ಎಸ್‌ಟಿ ಮೀಸಲು ವಿಚಾರ ಅಧಿವೇಶನದಲ್ಲಿ ಪ್ರಸ್ತಾಪ

ಕಬೀರಾನಂದ ಸಮುದಾಯದ ಭವನದಲ್ಲಿ ನಡೆದ ಜಾಗೃತಿ ಸಭೆಯಲ್ಲಿ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ, ಶ್ರೀ ಈಶ್ವರಾನಂದಪುರಿ ಸ್ವಾಮೀಜಿ, ಜೆಡಿಎಸ್‌ ನಾಯಕ ಬಂಡೆಪ್ಪ ಕಾಶೆಂಪೂರ ಪಾಲ್ಗೊಂಡಿದ್ದರು.

Team Udayavani, Jan 25, 2021, 3:26 PM IST

25–4

ಚಿತ್ರದುರ್ಗ: ಹಾಲುಮತ ಕುರುಬ ಸಮುದಾಯದ ಪರಿಶಿಷ್ಟ ಪಂಗಡ (ಎಸ್‌ಟಿ) ಮೀಸಲಾತಿ ಹೋರಾಟದ ಹತ್ತನೇ ದಿನದ ಪಾದಯಾತ್ರೆ ಭಾನುವಾರ ಚಿತ್ರದುರ್ಗದಿಂದ ಮುಂದೆ ಸಾಗಿತು.

ಮೈಲಾರಲಿಂಗೇಶ್ವರ ಸ್ವಾಮಿ, ಬೀರಲಿಂಗೇಶ್ವರ ಸ್ವಾಮಿಗಳ ಸ್ಮರಣೆ, ಡಮರುಘದ ಸದ್ದಿನೊಂದಿಗೆ ನಗರದ ಕಬೀರಾನಂದ ಸಮುದಾಯ ಭವನದಿಂದ ಭಾನುವಾರ ಬೆಳಗಿನ ಜಾವ ಸುಮಾರು 5:30ಕ್ಕೆ ಪಾದಯಾತ್ರೆ ಆರಂಭವಾಯಿತು. ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ, ಹೊಸದುರ್ಗ ಶಾಖಾಮಠದ ಶ್ರೀ ಈಶ್ವರಾನಂದಪುರಿ ಸ್ವಾಮೀಜಿಯವರೊಂದಿಗೆ ವಿಧಾನ ಪರಿಷತ್‌ ಸದಸ್ಯ ಎಚ್‌.ವಿಶ್ವನಾಥ್‌, ಎಚ್‌.ಎಂ. ರೇವಣ್ಣ ಸೇರಿದಂತೆ ಮತ್ತಿತರ ಪ್ರಮುಖರು ಸಾಥ್‌ ನೀಡಿದರು.

ಓದಿ: ಕನ್ನಡ ಸಾಹಿತ್ಯದ ಕಲ್ಯಾಣ ಅಗತ್ಯ: ವೀರಭದ್ರಪ್ಪ

ಪಾದಯಾತ್ರೆ ತಾಲೂಕಿನ ಕ್ಯಾದಿಗೆರೆ ತಲುಪುತ್ತಿದ್ದಂತೆ ಸುತ್ತಮುತ್ತಲಿನ ಹತ್ತಾರು ಗ್ರಾಮಗಳ ಸಮುದಾಯದವರು ಅದ್ಧೂರಿ ಸ್ವಾಗತ
ಕೋರಿದರು.

ಮಹಿಳೆಯರು ಶ್ರೀಗಳಿಗೆ ಕಳಶ, ಆರತಿ ಬೆಳಗುವ ಮೂಲಕ ಭಕ್ತಿ ಸಮರ್ಪಿಸಿದರು. ಉಪಹಾರ ಸೇವಿಸಿದ ನಂತರ ಗ್ರಾಮದಲ್ಲಿ ಜಾಗೃತಿ ಸಭೆ ನಡೆಯಿತು. ಮುಂದುವರಿದ ಪಾದಯಾತ್ರೆ ಹಿರಿಯೂರು ತಾಲೂಕಿನ ಐಮಂಗಲ ಹೊರವಲಯದ ಶಾಲಾ ಆವರಣದಲ್ಲಿ ವಾಸ್ತವ್ಯ ಮಾಡಿತು. ರಜಾ ದಿನವಾದ್ದರಿಂದ ಭಾನುವಾರ ಚಿತ್ರದುರ್ಗ, ಹಾವೇರಿ, ದಾವಣಗೆರೆ, ತುಮಕೂರು, ಬಳ್ಳಾರಿ, ಕೊಪ್ಪಳ, ಬೆಂಗಳೂರು, ಸೇರಿದಂತೆ ರಾಜ್ಯದ
ಮತ್ತಿತರ ಭಾಗಗಳ ಸಾವಿರಾರು ಮಂದಿ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದರು.

