ಅಂಬೇಡ್ಕರ್‌ ವಿಶ್ವ ನಾಯಕ: ಶ್ರೀರಾಮುಲು

ಹಿರಿಯೂರಿನಲ್ಲಿ ಅಂಬೇಡ್ಕರ್‌ ಪ್ರತಿಮೆ ಅನಾವರಣ

Team Udayavani, Jan 27, 2021, 6:26 PM IST

27-38

ಹಿರಿಯೂರು: ದೇಶದಲ್ಲಿನ ಅಸಮಾನತೆ, ಅಸ್ಪೃಶ್ಯತೆ, ಜಾತಿ ವ್ಯವಸ್ಥೆ ನಿರ್ಮೂಲನೆಗೆ ಅಂಬೇಡ್ಕರ್‌ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದಾರೆ, ಅಂಬೇಡ್ಕರ್‌ ಕೇವಲ ದಲಿತರಿಗೆ ಅಷ್ಟೆ ಅಲ್ಲ , ಎಲ್ಲಾ ಸಮುದಾಯಗಳ ನಾಯಕನಾಗಿ, ವಿಶ್ವ ನಾಯಕರಾಗಿದ್ದಾರೆ ಎಂದು ಜಿಲ್ಲಾ ಉಸ್ತವಾರಿ ಸಚಿವ ಶ್ರೀರಾಮುಲು ಹೇಳಿದರು.

ತಾಲೂಕು ಆಡಳಿತದಿಂದ ನಗರದ ಟಿ.ಬಿ. ವೃತ್ತದಲ್ಲಿ ನಿರ್ಮಿಸಿದ ಅಂಬೇಡ್ಕರ್‌ ಪ್ರತಿಮೆ ಅನಾವರಣಗೊಳಿಸಿ ಮಾತನಾಡಿದ ಅವರು, ಸ್ವಾಭಿಮಾನಿ ಅಂಬೇಡ್ಕರ್‌ ಪ್ರತಿಮೆ ಜ.26ರಂದು ಅನಾವರಣಗೊಂಡಿರುವುದು ಅರ್ಥಪೂರ್ಣ. ಜೀವನದಲ್ಲಿ ತಾವು ಕಂಡಂತಹ ಕಷ್ಟಗಳು ಬೇರೆ ಯಾರಿಗೂ ಬರಬಾರದೆಂದು ಹೊರರಾಷ್ಟ್ರದಲ್ಲಿ ಅತ್ಯುನ್ನತ ಶಿಕ್ಷಣ ಪಡೆದು ಸಂವಿಧಾನ, ಕಾನೂನುಗಳನ್ನು ಎಲ್ಲರಿಗೂ ನೀಡಿ ಸಾಮಾಜಕ ನ್ಯಾಯ, ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ದೊರಕಿಸುವಂತೆ ಮೀಸಲಾತಿ, ಕಾನೂನುಗಳನ್ನು ಸಂವಿಧಾನದಲ್ಲಿ ರಚಿಸಿದ್ದಾರೆ
ಎಂದರು.

ಶಾಸಕಿ ಪೂರ್ಣಿಮಾ ಶ್ರೀನಿವಾಸ್‌ ಮಾತನಾಡಿ, ಸ್ವಾತಂತ್ರ ಪೂರ್ವದಲ್ಲಿ ಮಹಿಳೆಯರ ಸ್ಥಿತಿಗತಿಗಳು, ಕಟ್ಟುಪಾಡುಗಳು, ಕೇವಲ ಕುಟುಂಬಕ್ಕಷ್ಟೆ ಮೀಸಲಾಗಿತ್ತು, ಮನೆ ಬಿಟ್ಟು ಹೊರಗೆ ಬರುವಂತೆ ಇರಲಿಲ್ಲ, ಅತ್ಯಂತ ಕಷ್ಟಕರವಾಗಿತ್ತು. ಅಂಬೇಡ್ಕರ್‌ರವರ ಮೀಸಲಾತಿ ಕೊಡುಗೆ ಸಾಮಾಜಿಕ ನ್ಯಾಯದ ಪರಿಕಲ್ಪನೆಯ ಉದ್ದೇಶ ಲಿಂಗಬೇಧ ಇಲ್ಲದೆ ಸರಿಸಮಾನತೆ ಹೊಂದಿ, ಶೇ. 50 ರಷ್ಟು ಮೀಸಲಾತಿ ಪಡೆದು ಸಮಾಜದ ಮುಖ್ಯವಾಹಿನಿಗೆ ಬರುವಂತಾಗಿದೆ ಎಂದರು.

ಜಿಲ್ಲಾ ಕಾಂಗ್ರೆಸ್‌ ಹಿರಿಯ ಮುಖಂಡ ಜಿ.ಎಸ್‌. ಮಂಜುನಾಥ ಮಾತನಾಡಿ, ಒಳ್ಳೆಯ ಕೆಲಸಗಳಿಗೆ ಜಾತಿ, ಧರ್ಮ ಪಕ್ಷ ನೋಡದೆ, ಆ ಕೆಲಸದಲ್ಲಿ ಎಲ್ಲರೂ ಭಾಗವಹಿಸಬೇಕು. ಶಾಸಕಿ ಪೂರ್ಣಿಮಾ ಒಳ್ಳೆಯ ಕೆಲಸ ಮಾಡಿದ್ದಾರೆ. ಎಲ್ಲ ಸಂಘಟನೆಗಳು ಬೆಂಬಲ ನೀಡಬೇಕು ಎಂದರು.
ಕಳೆದ ಮೂವತ್ತು ವರ್ಷಗಳಿಂದ ಮುಚ್ಚಿರುವ ಇಲ್ಲಿನ ಸಕ್ಕರೆ ಕಾರ್ಖಾನೆಯನ್ನು ಆರಂಭಿಸಿ ಈ ಭಾಗದ ಜನರಿಗೆ ಉದ್ಯೋಗ ನೀಡಿ ರೈತರಿಗೆ
ಅನುಕೂಲ ಮಾಡುವಂತೆ ಶಾಸಕರಿಗೆ ಮನವಿ ಮಾಡಿದರು.

ಜಿಪಂ ಸದಸ್ಯರಾದ ರಾಜೇಶ್ವರಿ, ಡಿ.ಟಿ. ಶ್ರೀನಿವಾಸ್‌, ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ಓಂಕಾರಪ್ಪ, ತಾಪಂ ಸದಸ್ಯರಾದ ಯಶವಂತ್‌, ದಲಿತ ಮುಖಂಡರಾದ ಜೆ.ಜೆ, ಹಟ್ಟಿ ತಿಪೇಸ್ವಾಮಿ, ರಂಗಸ್ವಾಮಿ, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಚಿತ್ರಜಿತ್‌ ಯಾದವ್‌, ಎಂ. ಜಗದೀಶ್‌, ನಗರಸಭೆ ಸದಸ್ಯರಾದ ಬಾಲಕೃಷ್ಣ, ಆಲೂರು ಕಾಂತಯ್ಯ, ಎಚ್‌.ತಿಮ್ಮಯ್ಯ, ಜಿ.ಎಲ್‌. ಮೂರ್ತಿ, ಟಿ.ಚಂದ್ರಶೇಖರ್‌, ಭೂತಾಬೋವಿ, ಬಿ.ಕೆ. ಕರಿಯಪ್ಪ, ದಲಿತ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು.

ಓದಿ :  ಕೇಂದ್ರ-ರಾಜ್ಯ ಸರ್ಕಾರಗಳಿಂದ ರೈತರ ಶೋಷಣೆ: ಚನ್ನಬಸಯ್ಯ

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.