗುತ್ತಿದೆ. ಸ್ಥಳೀಯ ಶಾಸಕರ ಅನುದಾನದಲ್ಲಿ ನಿರ್ಮಾಣವಾಗುವ ಕೆಲಸಗಳು ಶೀಘ್ರದಲ್ಲಿ ಪ್ರಾರಂಭ ವಾಗಬೇಕು. ಆದರೆ ಅನುದಾನ ಮಂಜೂರಾಗಲು ವಿವಿಧ ಇಲಾಖೆಗಳಲ್ಲಿ ತಿಂಗಳುಗಳ ಕಾಲ ವ್ಯಯವಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಕಾಮಗಾರಿಯಲ್ಲಿ ಲೋಪವಾದರೆ ಕ್ರಮ: ಅ ಧಿಕಾರಿಗಳು ಅನುದಾನ ಬಿಡುಗಡೆಯಲ್ಲಿ ಅಥವಾ ಕಾಮಗಾರಿಯಲ್ಲಿ ಲೋಪವೆಸಗಿದರೆ ಯಾವುದೇ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಅ ಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ಸಾಮಾನ್ಯವಾಗಿ ಯೋಜನಾ ಇಲಾಖೆ ಮುಖ್ಯಮಂತ್ರಿಗಳ ಬಳಿ ಇರುತ್ತಿತ್ತು. ಸಮಯದ ಅಭಾವದಿಂದ ಸರಿಯಾಗಿ ಎಲ್ಲವವನ್ನೂ ಗಮನಿಸಲು ಸಾಧ್ಯವಾಗುತ್ತಿರಲಿಲ್ಲ. ಮುಖ್ಯಮಂತ್ರಿಗಳು ಆ ಇಲಾಖೆಯನ್ನು ನನಗೆ ನೀಡಿ ಜವಾಬ್ದಾರಿ ವಹಿಸಿದ್ದಾರೆ.

ಹೀಗಾಗಿ ಸುಮ್ಮನೆ ಕೂರಲು ಸಾಧ್ಯವಿಲ್ಲ. ಪ್ರತಿ ಜಿಲ್ಲೆಗೆ ತೆರಳಿ ಪರಿಶೀಲನೆ ನಡೆಸುತ್ತೇನೆ. ಕೂಲಂಕುಷವಾಗಿ ಎಲ್ಲವನ್ನೂ ಗಮನಿಸಿ ಅನುದಾನ ಬಿಡುಗಡೆ ಹಾಗೂ ಅನುದಾನ ಬಳಕೆಯನ್ನು ಗಮನಿಸುತ್ತೇನೆ ಎಂದು ಸಚಿವ ಡಾ| ನಾರಾಯಣಗೌಡ ತಿಳಿಸಿದರು.

ಕೃಷಿಹೊಂಡ ಫಲಾನುಭವಿಗಳ ಮಾಹಿತಿ ನೀಡಿ: ಕೃಷಿಹೊಂಡಗಳನ್ನು ವೈಜ್ಞಾನಿಕವಾಗಿ ನಿರ್ಮಿಸಬೇಕು. ಕೃಷಿ ಹೊಂಡ ಫಲಾನುಭವಿಗಳ ಸಂಪೂರ್ಣ ಮಾಹಿತಿಯನ್ನು ಶಾಸಕರಿಗೆ ನೀಡಬೇಕು ಎಂದು ಸಚಿವರು ಸೂಚಿಸಿದರು. ಕೃಷಿಹೊಂಡ ತೆಗೆದು ಒಂದೇ ವರ್ಷದಲ್ಲೇ ಮುಚ್ಚುತ್ತಾರೆ. ಈ ಫಲಾನುಭವಿಗಳ ಆಯ್ಕೆಯಲ್ಲಿ ಅಕ್ರಮ ನಡೆಯುತ್ತದೆ. ಹಾಗಾಗಿ ಶಾಸಕರ ಗಮನಕ್ಕೆ ತರದೆ ಫಲಾನುಭವಿಗಳ ಆಯ್ಕೆ ಆಗಬಾರದು ಎಂದು ಜಂಟಿ ಕೃಷಿ ನಿರ್ದೇಶಕರಿಗೆ ತಿಳಿಸಿದರು.

