ಬಿಂದುಮಾಧವರಲ್ಲಿತ್ತು ಸಮತ್ವ ಮನೋಭಾವ

„ಅಧ್ಯಾತ್ಮ ಲೋಕದ ವಿಸ್ಮಯವನ್ನು ತರ್ಕದ ಮೂಲಕ ವಿಮರ್ಶೆ ಮಾಡಲಾಗದು: ಡಾ| ಲೋಕೇಶ್‌ ಅಗಸನಕಟ್ಟೆ

Team Udayavani, Jul 27, 2021, 6:18 PM IST

27-12

ಚಿತ್ರದುರ್ಗ: ಎಲ್ಲವನ್ನೂ ಪರರಿಗಾಗಿ ತ್ಯಾಗ ಮಾಡಿದ, ಸರ್ವಸಂಗ ಪರತ್ಯಾಗಿ ಬೆಲಗೂರು ಬಿಂದು ಮಾಧವ ಶರ್ಮಾ ಗುರುಗಳು ಎಂದು ಹಿರಿಯ ಸಾಹಿತಿ ಡಾ| ಲೋಕೇಶ್‌ ಅಗಸನಕಟ್ಟೆ ಅಭಿಪ್ರಾಯಪಟ್ಟರು. ಅಖೀಲ ಭಾರತೀಯ ಸಾಹಿತ್ಯ ಪರಿಷತ್ತಿನ ಚಿತ್ರದುರ್ಗ ಜಿಲ್ಲಾ ಘಟಕದಿಂದ ಭಾನುವಾರ ರಾತ್ರಿ ಆನ್‌ಲೈನ್‌ ಮೂಲಕ ಆಯೋಜಿಸಿದ್ದ ಅವಧೂತ ಪರಂಪರೆ-ಸರಣಿ ಉಪನ್ಯಾಸ ಮಾಲಿಕೆಯ ಎರಡನೇ ಕಂತಿನ ಕಾರ್ಯಕ್ರಮದಲ್ಲಿ ಅವರು ಉಪನ್ಯಾಸ ನೀಡಿದರು.

ಮನುಷ್ಯನ ಆತ್ಮವಿಕಾಸದ ಹಾದಿಯಲ್ಲಿ ಸಿದ್ದ ಪರಂಪರೆ, ನಾಥ ಪರಂಪರೆ, ಅವಧೂತ ಪರಂಪರೆಗಳು ಹೇಗೆ ಕೆಲಸ ಮಾಡಿವೆ ಎನ್ನುವುದನ್ನು ಒಳ ಹೊಕ್ಕು ನೋಡಿದಾಗ ಮಾತ್ರ ಗೊತ್ತಾಗುತ್ತದೆ. ಹೊರಗಿನಿಂದ ನೋಡಿದಾಗ ಇದೊಂದು ವಿಲಕ್ಷಣ ಜಗತ್ತು ಅನ್ನಿಸುತ್ತದೆ. ಹೀಗೆ ಭಾವಿಸುವವರ ಅಜ್ಞಾನದ ಬಗ್ಗೆ ಮರುಕವಿದೆ. ಸಿದ್ಧ, ಸಾಧಕರು, ಅವಧೂತರ ನೆಲೆ ಚಿತ್ರದುರ್ಗ. ಹಿರಿಯ ಸಾಹಿತಿ ಕಣಜನಹಳ್ಳಿ ನಾಗರಾಜ್‌ ಜಿಲ್ಲೆಯ ಅವಧೂತರ ಬಗ್ಗೆ ಮೊದಲ ಬಾರಿಗೆ ಕೃತಿ ರಚಿಸಿದ್ದಾರೆ ಎಂದರು.

