ಈ ಬಾರಿಯೂ ಸರಳ ರಾಮನವಮಿ


Team Udayavani, Apr 22, 2021, 6:53 PM IST

22-22

ಚಿತ್ರದುರ್ಗ: ಪ್ರತಿ ವರ್ಷ ಜಿಲ್ಲೆಯ ಹಲವೆಡೆ ಅದ್ದೂರಿಯಾಗಿ ನಡೆಯುತ್ತಿದ್ದ ರಾಮನವಮಿ ಉತ್ಸವ ಕೋವಿಡ್‌ ಕಾರಣಕ್ಕೆ ಎರಡನೇ ವರ್ಷವೂ ಅತ್ಯಂತ ಸರಳವಾಗಿ ನೆರವೇರಿತು. ಕೋವಿಡ್‌ ಎರಡನೇ ಅಲೆಯಿಂದಾಗಿ ಶ್ರೀರಾಮ, ಆಂಜನೇಯ ದೇಗುಲಗಳಲ್ಲೂ ಬುಧವಾರ ಸಡಗರ, ಸಂಭ್ರಮ ಕಾಣಲಿಲ್ಲ. ಭಕ್ತರ ಸಂಖ್ಯೆಯೂ ವಿರಳವಾಗಿತ್ತು. ಆದರೆ ರಾಮಭಕ್ತರ ಮನೆ ಮನಗಳಲ್ಲಿ ರಾಮ ಜಪ ನಡೆಯಿತು. ಶ್ರೀರಾಮ, ಆಂಜನೇಯ ಸ್ವಾಮಿ ದೇವರ ಮೂರ್ತಿಗಳಿಗೆ ಹಲವು ದೇಗುಲಗಳಲ್ಲಿ ಪುಷ್ಪಾಲಂಕಾರ ಸೇವೆ ನೆರವೇರಿತು. ಆದರೆ ಹಿಂದಿನಂತೆ ವಿಶೇಷ ಅಲಂಕಾರ ಇರಲಿಲ್ಲ. ಅರ್ಚಕರು ದೇಗುಲಗಳಲ್ಲಿ ಶಾಸ್ತ್ರೋಕ್ತವಾಗಿ ಪೂಜೆ ಸಲ್ಲಿಸಿದರು.

ಕೆಲ ಭಕ್ತರು ಕುಟುಂಬ ಸಮೇತ ದೇಗುಲಕ್ಕೆ ಭೇಟಿ ನೀಡಿ ಪೂಜೆ, ಪ್ರಾರ್ಥನೆ ಸಲ್ಲಿಸಿದರು. ಹಲವು ದೇಗುಲಗಳಲ್ಲಿ ಮಾತ್ರ ಪ್ರಸಾದವಾಗಿ ಪಾನಕ, ಮಜ್ಜಿಗೆ ವಿತರಿಸಲಾಯಿತು. ಎಲ್ಲಿಯೂ ಅದ್ಧೂರಿ ಮೆರವಣಿಗೆ ನಡೆಯಲಿಲ್ಲ. ಕೆಲವೆಡೆ ಶಾಸ್ತ್ರಕ್ಕಾಗಿ ನಡೆದರೂ ದೇಗುಲ ಸಮಿತಿ ಒಳಗೊಂಡು ಬೆರಳೆಣಿಕೆಯಷ್ಟು ಜನ ಮಾತ್ರ ಸೇರಿದ್ದರು.

ತಗ್ಗಿನ ಆಂಜನೇಯಸ್ವಾಮಿ ದೇಗುಲ ವತಿಯಿಂದ ಸರಳ ಮೆರವಣಿಗೆ ಜರುಗಿತು. ಪ್ರತಿ ವರ್ಷ ವಿಶೇಷವಾಗಿ ಶ್ರೀರಾಮನವಮಿ ಆಚರಿಸಿಕೊಂಡು ಬರುತ್ತಿರುವ ಇಲ್ಲಿನ ಬುರುಜನಹಟ್ಟಿಯ ಕೋಟೆ ಆಂಜನೇಯಸ್ವಾಮಿ ದೇಗುಲದಲ್ಲಿ ಉತ್ಸವದ ಅಂಗವಾಗಿ ಶ್ರೀರಾಮನ ಭಾವಚಿತ್ರ ಹಾಗೂ ಆಂಜನೇಯಸ್ವಾಮಿ ಉತ್ಸವಮೂರ್ತಿಗೆ ಅರ್ಚಕರಿಂದ ಸರಳವಾಗಿ ಪೂಜೆ ನೆರವೇರಿತು. ನೆಹರೂ ನಗರದ 1ನೇ ತಿರುವಿನಲ್ಲಿರುವ ವೀರಾಂಜನೇಯಸ್ವಾಮಿ ದೇಗುಲದಲ್ಲಿ ಬೆಳಿಗ್ಗೆ ಅರ್ಚಕರು ರಾಮದೇವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಹೊಳಲ್ಕೆರೆ ರಸ್ತೆಯ ಬರಗೈರಮ್ಮ ದೇವಿ ದೇಗುಲದ ಆವರಣದಲ್ಲಿರುವ ಬರಗೈರಿ ಆಂಜನೇಯಸ್ವಾಮಿಗೆ ರಾಮನವಮಿ ಅಂಗವಾಗಿ ಅರ್ಚಕರು ಸರಳವಾಗಿ ಅಲಂಕರಿಸಿ, ಪೂಜೆ ಸಲ್ಲಿಸಿದ್ದರು.

ಜೋಗಿಮಟ್ಟಿ ರಸ್ತೆಯಲ್ಲಿ ಸರಳ ಆಚರಣೆ ನಡೆಯಿತು. ರಂಗಯ್ಯನಬಾಗಿಲ ಬಳಿ ಇರುವ ರಾಮಮಂದಿರ, ಆಂಜನೇಯಸ್ವಾಮಿ, ಗಣಪತಿ ದೇಗುಲ, ಜಿಲ್ಲಾ ಕ್ರೀಡಾಂಗಣ ರಸ್ತೆಯಲ್ಲಿರುವ ಆಂಜನೇಯ ಸ್ವಾಮಿ, ಮದಕರಿನಾಯಕ ವೃತ್ತದಲ್ಲಿರುವ ರಕ್ಷಾ ಆಂಜನೇಯಸ್ವಾಮಿ, ಭೋವಿ ಗುರುಪೀಠದ ಸಿದ್ಧರಾಮೇಶ್ವರ ಮಠದ ಆವರಣದಲ್ಲಿರುವ ರಾಮಮಂದಿರ, ಬೆಟ್ಟದ ಆಂಜನೇಯಸ್ವಾಮಿ, ತಮಟಕಲ್ಲಿನಲ್ಲಿ ಇರುವ ಆಂಜನೇಯಸ್ವಾಮಿ, ವಾಸವಿ ವಿದ್ಯಾಸಂಸ್ಥೆ ಹತ್ತಿರವಿರುವ ರಾಮಮಂದಿರ, ಆಂಜನೇಯಸ್ವಾಮಿ, ಆನೆ ಬಾಗಿಲು ಬಳಿಯ ಆಂಜನೇಯ ಸ್ವಾಮಿ ಸೇರಿ ನಗರದ ಹಲವು ದೇಗುಲಗಳಲ್ಲಿ ಅರ್ಚಕರಿಂದ ಪೂಜೆ ಜರುಗಿತು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.