ಲಸಿಕೆಯಿಂದ ಕೊರೊನಾ ಸೋಂಕಿನ ಅಪಾಯ ಕಡಿಮೆ
Team Udayavani, Jul 9, 2021, 10:18 PM IST
ಚಿತ್ರದುರ್ಗ: ಲಸಿಕೆ ಹಾಕಿಸಿಕೊಳ್ಳುವುದರಿಂದ ಸೋಂಕಿನ ಅಪಾಯ ಕಡಿಮೆ. ಇದರಿಂದ ಮೂರನೇ ಅಲೆಯ ಮೂಲಕ ಸೋಂಕು ತಗುಲುವುದನ್ನು ಶೇ.99ರಷ್ಟು ತಡೆಯಬಹುದು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ| ಆರ್. ರಂಗನಾಥ್ ಹೇಳಿದರು.
ನಗರದ ಎಸ್.ಜೆ.ಎಂ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಗುರುವಾರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಉಚಿತ ಕೋವಿಡ್ ಲಸಿಕೆ ವಿತರಣಾ ಅಭಿಯಾನ ಉದ್ಘಾಟಿಸಿ ಅವರು ಮಾತನಾಡಿದರು. ನಾವು ಮುನ್ನೆಚ್ಚರಿಕೆ ಕ್ರಮ ವಹಿಸುವುದು ಮುಖ್ಯ. ಎಲ್ಲ ವ್ಯಾಕ್ಸಿನ್ ಕೂಡ ಸುರಕ್ಷಿತವೇ ಆಗಿರುತ್ತವೆ. ಯಾರೂ ಸಹ ಹಿಂಜರಿಕೆ ಮಾಡುವುದು ಬೇಡ. ಪ್ರತಿಯೊಬ್ಬರೂ ಲಸಿಕೆ ಹಾಕಿಸಿಕೊಳ್ಳಬೇಕು. ಕೋವಿಡ್-19 ಹೇಗೆ ಬಂತು, ಅದರ ಅಪಾಯ ಏನು ಎಂಬುದು ನಮಗೆ ಗೊತ್ತಿರುವ ವಿಚಾರ. ಕಳೆದ ಒಂದೂವರೆ ವರ್ಷದಿಂದ ನಮ್ಮ ಜೊತೆಗಿದೆ. ಇನ್ನೂ ಎರಡು ವರ್ಷ ನಮ್ಮ ಜೊತೆ ಇರುತ್ತದೆ ಎಂದರು.
ಲಾಕ್ಡೌನ್ ತೆರವುಗೊಳಿಸಿದ್ದರೂ ಕೋವಿಡ್ ಇನ್ನೂ ಹೋಗಿಲ್ಲ. ಈ ಸಂದರ್ಭದಲ್ಲಿ ಎಚ್ಚರ ಮುಖ್ಯ. ಕೊರೊನಾ ನಮಗೆ ದೊಡ್ಡ ಪಾಠ ಕಲಿಸಿದೆ. ಈ ಮೊದಲು ಅನೇಕ ರೋಗಗಳಿದ್ದವು. ಎಚ್ಐವಿ, ಡೆಂಘೀ, ಏಡ್ಸ್ ಈಗಲೂ ಇವೆ. ಆದರೆ ಎಚ್ಚರದಿಂದಿರಬೇಕು. ಸುರಕ್ಷಿತ ಸಮಾಜ ನಿರ್ಮಾಣವಾಗಬೇಕು ಎಂದು ತಿಳಿಸಿದರು.
ಬಸವೇಶ್ವರ ವೈದ್ಯಕೀಯ ಮಹಾವಿದ್ಯಾಲಯದ ಡೀನ್ ಡಾ| ಜಿ. ಪ್ರಶಾಂತ್ ಮಾತನಾಡಿ, ಪ್ರಪಂಚದಲ್ಲಿ ಅತಿ ದೊಡ್ಡ ಲಸಿಕಾ ಅಭಿಯಾನ ಇದಾಗಿದೆ. ನಮ್ಮ ದೇಶದ ಕೋವಿನ್ ಆ್ಯಪ್ ಪ್ರಪಂಚದಲ್ಲಿ ಹೆಚ್ಚು ಮನ್ನಣೆ ಪಡೆದಿದೆ. ಇದು ಅನೇಕ ರೀತಿಯಲ್ಲಿ ಜಾಗೃತಿ ಮೂಡಿಸಿದೆ. ವೈರಸ್ ಬರುವುದನ್ನು ತಡೆಗಟ್ಟಲು ಲಸಿಕೆ ಹಾಕಿಸಿಕೊಳ್ಳಬೇಕು. ಪ್ರಪಂಚದಲ್ಲಿಯೇ ಅತಿ ಹೆಚ್ಚು ಲಸಿಕೆ ಅಭಿಯಾನ ಆರಂಭಿಸಿದ್ದು ಭಾರತ ಎಂದು ಹೇಳಲು ಹೆಮ್ಮೆ ಅನ್ನಿಸುತ್ತದೆ ಎಂದರು.