ಸಾಧನೆ ಮಾಡಲು ಹಿಮಾಲಯಕ್ಕೆ ಹೋಗಬೇಕಿಲ್ಲ. ಇಲ್ಲಿಯೇ ಇದ್ದು ಸಾಧನೆ ಮಾಡಬಹುದು ಎನ್ನುವ ನಿಲುವು ಬಿಂದುಮಾಧವರಲ್ಲಿತ್ತು. ಅಧ್ಯಾತ್ಮ ಲೋಕದ ವಿಸ್ಮಯಗಳನ್ನು ತರ್ಕದ ಮೂಲಕ ವಿಮರ್ಶೆ ಮಾಡಲು ಆಗುವುದಿಲ್ಲ. ಹಠಯೋಗಿಗಳು, ಅವಧೂತರಿಗೆ ದೂರದರ್ಶಿತ್ವ ಇರುತ್ತದೆ ಎನ್ನುವುದು ಬಿಂದುಮಾಧವರ ವಿಚಾರದಲ್ಲಿ ನನಗೆ ಅನುಭವಕ್ಕೆ ಬಂದಿದೆ ಎಂದರು. ಯೋಗ, ಧ್ಯಾನದ ಮೂಲಕ ನಮ್ಮೊಳಗಿರುವ ನಾನು ಎಂಬ ಅಹಂಕಾರ ತೊರೆದು, ನಾನು ಎಲ್ಲರಿಗಾಗಿ ಇದ್ದೇನೆ ಎನ್ನುವ ವಿಶ್ವಪ್ರಜ್ಞೆ ಉಳ್ಳವರು ಅಷ್ಟ ಶಕ್ತಿಗಳನ್ನು ಪಡೆದುಕೊಳ್ಳಲು ಸಾಧ್ಯವಿದೆ. ಬಿಂದುಮಾಧವ ಗುರುಗಳು ಸಾಕಷ್ಟು ಸಾಧನೆಗಳನ್ನು ಮಾಡುತ್ತಿದ್ದರೂ ಸಾಮಾನ್ಯ ಜೀವನ ನಡೆಸುತ್ತಿದ್ದರು. ಬೆಳಗ್ಗೆ ಎದ್ದು ಬೈಕಿನಲ್ಲಿ ತೋಟಕ್ಕೆ ಹೋಗಿ ಹಾಲು ತರುತ್ತಿದ್ದರು.

ಭಕ್ತರ ಜೊತೆ ಮಾತನಾಡುತ್ತಿದ್ದರು. ಬೆಲಗೂರಿಗೆ ಬರುವ ಭಕ್ತರಿಗೆ ಸಂತೃಪ್ತಿಯಾಗುವಷ್ಟು ಊಟ ಬಡಿಸುವುದು ಅವರಿಗೆ ಪ್ರೀತಿಯ ಕೆಲಸವಾಗಿತ್ತು. ಭಕ್ತರ ಸಂಕಟವನ್ನು ತಮ್ಮದು ಎಂದು ಭಾವಿಸಿದವರು ಎಂದು ಸ್ಮರಿಸಿದರು. ಅವಧೂತರ ಪವಾಡಗಳು ಲೌಕಿಕದ ಜನರಿಗೆ ಕಾಗಕ್ಕ, ಗುಬ್ಬಕ್ಕನ ಕಥೆಗಳಂತೆ ಕಾಣಿಸುತ್ತವೆ. ಅಷ್ಟ ಸಿದ್ಧಿ ಪಡೆದುಕೊಂಡಿದ್ದ ಗುರುಗಳು ಆಂಜನೇಯನನ್ನು ಒಲಿಸಿಕೊಂಡಿದ್ದರು. ಹನುಮನೇ ನಿಜವಾದ ಮೊತ್ತ ಮೊದಲ ಅವಧೂತ ಎನ್ನಬಹುದು ಎಂದು ಅಗಸನಕಟ್ಟೆ ಹೇಳಿದರು.

