ಬುಡಕಟ್ಟು ಹಿನ್ನೆಲೆ ಜಾತಿ ಎಸ್ಸಿ-ಎಸ್ಟಿ ಮೀಸಲಿಗೆ ಅರ್ಹ: ಪ್ರೊ| ಕೆ.ಎಂ. ಮೈತ್ರಿ
ಉಪ್ಪಾರ ಕುಲಶಾಸ್ತ್ರೀಯ ಅಧ್ಯಯನದಯೋಜನಾ ನಿರ್ದೇಶಕ ಪ್ರೊ| ಕೆ.ಎಂ. ಮೈತ್ರಿ ವಿಚಾರ ಸಂಕಿರಣದಲ್ಲಿ ಮಾತನಾಡಿದರು.
Team Udayavani, Jan 21, 2021, 6:28 PM IST
ಹೊಸದುರ್ಗ: ಬುಡಕಟ್ಟು ಸಂಸ್ಕೃತಿಯ ಹಿನ್ನೆಲೆ ಹೊಂದಿದ ಯಾವುದೇ ಜಾತಿ ಎಸ್ಸಿ-ಎಸ್ಟಿ ಪಂಗಡ ಸೇರಲು ಅರ್ಹವಾಗಲಿದೆ ಎಂದು ಉಪ್ಪಾರ ಕುಲಶಾಸ್ತ್ರೀಯ ಅಧ್ಯಯನದ ಯೋಜನಾ ನಿರ್ದೇಶಕ ಪ್ರೊ| ಕೆ.ಎಂ. ಮೈತ್ರಿ ಹೇಳಿದರು.
ತಾಲೂಕಿನ ಭಗೀರಥ ಮಠದಲ್ಲಿ ಬುಧವಾರ ನಡೆದ ಉಪ್ಪಾರ ಕುಲಶಾಸ್ತ್ರೀಯ ಅಧ್ಯಯನ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು. ಪೂರ್ವಿಕರ ಆರಾಧನೆ, ಸಂಪ್ರದಾಯ, ಬೆಡಗುಗಳು, ವೃತ್ತಿ ಇನ್ನಿತರ ಅಂಶಗಳು ತಪ್ಪಿದಲ್ಲಿ ವರದಿಯಲ್ಲಿ ಸೇರ್ಪಡೆ ಮಾಡಲಾಗುವುದು ಎಂದರು. ಉಪ್ಪಾರ ಸಮುದಾಯವನ್ನು ಎಸ್ಟಿಗೆ ಸೇರ್ಪಡೆ ಮಾಡುವ ವಿಚಾರವಾಗಿ ಕುಲಶಾಸ್ತ್ರೀಯ ಅಧ್ಯಯನ ನಡೆಯುತ್ತಿದೆ. ವರದಿಯಲ್ಲಿ ಯಾವುದಾದರೂ ಅಂಶಗಳು ಬಿಟ್ಟಿದ್ದರೆ ಅಥವಾ ದೋಷಗಳು ಉಂಟಾಗಿದ್ದಲ್ಲಿ ನಮಗೆ ಮಾಹಿತಿ ನೀಡಿ ಸರಿಪಡಿಸುವ ಕೆಲಸವನ್ನು ಉಪ್ಪಾರ ಸಮುದಾಯದವರು ಮಾಡಬೇಕೆಂದರು.
ಇದನ್ನೂ ಓದಿ :ಕನ್ನಡ ಧ್ವಜ ತೆರವಿಗೆ ಮೋರ್ಚಾ
ಭಗೀರಥ ಮಠದ ಡಾ| ಪುರುಷೋತ್ತ ಮಾನಂದಪುರಿ ಸ್ವಾಮೀಜಿ ಮಾತನಾಡಿ, ಎಷ್ಟೇ ಪರಿಣಾಮಕಾರಿಯಾಗಿ ಕುಲಶಾಸ್ತ್ರೀಯ ಅಧ್ಯಯನ ವರದಿ ತಯಾರಿಸಿದರೂ ಸರಕಾರದ ಮೇಲೆ ಒತ್ತಡ ಹಾಕಿದರಷ್ಟೇ ಕೆಲಸ ವಾಗಲು ಸಾಧ್ಯ. ಸಮುದಾಯದ ವಿಚಾರ ಮುನ್ನೆಲೆಗೆ ಬಂದಂತಹ ಸಂದರ್ಭದಲ್ಲಿ ರಾಜಕೀಯ ಮುಖಂಡರು ವೈಯಕ್ತಿಕ ಹಿತಾಸಕ್ತಿಗಳನ್ನು ಬದಿಗೊತ್ತಿ ಸಮುದಾಯದ ಶ್ರೇಯೋಭಿವೃದ್ಧಿಗೆ ಎಂತಹ ತ್ಯಾಗಕ್ಕೂ ಸಿದ್ಧರಾಗಿರಬೇಕು. ಸಮಾಜ ನಮಗೇನು ಮಾಡಿದೆ ಎನ್ನುವುದಕ್ಕಿಂತ ಸಮಾಜಕ್ಕೆ ನಾವೇನು ಕೊಡುಗೆ ನೀಡಿದ್ದೇವೆ ಎಂಬುದು ಮುಖ್ಯ. ಎಸ್ಟಿ ಸೇರ್ಪಡೆಯಿಂದ ಉಪ್ಪಾರ ಸಮಾಜ ಎಲ್ಲಾ ಹಂತಗಳಲ್ಲಿಯೂ ಅಭಿವೃದ್ಧಿ ಹೊಂದಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಉಪ್ಪಾರ ಸಮಾಜ ಎಸ್ಟಿ ಹೋರಾಟ ಸಮಿತಿ ಅಧ್ಯಕ್ಷ ಲಕ್ಷ್ಮಣ ಉಪ್ಪಾರ ಅಧ್ಯಕ್ಷತೆ ವಹಿಸಿದ್ದರು. ಚಿಕ್ಕಮಗಳೂರು ಜಿಲ್ಲಾಧ್ಯಕ್ಷ ನಾಗರಾಜು, ಭಗೀರಥ ಧಾರ್ಮಿಕ ಟ್ರಸ್ಟ್ನ ಭೀಮಪ್ಪ, ಮಧುರೆ ನಟರಾಜ್, ಮಂಜುನಾಥ್, ಮೈಲಾರಪ್ಪ, ಗುರುಮೂರ್ತಿ ಮತ್ತಿತರರು ಇದ್ದರು.
ಇದನ್ನೂ ಓದಿ : ಸಂಧಾನ ಸಭೆ ಯಶಸ್ವಿ : ಅನಿರ್ದಿಷ್ಟ ಧರಣಿ ಹಿಂದಕ್ಕೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