ಸಮ ಸಮಾಜಕ್ಕೆ ಶಿಕ್ಷಣ ಅಗತ್ಯ

ಶಿಕ್ಷಣ ಜಾಗೃತಿ ಮೂಡಿಸಿದ ಮಂಜರಿ ಹನುಮಂತಪ್ಪ ಸಾಧನೆ ಅಮರ

Team Udayavani, Jan 25, 2021, 3:46 PM IST

25-7

ಚಿತ್ರದುರ್ಗ: ಸಮ ಸಮಾಜ ನಿರ್ಮಾಣದ ಮೊದಲ ಹೆಜ್ಜೆಯೇ ಶಿಕ್ಷಣ ಎಂದು ಹೊಸದುರ್ಗ ಕುಂಚಿಟಿಗ ಮಹಾಸಂಸ್ಥಾನದ ಡಾ| ಶಾಂತವೀರ ಸ್ವಾಮೀಜಿ ಹೇಳಿದರು.

ನಗರದ ಹೊರವಲದ ಸಿದ್ಧರಾಮೇಶ್ವರ ಮಹಾಸಂಸ್ಥಾನ, ಭೋವಿ ಗುರುಪೀಠದಲ್ಲಿ ಹಮ್ಮಿಕೊಂಡಿದ್ದ ಮಂಜರಿ ಹನುಮಂತಪ್ಪ ಸ್ಮರಣೋತ್ಸವದಲ್ಲಿ ಶ್ರೀಗಳು ಮಾತನಾಡಿದರು.
ಶಿಕ್ಷಣದಿಂದ ಯಾರನ್ನೂ ವಂಚಿತರನ್ನಾಗಿ ಮಾಡಬಾರದು. ಭೋವಿ ಸಮಾಜದಲ್ಲಿ ಜಾಗೃತಿ ಮೂಡಿಸಿ ಸಾಮಾಜಿಕ, ಆರ್ಥಿಕ ಸ್ಥಿತಿಗತಿ ಸುಧಾರಣೆ, ಮತ್ತು ರಾಜಕೀಯ ಸ್ವಾತಂತ್ರ್ಯ ಅಭಿಲಾಷೆಯಿಂದ ಹನುಮಂತಪ್ಪ ವಿದ್ಯಾಸಂಸ್ಥೆಗಳನ್ನು
ಸ್ಥಾಪಿಸಿದರು ಎಂದರು.
ಶಿಕ್ಷಣ ಪಡೆದು ಹೋರಾಟ ನಡೆಸುವ ಸಮುದಾಯಗಳು ಫಲಶೃತಿಯನ್ನು ಕಾಣುತ್ತವೆ. ಶಿಕ್ಷಣದಿಂದ ಪ್ರಜ್ಞಾವಂತ ಭೋವಿ ಸಮಾಜ ನಿರ್ಮಿಸಿದ
ಶ್ರೇಯಸ್ಸು ಮಂಜರಿ ಹನುಮಂತಪ್ಪನವರಿಗೆ ಸಲ್ಲುತ್ತದೆ. ಭೋವಿ ವಿದ್ಯಾರ್ಥಿನಿಲಯದಲ್ಲಿ ವಿದ್ಯಾಭ್ಯಾಸ ಮಾಡಿದ ಹಳೆಯ ವಿದ್ಯಾರ್ಥಿಗಳು ಒಂದೊಂದು ಕೊಠಡಿಯನ್ನು ಕಟ್ಟಿಸುವ ಮೂಲಕ ಇಮ್ಮಡಿ ದ್ಧರಾಮೇಶ್ವರ ಸ್ವಾಮೀಜಿಯವರಿಗೆ ಸಹಕಾರ ನೀಡಿ. ಈ ಮೂಲಕ ಮಂಜರಿ ಹನುಮಂತಪ್ಪ ಅವರ ಋಣ ತೀರಿಸುವ ಪ್ರಯತ್ನ ಮಾಡಬೇಕು ಎಂದು ಕರೆ
ನೀಡಿದರು.

ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಮಾತನಾಡಿ, ಶಿಕ್ಷಣದ ಮೂಲಕ ಭೋವಿ ಕುಟುಂಬಗಳಲ್ಲಿ ನಂದಾದೀಪ
ಬೆಳಗಿದವರು. ಶಿಕ್ಷಣದ ಮಹತ್ವವನ್ನು ಮಂಜರಿ ಹನುಮಂತಪ್ಪರವರು ಅರಿತಿದ್ದರಿಂದ 60-70ರ ದಶಕದಲ್ಲಿ ಗ್ರಾಮ, ಕಾಲೋನಿ, ಹಟ್ಟಿ, ಹಳ್ಳಿ,
ಹಳ್ಳಿಯಲ್ಲಿ ಸುತ್ತಾಡಿ ವಿದ್ಯಾರ್ಥಿಗಳನ್ನು ಪತ್ತೆ ಹಚ್ಚಿ, ಹಾಸ್ಟೆಲ್‌ ಸೌಲಭ್ಯವನ್ನು ಭೋವಿ ವಿದ್ಯಾರ್ಥಿಗಳಿಗೆ ದಕ್ಕಿಸಿಕೊಡಲು ಶ್ರಮಿಸಿದ್ದಾರೆ. ಭೋವಿ ಸಮಾಜಕ್ಕೆ ಶಿಕ್ಷಣವೇ ಆಸ್ತಿ, ಶಕ್ತಿ ಎಂಬ ಮುಂದಾಲೋಚನೆಯಿಂದ ಸಮಾಜಕ್ಕೆ ಭದ್ರ ಅಡಿಪಾಯ ಹಾಕಿದರು. ಅವರ
ಜ್ಞಾನ ದಾಸೋಹದಿಂದ ಅನೇಕ ಕುಟುಂಬಗಳಲ್ಲಿ ನಂದಾದೀಪ ಹಚ್ಚಿದ್ದಾರೆ.

ಇಂದಿರಾ ಗಾಂಧಿ  ಕಾಲದಲ್ಲಿ ಪರಿಶಿಷ್ಟ ಜಾತಿ ಪಟ್ಟಿಯನ್ನು ತೆಗೆದು ಹಾಕಬೇಕೆಂಬ ಹುನ್ನಾರ ನಡೆದಿತ್ತು. ಆಗ ದೆಹಲಿ ಮಟ್ಟಕ್ಕೆ ಹೋಗಿ ಭೋವಿಗಳನ್ನು ರಕ್ಷಣೆ ಮಾಡಿದರು. ಭೋವಿ ಸಮಾಜದ ಮೊದಲ ರಾಜ್ಯ ಸಂಘದ ಸ್ಥಾಪಕರಾಗಿದ್ದ
ಅವರು ಭೋವಿ ರತ್ನ ಎಂದು ಬಣ್ಣಿಸಿದರು.

ಜಿಲ್ಲಾ ಭೋವಿ ಸಂಘದ ಅಧ್ಯಕ್ಷ ತಿಪ್ಪೇಸ್ವಾಮಿ, ಕಾರ್ಯದರ್ಶಿ ಲಕ್ಷ್ಮಣ, ತಾಲೂಕು ಅಧ್ಯಕ್ಷರಾದ ಡಿ.ಸಿ. ಮೋಹನ, ಕೃಷ್ಣಪ್ಪ, ಖಜಾಂಚಿ ಮಂಜುನಾಥ, ಉತ್ತರಕನ್ನಡ ಜಿಲ್ಲೆ ಅಧ್ಯಕ್ಷ ಶಿವಾಜಿ ಬಂಡಿವಡ್ಡರ್‌, ತಿಮ್ಮಣ್ಣ, ವಿದ್ಯಾಸಂಸ್ಥೆಯ ಕಾರ್ಯದರ್ಶಿ ಗೌನಹಳ್ಳಿ ಗೋವಿಂದಪ್ಪ, ಪ್ರಾಚಾರ್ಯ ಭೀಮ ಭೋವಿ, ಬಾಗಲಕೋಟೆಯ ಯಲ್ಲಪ್ಪ ಕೆರೂರು, ಸಿಂಧನೂರು ವಕೀಲ ಶರಣಬಸವ, ಬೆಂಗಳೂರಿನ ಮಹಾಂತೇಶ,
ಎನ್‌.ಪಿ. ವೀರೇಶ್‌ ಮತ್ತಿತರರು ಇದ್ದರು.

ಓದಿ:  ರೈತ ಮುಖಂಡರ ಹತ್ಯೆ ಸಂಚು ತನಿಖೆ ನಡೆಸಿ

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.