ನಮ್ಮ ಪೂರ್ವಾಗ್ರಹದ ಕಾರಣಕ್ಕೆ ಅವರ ಒಡನಾಟ ಸಿಗಲು ತಡವಾಯಿತು. ಒಂದಿಷ್ಟು ವರ್ಷ ಮೊದಲು ಅವರ ಸಂಪರ್ಕ ಸಿಕ್ಕಿದ್ದರೆ ಇನ್ನೂ ಒಂದಿಷ್ಟು ಕೃತಿಗಳನ್ನು ರಚನೆ ಮಾಡಬಹುದಿತ್ತು. ಸಮತ್ವದ ಮನೋಭಾವ ಬಿಂದುಮಾಧವರಲ್ಲಿತ್ತು. ಅವರು ಬೋಧಕರಲ್ಲ, ಸಾಧಕರು. ಬಾಳಿ ತೋರಿಸಿದವರು ಎಂದು ತಿಳಿಸಿದರು.

ಅಭಾಸಾಪ ಜಿಲ್ಲಾಧ್ಯಕ್ಷ ಯೋಗೀಶ್‌ ಸಹ್ಯಾದ್ರಿ ಸ್ವಾಗತಿಸಿದರು. ಜಿಲ್ಲಾ ಕಾರ್ಯದರ್ಶಿ ಡಾ| ರವಿಕಿರಣ್‌ ನಿರ್ವಹಣೆ ಮಾಡಿದರು. ಉಪನ್ಯಾಸಕ ದೊಡ್ಡಯ್ಯ ಅತಿಥಿಗಳನ್ನು ಪರಿಚಯಿಸಿದರು. ಉಪನ್ಯಾಸಕ ಕೆಂಚವೀರಪ್ಪ ವಂದಿಸಿದರು. ಅಭಾಸಾಪ ಜಿಲ್ಲಾ ಗೌರವಾಧ್ಯಕ್ಷ ಕಣಜನಹಳ್ಳಿ ನಾಗರಾಜ್‌, ಶಿವಮೊಗ್ಗ ವಿಭಾಗ ಸಂಯೋಜಕ ಶ್ರೀಹರ್ಷ ಹೊಸಳ್ಳಿ, ಕೊಳಾಳು ಕೆಂಚಪ್ಪ ಮತ್ತಿತರರು ಭಾಗವಹಿಸಿದ್ದರು.

ಟಾಪ್ ನ್ಯೂಸ್

tdy-16

Fake Notes: ಜಾತ್ರೆಯಲ್ಲಿ ಐಸ್‌ಕ್ರೀಮ್‌ ಸವಿಯಲು ನಕಲಿ ನೋಟ್‌ಗಳನ್ನು ಬಳಸಿದ ಅಪ್ರಾಪ್ತರು

5-hunsur

HUNSUR: ಕೆಲ ದಿನಗಳಿಂದ ಕಣ್ಮರೆಯಾಗಿದ್ದ ಕಪ್ಪು ಚಿರತೆ ಪತ್ತೆ

Manipur: ಬಂಡುಕೋರರ ಗುಂಡಿನ ದಾಳಿ: ಬಿಎಸ್ಎಫ್ ಯೋಧ ಹುತಾತ್ಮ, ಇಬ್ಬರು ಯೋಧರಿಗೆ ಗಾಯ

Manipur: ಬಂಡುಕೋರರ ಗುಂಡಿನ ದಾಳಿ: ಓರ್ವ ಬಿಎಸ್ಎಫ್ ಯೋಧ ಹುತಾತ್ಮ, ಇಬ್ಬರು ಯೋಧರಿಗೆ ಗಾಯ

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಚಂಡಮಾರುತ: ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಚಂಡಮಾರುತ: ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ

4-mangaluru

Mangaluru: ನೈತಿಕ ಪೊಲೀಸ್ ಗಿರಿ ತಡೆಗೆ ಆ್ಯಂಟಿ ಕಮ್ಯುನಲ್‌ ವಿಂಗ್ ಆರಂಭಿಸಲು ಸೂಚನೆ

asia cup 2023

Hybrid Model ಒಪ್ಪದ ಎಸಿಸಿ: ಏಷ್ಯಾ ಕಪ್ ಆಡದಿರಲು ಪಾಕಿಸ್ತಾನ ಚಿಂತನೆ

ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಶಾಸಕರ ಜೊತೆ ಟೋಲ್ ಸಿಬ್ಬಂದಿ ಕಿರಿಕ್

ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಶಾಸಕರ ಜೊತೆ ಟೋಲ್ ಸಿಬ್ಬಂದಿ ಕಿರಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqewqe

Environment Day ಮುರುಘಾ ಮಠದ ಆಡಳಿತಾಧಿಕಾರಿ ವಿರುದ್ದ ಜನಾಕ್ರೋಶ

1-saddsaddadsadasd

BJP ತತ್ ಕ್ಷಣವೇ ಶಾಸಕ ಎಂ.ಚಂದ್ರಪ್ಪ ರನ್ನು ಉಚ್ಚಾಟಿಸಬೇಕು: ದಸಂಸ

narayanswamy

ಮತದಾರರನ್ನು ಭಿಕ್ಷುಕರ ಸಾಲಿನಲ್ಲಿ ನಿಲ್ಲಿಸಲು ಕಾಂಗ್ರೆಸ್ ಷಡ್ಯಂತ್ರ: ಎ.ನಾರಾಯಣಸ್ವಾಮಿ

b y vijayendra

Free Bus Pass ಕೊಡುವವರು ಮಹಿಳೆಯರ ರಕ್ಷಣೆ ಬಗ್ಗೆ ಯೋಚನೆ ಮಾಡುತ್ತಿಲ್ಲ: ವಿಜಯೇಂದ್ರ

eshwar khandre

ಸಿ.ಟಿ.ರವಿ‌ ದುರಹಂಕಾರಕ್ಕೆ‌ ಜನ ತಕ್ಕ ಪಾಠ ಕಲಿಸಿದ್ದಾರೆ: Minister Eshwar Khandre

MUST WATCH

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಹೊಸ ಸೇರ್ಪಡೆ

tiger attack in chikkamagaluru

ಚಿಕ್ಕಮಗಳೂರು: ಕಾಫಿತೋಟದ ಕಾರ್ಮಿಕ ಮಹಿಳೆ ಮೇಲೆ ಹುಲಿ ದಾಳಿ

tdy-16

Fake Notes: ಜಾತ್ರೆಯಲ್ಲಿ ಐಸ್‌ಕ್ರೀಮ್‌ ಸವಿಯಲು ನಕಲಿ ನೋಟ್‌ಗಳನ್ನು ಬಳಸಿದ ಅಪ್ರಾಪ್ತರು

5-hunsur

HUNSUR: ಕೆಲ ದಿನಗಳಿಂದ ಕಣ್ಮರೆಯಾಗಿದ್ದ ಕಪ್ಪು ಚಿರತೆ ಪತ್ತೆ

ಹಾರೋಹಳ್ಳಿ: ಬೋನಿಗೆ ಬಿದ್ದ ಹತ್ತು ವರ್ಷದ ಗಂಡು ಚಿರತೆ

ಹಾರೋಹಳ್ಳಿ: ಬೋನಿಗೆ ಬಿದ್ದ ಹತ್ತು ವರ್ಷದ ಗಂಡು ಚಿರತೆ

Manipur: ಬಂಡುಕೋರರ ಗುಂಡಿನ ದಾಳಿ: ಬಿಎಸ್ಎಫ್ ಯೋಧ ಹುತಾತ್ಮ, ಇಬ್ಬರು ಯೋಧರಿಗೆ ಗಾಯ

Manipur: ಬಂಡುಕೋರರ ಗುಂಡಿನ ದಾಳಿ: ಓರ್ವ ಬಿಎಸ್ಎಫ್ ಯೋಧ ಹುತಾತ್ಮ, ಇಬ್ಬರು ಯೋಧರಿಗೆ ಗಾಯ