ಜಿಲ್ಲೆಯಲ್ಲಿ ಕಳೆದ ಐದು ವರ್ಷದಲ್ಲಿ ನಿರ್ಮಾಣಗೊಂಡ ಕೃಷಿಹೊಂಡಗಳ ಸಂಪೂರ್ಣ ಮಾಹಿತಿ ಪಡೆದು, ಶಾಸಕರು ಸ್ಥಳ ಪರಿಶೀಲನೆ ಮಾಡಿ ಪರಿಶೀಲಿಸಬೇಕೆಂದರು. ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಜಯಲಕ್ಷ್ಮೀಬಾಯಿ ಮಾತನಾಡಿ, ಜಿಲ್ಲಾ ಪಂಚಾಯಿತಿ ಅನುದಾನದಲ್ಲಿ ಕಳೆದ ವರ್ಷ 2.72 ಕೋಟಿ ರೂ. ಅನುದಾನ ಬಿಡುಗಡೆಯಾಗಿತ್ತು. ಈ ಅನುದಾನವನ್ನು 10 ಯೋಜನೆಗಳಿಗೆ ಬಳಸಿದ್ದು, ಶೇ. 99 ಅನುದಾನ ಖರ್ಚಾಗಿದೆ.

ಉಳಿದ ಅನುದಾನದಲ್ಲಿ ಗ್ರಾಮೀಣ ಕ್ರೀಡಾಕೂಟ ಹಾಗೂ 150 ಮಕ್ಕಳಿಗೆ ವಿವಿ ಸಾಗರದಲ್ಲಿ ಜಲಸಾಹಸ ಶಿಬಿರ ಆಯೋಜಿಸಲಾಗಿದೆ. ಪ್ರಸಕ್ತ ವರ್ಷ 1.92 ಕೋಟಿ ರೂ. ಕ್ರಿಯಾ ಯೋಜನೆ ರೂಪಿಸಿದ್ದು, ಅನುಮೋದನೆಯ ಹಂತದಲ್ಲಿದೆ ಎಂದು ತಿಳಿಸಿದರು.

ಜಿಲ್ಲಾ ಕ್ರೀಡಾಂಗಣದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು 6 ಕೋಟಿ ರೂ. ಅನುದಾನದ ಅಗತ್ಯವಿದೆ ಎಂದು ಸಚಿವರ ಗಮನಕ್ಕೆ ತಂದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಜಿಲ್ಲೆಯಲ್ಲಿ ಕ್ರೀಡಾಂಗಣಗಳ ಅಭಿವೃದ್ಧಿಗೆ ಜಿಲ್ಲಾ ಖನಿಜ ಪ್ರತಿಷ್ಠಾನದ ನಿ ಧಿ (ಡಿಎಂಎಫ್‌) ಬಳಸುವಂತೆ ಸೂಚಿಸಿದರು. ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ಕಾರ್ಯದರ್ಶಿ ಬಸವರಾಜಪ್ಪ ವಿವಿಧ ಕಾಮಗಾರಿಗಳ ಮಾಹಿತಿ ನೀಡಿದರು.

ಸಭೆಯಲ್ಲಿ ಶಾಸಕ ಟಿ. ರಘುಮೂರ್ತಿ, ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಜೀವನ್‌ ಮೂರ್ತಿ, ಜಿಪಂ ಸಿಇಒ ಡಾ| ಕೆ. ನಂದಿನಿದೇವಿ, ಅಪರ ಜಿಲ್ಲಾಧಿ ಕಾರಿ ಇ. ಬಾಲಕೃಷ್ಣ, ಉಪವಿಭಾಗಾ  ಧಿಕಾರಿ ಚಂದ್ರಯ್ಯ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.