ಜೈ ಕುರುಬ, ಜೈ ಕನಕ, ಜೈ ರಾಯಣ್ಣ, ಎಸ್‌ಟಿ ಹೋರಾಟಕ್ಕೆ ಜಯವಾಗಲಿ ಎಂಬ ಘೋಷಣೆ ಮೊಳಗಿಸುತ್ತಾ ಪಾದಯಾತ್ರೆಯಲ್ಲಿ ಸಾಗಿದರು.
ಶನಿವಾರ ರಾತ್ರಿ ಚಿತ್ರದುರ್ಗದಲ್ಲಿ ನಡೆದ ಸಭೆಯಲ್ಲಿ ಜೆಡಿಎಸ್‌ ನಾಯಕ ಬಂಡೆಪ್ಪ ಕಾಶೆಂಪೂರ ಮಾತನಾಡಿ, ಹಾಲುಮತ ಕುರುಬ  ಸಮುದಾಯದ ಎಸ್‌ಟಿ ಹೋರಾಟದ ಕೂಗು ಜ.28 ರಿಂದ ಆರಂಭವಾಗುವ ವಿಧಾನಮಂಡಲದ ಅಧಿವೇಶನಲ್ಲಿ ಮೊಳಗಲಿದೆ.ಸಮುದಾಯದ ಎಲ್ಲ ನಾಯಕರು ಪಕ್ಷಭೇದ ಮರೆತು ಸರಕಾರದ ಗಮನ ಸೆಳೆಯುತ್ತೇವೆ. ಮುಖ್ಯಮಂತ್ರಿಗಳ ಮೇಲೆ ಒತ್ತಡ ಹೇರುತ್ತೇವೆ ಎಂದು ತಿಳಿಸಿದರು.

ಪಾದಯಾತ್ರೆ ಬೆಂಗಳೂರು ತಲುಪುವ ಮೊದಲೇ ಸರಕಾರದ ಗಮನ ಸೆಳೆಯುತ್ತೇವೆ. ಕುರುಬ ಸಮುದಾಯ ಎಸ್‌ಟಿ ಮೀಸಲಾತಿ ಕೇಳುತ್ತಿರುವುದು  ಮೊದಲಲ್ಲ. ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಕುರುಬರ ಒಳಪಂಗಡಗಳಿಗೆ ಈಗಾಗಲೇ ಎಸ್‌ಟಿ ಸವಲತ್ತು ಲಭಿಸಿದೆ. ಇದನ್ನು ರಾಜ್ಯದ ಎಲ್ಲ ಜಿಲ್ಲೆಗಳಿಗೂ ವಿಸ್ತರಿಸುವ ಅಗತ್ಯವಿದ್ದು ನಮ್ಮ ಹೋರಾಟ ತೀವ್ರಗೊಳಿಸಿದ್ದೇವೆ ಎಂದರು.

ಎಸ್‌ಟಿ ಮೀಸಲಾತಿ ಹೋರಾಟ ಸಮಿತಿ ಅಧ್ಯಕ್ಷ ವಿರೂಪಾಕ್ಷಪ್ಪ ಮಾತನಾಡಿ, ಕುರುಬ ಸಮುದಾಯದ ಹಿತಾಸಕ್ತಿಗಾಗಿ ಹೋರಾಟ ನಡೆಸಲಾಗುತ್ತಿದೆಯೇ ಹೊರತು ಯಾರ ವಿರುದ್ಧವೂ, ಪರವೂ ಅಲ್ಲ. ಪಾದಯಾತ್ರೆಯ ಮೇಲೆ ಯಾವುದೇ ರಾಜಕೀಯ ಪಕ್ಷ ಪ್ರಭಾವ ಬೀರಿಲ್ಲ ಎಂದು ಸ್ಪಷ್ಟಪಡಿಸಿದರು.

ಓದಿ: 48 ಎಂಪಿ ಎಐ ಟ್ರಿಪಲ್ ಕ್ಯಾಮೆರಾದೊಂದಿಗೆ ವೀವೊ ವೈ 31 ಮಾರುಕಟ್ಟೆಯಲ್ಲಿ ಲಭ್ಯ

ವಿಧಾನ ಪರಿಷತ್‌ ಸದಸ್ಯ ಎಚ್‌. ವಿಶ್ವನಾಥ್‌, ಮಾಜಿ ಸಚಿವ ಎಚ್‌.ಎಂ. ರೇವಣ್ಣ, ಮೀಸಲಾತಿ ಹೋರಾಟ ಸಮಿತಿಯ ಜೀವೇಶ್ವರಿ, ಬಿ.ಟಿ. ಜಗದೀಶ್‌, ಸಿದ್ದರಾಮಪ್ಪ, ರಜನಿ ಲೇಪಾಕ್ಷ, ಕುರುಬರ ಸಂಘದ ಜಿಲ್ಲಾಧ್ಯಕ್ಷ ಶ್ರೀರಾಮ್‌, ಮಹಿಳಾ ಜಿಲ್ಲಾಧ್ಯಕ್ಷೆ ಪಿ.ಕೆ. ಮೀನಾಕ್ಷಿ, ಟಿ. ತಿಪ್ಪಮ್ಮ, ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.