ಈಗ ವೈರಸ್ ರೂಪಾಂತರಗೊಂಡಿದ್ದು, ಡೆಲ್ಟಾ ಪ್ಲಸ್ ಬರುತ್ತಿದೆ. ಇದನ್ನು ತಡೆಗಟ್ಟಲು ಲಸಿಕೆ ಬಹಳ ಮುಖ್ಯ. ಗರ್ಭಿಣಿಯರಿಗೆ, ಚಿಕ್ಕ ಮಕ್ಕಳಿಗೆ ಲಸಿಕೆ ಮುಂದಿನ ದಿನಗಳಲ್ಲಿ ಬರುತ್ತದೆ. ವಿದ್ಯಾರ್ಥಿಗಳು ಲಸಿಕೆ ಹಾಕಿಸಿಕೊಂಡರೆ ನಿಮ್ಮನ್ನು ರಕ್ಷಣೆ ಮಾಡಿಕೊಳ್ಳುವುದರ ಜತೆಗೆ ಇತರರಿಗೆ ಹರಡುವುದನ್ನು ತಡೆಯಬಹುದು. ಲಸಿಕೆಯಿಂದ ಲಸಿಕೆಗೆ ಅಂತರವನ್ನು ಹೆಚ್ಚಿಸಬೇಕು. ಅನ್ಲಾಕ್ ಇದೆ ಎಂದು ಅನಗತ್ಯವಾಗಿ ಹೊರಗೆ ಓಡಾಡಬಾರದು. ಸಾಮಾಜಿಕ ಅಂತರ, ಮಾಸ್ಕ್, ಸ್ಯಾನಿಟೆ„ಸರ್ ಬಳಕೆ ಮರೆಯಬಾರದು ಎಂದು ಕಿವಿಮಾತು ಹೇಳಿದರು.
ಎಸ್.ಜೆ.ಎಂ ದಂತ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ| ಗೌರಮ್ಮ ಮಾತನಾಡಿ, ಮೂರನೇ ಅಲೆ ತುಂಬಾ ಅಪಾಯಕಾರಿಯಾಗಿದೆ. ಹಾಗಾಗಿ ಲಸಿಕೆ ಹಾಕಿಸಿಕೊಳ್ಳುವುದು ಬಹಳ ಮುಖ್ಯ. ಲಸಿಕೆಯಿಂದ ಯಾವುದೇ ಅಡ್ಡ ಪರಿಣಾಮ ಇಲ್ಲ. ಯಾವುದೇ ಲಸಿಕೆ ಕಂಡುಹಿಡಿಯಲು ಹತ್ತಾರು ವರ್ಷ ಬೇಕಾಗುತ್ತದೆ. ಆದರೆ ಕೋವಿಡ್ ಲಸಿಕೆ ಅತಿಬೇಗನೆ ಕಂಡುಹಿಡಿದದ್ದು ಸಂತಸದ ವಿಚಾರ ಎಂದರು.
ಡಾ| ಈಶ್ವರಪ್ಪ ಮಾತನಾಡಿ, ಮಾರಣಾಂತಿಕ ರೋಗವಾದ ಕೋವಿಡ್ ವಿರುದ್ಧ ವೈದ್ಯರು ಪ್ರಾಣದ ಹಂಗು ತೊರೆದು ಜೀವ ಉಳಿಸುವ ಕಾರ್ಯ ಮಾಡಿದ್ದಾರೆ. ನಾವು ವೈದ್ಯರಿಗೆ ಅಭಿನಂದನೆಗಳನ್ನು ಸಲ್ಲಿಸಬೇಕು ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು
Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ
MUST WATCH
ಹೊಸ ಸೇರ್ಪಡೆ
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