ಭೋವಿ ಸಮಾಜದ ಯುವಕರು ಜಾಗೃತಗೊಳ್ಳಲಿ
Team Udayavani, Apr 3, 2021, 5:03 PM IST
ಚಿತ್ರದುರ್ಗ: ಭೋವಿ ಸಮುದಾಯವೆಂದರೆ ಅನಕ್ಷರಸ್ಥ ಸಮಾಜ ಎನ್ನುವುದು ಇತಿಹಾಸದಲ್ಲಿ ದಾಖಲಾಗಿದೆ.
ಇದು ಮುಂದುವರಿಯಬಾರದು ಎಂಬ ಉದ್ದೇಶದಿಂದ ಈ ರೀತಿಯ ಕ್ರೀಡಾಕೂಟ ಆಯೋಜಿಸಿ ಸಮುದಾಯದ ಯುವಕರನ್ನು ಜಾಗೃತಗಳಿಸಲಾಗುತ್ತಿದೆ ಎಂದು ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ತಿಳಿಸಿದರು.
ನಗರದ ಹಳೆ ಮಾಧ್ಯಮಿಕ ಶಾಲಾ ಆವರಣದಲ್ಲಿ ರಾಜ್ಯಮಟ್ಟದ ಭೋವಿ ಪ್ರೀಮಿಯರ್ ಕ್ರಿಕೆಟ್ ಲೀಗ್ 2021ಕ್ಕೆ ಚಾಲನೆ ನೀಡಿ ಮಾತನಾಡಿದರು. ಕ್ರೀಡೆ ಮೂಲಕ ಯುವಕರನ್ನು ಒಗ್ಗೂಡಿಸುವ ಕೆಲಸ ಮಾಡಲಾಗುತ್ತಿದೆ. ಶ್ರೀಮಠ ಯುವಕರಲ್ಲಿರುವ ಪ್ರತಿಭೆ ಗುರುತಿಸಿ, ಅವರಿಗೆ ಸರಿಯಾದ ಮಾರ್ಗದರ್ಶನ ಮಾಡಿಸುತ್ತಿದೆ. ಉನ್ನತ ಶಿಕ್ಷಣ ಪಡೆಯಲು ಅಗತ್ಯ ನೆರವು, ಉದ್ಯೋಗ ಪಡೆಯಲು ಸಹಕಾರ ಸೇರಿದಂತೆ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ನೆರವಾಗುತ್ತಿದೆ ಎಂದರು.
ಕ್ರೀಡೆ ಎಂದರೆ ಏಕಾಗ್ರತೆ. ಇದು ಕ್ರೀಡಾಪಟು ಹಾಗೂ ವಿದ್ಯಾರ್ಥಿಗಳಿಗೆ ಅತಿ ಮುಖ್ಯವಾಗಿದೆ. ಇದರ ಜತೆಗೆ ಭಾವೈಕ್ಯತೆಯ ಅರಿವು ಮೂಡಿಸಿಕೊಂಡು ಮುಂದೆ ಉತ್ತಮ ಜೀವನ ಕಟ್ಟಿಕೊಳ್ಳಲು ಮುಂದಾಗಬೇಕು ಎಂದು ತಿಳಿಸಿದರು.
ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಮಂಜುನಾಥ ಮಾತನಾಡಿ, ಈ ಮೊದಲು ತುಮಕೂರು ಮತ್ತು ಶಿರಾದಲ್ಲಿ ಕ್ರೀಡಾಕೂಟ ನಡೆಸಿದ್ದು, ಭೋವಿ ಸಮುದಾಯದ ಯುವ ಜನತೆಯನ್ನು ಒಗ್ಗೂಡುವಿಕೆ ಮತ್ತು ಜನಜಾಗೃತಿ ಮೂಡಿಸಲು ನೆರವಾಗಿದೆ. ಕ್ರಿಕೆಟ್ನಲ್ಲಿ ಸುಮಾರು 10 ತಂಡಗಳು ಭಾಗವಹಿಸಿವೆ ಎಂದರು.
ನಗರಸಭಾ ನಾಮ ನಿರ್ದೇಶಿತ ಸದಸ್ಯ ತಿಮ್ಮಣ್ಣ, ಸಂಘಟಕರಾದ ರವಿರಾಜ್, ಶಿಕ್ಷಕ ರವಿ ಸಂಘದ ಕಾರ್ಯದರ್ಶಿ ಲಕ್ಷ್ಮಣ, ಮಂಜಪ್ಪ, ಅಜ್ಜಯ್ಯ, ಉಮೇಶ್, ತಿಮ್ಮೇಶ್, ನಾಗರಾಜು, ರಾಜು, ದೇವರಾಜು ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು
Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