ಶಿಬಾರ ಗದ್ದಿಗೆಯ ಪ್ರತಿಷ್ಠಾಪನಾ ಮಹೋತ್ಸವ
ಮೈಲಾರಲಿಂಗೇಶ್ವರ ಸ್ವಾಮಿಯ ಶಿಬಾರದ ಪ್ರತಿಷ್ಠಾಪನಾ ಮಹೋತ್ಸವದಲ್ಲಿ ಗೊರವಯ್ಯರು ದೋಣಿಸೇವೆ ನಡೆಸಿದರು.
Team Udayavani, Feb 15, 2021, 3:33 PM IST
ಚಿತ್ರದುರ್ಗ: ನಗರದ ಬುರುಜನಹಟ್ಟಿಯ ಸಿಹಿನೀರು ಹೊಂಡದ ರಸ್ತೆಯಲ್ಲಿ ಶ್ರೀ ಮೈಲಾರಲಿಂಗೇಶ್ವರ ಸ್ವಾಮಿಯ ಶಿಬಾರ ಗದ್ದಿಗೆಯ ಪ್ರತಿಷ್ಠಾಪನಾ ಮಹೋತ್ಸವ ಭಾನುವಾರ ಶ್ರದ್ಧಾಭಕ್ತಿಯಿಂದ ಜರುಗಿತು.
ಗೊರವಯ್ಯರ ಡಮರುಗದ ಸದ್ದಿನೊಂದಿಗೆ ಭಕ್ತರು ಛಾಮರ ಬೀಸುತ್ತಾ ಸ್ವಾಮಿಯನ್ನು ಮೆರವಣಿಗೆ ಮೂಲಕ ಕೊಂಡೊಯ್ದು ಸಿಹಿನೀರು ಹೊಂಡದಲ್ಲಿ ಗಂಗಾಪೂಜೆ ನೆರವೇರಿಸಿದ ಬಳಿಕ ಶಿಬಾರದ ಮಂಟಪದಲ್ಲಿ ಸ್ವಾಮಿಯನ್ನು ಪ್ರತಿಷ್ಠಾಪಿಸಲಾಯಿತು. ಶಿಬಾರದ ಮುಂಭಾಗ ಪ್ರಧಾನ ಅರ್ಚಕ ಹಾಗೂ ಗೊರವಯ್ಯ ರಮೇಶ್ ಬಾಬು ನೇತ್ರತ್ವದಲ್ಲಿ ಸುಮಾರು 70 ರಿಂದ 80 ಗೊರವಯ್ಯರ ಸಮ್ಮುಖದಲ್ಲಿ ಪೂಜಾ ಕೈಂಕರ್ಯಗಳು ಹಾಗೂ ದೋಣಿ ಸೇವೆ ಕಾರ್ಯಕ್ರಮಗಳು ನೆರವೇರಿದವು.
ಬುರುಜನಹಟ್ಟಿಯ ಸಿಹಿನೀರು ಹೊಂಡದ ರಸ್ತೆಯಲ್ಲಿನ ನೂತನವಾಗಿ ಪ್ರತಿಷ್ಠಾಪನೆಗೊಂಡಿರುವ ಶಿಬಾರದ ಶ್ರೀ ಮೈಲಾರಲಿಂಗಸ್ವಾಮಿಗೆ ಪ್ರತಿದಿನ ಬೆಳಗ್ಗೆ ಮತ್ತು ಸಂಜೆ ಪೂಜೆ ನೆರವೇರಲಿದೆ. ಪ್ರತಿ ಭಾನುವಾರ ಹಾಗೂ ಹುಣ್ಣಿಮೆಯಂದು ಗೊರವಯ್ಯರು ಹಾಗೂ ಭಕ್ತರಿಂದ ವಿಶೇಷ ಪೂಜೆ ಹಾಗೂ ದೋಣಿಸೇವೆ ಕಾರ್ಯಕ್ರಮಗಳು ಜರುಗಲಿವೆ ಎಂದು ಪ್ರಧಾನ ಅರ್ಚಕ ಹಾಗೂ ಗೊರವಯ್ಯ ರಮೇಶ್ ಬಾಬು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