ಕಾಯಕ ಮಹತ್ವ ಸಾರಿದ ದಾರ್ಶನಿಕ


Team Udayavani, Apr 18, 2021, 5:27 PM IST

18-15

ಚಿತ್ರದುರ್ಗ: ಕಾಯಕದಲ್ಲಿ ದೇವರನ್ನು ಕಂಡು, ಆಧ್ಯಾತ್ಮಿಕ ಚಿಂತನೆ, ಸಾಮಾಜಿಕ ಕಳಕಳಿಯಿಂದ ಉತ್ತಮ ಜೀವನ ನಡೆಸಬಹುದು ಎನ್ನುವುದನ್ನು ಆದ್ಯ ವಚನಕಾರ ದೇವರ ದಾಸಿಮಯ್ಯ ತಮ್ಮ ವಚನಗಳಲ್ಲಿ ತಿಳಿಸಿದ್ದಾರೆ ಎಂದು ಜಿಲ್ಲಾ ಕಾರಿ ಕವಿತಾ ಎಸ್‌. ಮನ್ನಿಕೇರಿ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಜಿಲ್ಲಾಡಳಿತ, ಜಿಪಂ, ನಗರಸಭೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಆಯೋಜಿಸಿದ್ದ ದೇವರ ದಾಸಿಮಯ್ಯ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮನುಕುಲದ ಒಳತಿಗಾಗಿ ಸರಳ ಭಾಷೆಯಲ್ಲಿ ಜನರಿಗೆ ಅರ್ಥವಾಗುವಂತೆ ವಚನಗಳನ್ನು ರಚಿಸಿದ್ದಾರೆ. ಕಾಯಕ ನಿಷ್ಠೆ ಉಳ್ಳವರಾಗಿದ್ದ ದೇವರ ದಾಸಿಮಯ್ಯ ಕಾಯಕದಿಂದ ಬದುಕು ಸಾಗಿಸಬೇಕು ಎನ್ನುವುದನ್ನು ತಿಳಿಸಿಕೊಟ್ಟಿದ್ದಾರೆ ಎಂದರು.

2011-12ರಿಂದ ದೇವರ ದಾಸಿಮಯ್ಯ ಅವರ ಜಯಂತಿಯನ್ನು ಆಚರಣೆ ಮಾಡಲಾಗುತ್ತಿದೆ. ಮೊಟ್ಟ ಮೊದಲ ಬಾರಿಗೆ ದೇವರ ದಾಸಿಮಯ್ಯ ಅವರ ಹುಟ್ಟೂರಾದ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಮುದನೂರು ಗ್ರಾಮದಲ್ಲಿ ಜಯಂತಿ ಆಚರಿಸಲಾಯಿತು. ದೇವರ ದಾಸಿಮಯ್ಯ ಅವರು ಆದ್ಯ ವಚನಕಾರರಾಗಿದ್ದು, ಬಸವಣ್ಣನವರಿಗಿಂತ ಪೂರ್ವದ ವಚನಕಾರರಾಗಿದ್ದಾರೆ. ರಾಮನಾಥ ಎಂಬ ಅಂಕಿತದಲ್ಲಿ ವಚನಗಳನ್ನು ರಚಿಸಿದ್ದಾರೆ ಎಂದು ತಿಳಿಸಿದರು.

ಅಪರ ಜಿಲ್ಲಾ ಧಿಕಾರಿ ಈ. ಬಾಲಕೃಷ್ಣ ಮಾತನಾಡಿ, ದೇವರ ದಾಸಿಮಯ್ಯ ಅವರು 11ನೇ ಶತಮಾನದ ಮೊಟ್ಟ ಮೊದಲ ವಚನಕಾರರು. ದೇವರ ದಾಸಿಮಯ್ಯ ನೇಕಾರ ವೃತ್ತಿಯ ಜೊತೆಗೆ ಆಧ್ಯಾತ್ಮಿಕ ವಿಚಾರಗಳನ್ನು ತಮ್ಮ ವಚನಗಳ ಮೂಲಕ ತಿಳಿಸಿದ್ದಾರೆ. ಕಾಯಕ ವೃತ್ತಿ ಹಾಗೂ ಕಾಯಕ ಶ್ರೇಷ್ಠತೆಯನ್ನು ತಮ್ಮ ವಚನಗಳ ಮೂಲಕ ಸಾರಿದ್ದಾರೆ. ತಮ್ಮ ಕಾಯಕದಲ್ಲಿಯೇ ಶ್ರದ್ಧೆಯಿಂದ ಕೆಲಸ ಮಾಡಿದರೆ ದೇವರನ್ನು ಕಾಣಬಹುದು. ಕಪಟ ಭಕ್ತಿ ಮತ್ತು ತೋರ್ಪಡಿಕೆ ಭಕ್ತಿ ತೋರದೇ ನಿಷ್ಠೆಯಿಂದ ಕಾಯಕ ಮಾಡಿದರೆ ಉತ್ತಮ ಜೀವನ ರೂಪಿಸಿಕೊಳ್ಳಬಹುದು ಎಂದು ವಚನಗಳಲ್ಲಿ ತಿಳಿಸಿದ್ದಾರೆ ಎಂದರು.

ಜಿಲ್ಲಾ ವಾರ್ತಾಧಿ ಕಾರಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ. ಧನಂಜಯ ಮಾತನಾಡಿ, ಬಂಡಿಗೆ ಕೀಲು ಎಷ್ಟು ಮುಖ್ಯವೋ ಜೀವನಕ್ಕೂ ವಚನಗಳು ಅಷ್ಟೇ ಮುಖ್ಯವಾಗಿವೆ. ಸಮಾಜಕ್ಕೆ ಆದರ್ಶ, ಸಿದ್ಧಾಂತ, ಅಡಿಪಾಯವನ್ನು ಹಾಕಿಕೊಟ್ಟ ವಚನಕಾರರನ್ನು ಸ್ಮರಿಸುತ್ತಾ ನಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಜಿಪಂ ಸಿಇಒ ಡಾ| ಕೆ. ನಂದಿನಿದೇವಿ, ನೇಕಾರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಸುರೇಶ್‌, ಕಾರ್ಯದರ್ಶಿ ಎನ್‌. ಆರ್‌. ಶಶಿಧರ, ಉಪಾಧ್ಯಕ್ಷರಾದ ನಾರಾಯಣ್‌ ದೊಡ್ಡಸಿದ್ದವ್ವನಹಳ್ಳಿ, ಎಚ್‌. ತಿಪ್ಪೇಸ್ವಾಮಿ, ಶಕಾಂಬರಿ ಮಹಿಳಾ ಸಂಘದ ಪದಾ ಧಿಕಾರಿಗಳಾದ ಎಚ್‌. ಮಮತಾ, ಟಿ. ಶಿವರುದ್ರಮ್ಮ ಮತ್ತಿತರರು ಇದ್ದರು.

ಟಾಪ್ ನ್ಯೂಸ್

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.